Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕಳ್ಳರು ನಿನ್ನಲ್ಲಿ ನುಗ್ಗಿದರೆ, ರಾತ್ರಿ ವೇಳೆಯಲ್ಲಿ ಪಂಜುಗಳ್ಳರು ನಿನ್ನ ಮೇಲೆ ಬಿದ್ದರೆ, ಬೇಕಾದಷ್ಟನ್ನು ಮಾತ್ರ ದೋಚಿಕೊಂಡು ಹೋಗುವರಲ್ಲವೇ? ಆಹಾ! ನೀನು ಎಷ್ಟು ಭಂಗಪಟ್ಟಿದ್ದೀ! ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ, ಹಕ್ಕಲನ್ನು ಉಳಿಸುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನ್ನಲ್ಲಿಗೆ ಕಳ್ಳರಾಗಲಿ, ರಾತ್ರಿಯಲ್ಲಿ ಪಂಜುಗಳ್ಳರಾಗಲಿ ಬಂದರೆ ಅವರು ತಮಗೆ ಬೇಕಾದಷ್ಟನ್ನು ಮಾತ್ರ ದೋಚಿಕೊಂಡು ಹೋಗುತ್ತಿದ್ದರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕಳ್ಳರು ನಿನ್ನಲ್ಲಿ ನುಗ್ಗಿದರೆ, ರಾತ್ರಿವೇಳೆಯಲ್ಲಿ ಪಂಜುಗಳ್ಳರು ನಿನ್ನ ಮೇಲೆ ಬಿದ್ದರೆ ಬೇಕಾದಷ್ಟು ಮಾತ್ರ ದೋಚಿಕೊಂಡು ಹೋಗುವರಲ್ಲವೆ. (ಆಹಾ, ನೀನು ಎಷ್ಟೋ ಭಂಗಪಟ್ಟಿದ್ದೀ!) ದ್ರಾಕ್ಷೆಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ ಹಕ್ಕಲನ್ನು ಉಳಿಸುವದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀನು ಸಂಪೂರ್ಣವಾಗಿ ನಾಶವಾಗುವೆ. ಕಳ್ಳರು ನಿನ್ನ ಬಳಿಗೆ ಬರುವರು, ದರೋಡೆಗಾರರು ರಾತ್ರಿವೇಳೆ ಬರುವರು. ಅವರು ತಮಗೆ ಇಷ್ಟಬಂದದ್ದನ್ನೆಲ್ಲಾ ದೋಚುವರು. ನಿನ್ನ ತೋಟದಲ್ಲಿ ಕೆಲಸಗಾರರು ದ್ರಾಕ್ಷೆಯನ್ನು ಕೊಯ್ಯುವಾಗ ಕೆಲವೊಂದನ್ನು ಬಿಟ್ಟುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ನಿನ್ನಲ್ಲಿ ಕಳ್ಳರಾಗಲಿ, ರಾತ್ರಿಯಲ್ಲಿ ಪಂಜುಗಳ್ಳರಾಗಲಿ ಬಂದರೆ ಅವರು ತಮಗೆ ಬೇಕಾದಷ್ಟನ್ನು ಮಾತ್ರ ದೋಚಿಕೊಂಡು ಹೋಗುತ್ತಿದ್ದರಲ್ಲವೆ? ದ್ರಾಕ್ಷಿ ಕೀಳುವವರು ನಿಮ್ಮ ಬಳಿಗೆ ಬಂದರೆ ಸ್ವಲ್ಪ ದ್ರಾಕ್ಷಿಯನ್ನು ಬಿಡುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:5
13 ತಿಳಿವುಗಳ ಹೋಲಿಕೆ  

ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ ಹಕ್ಕಲನ್ನೂ ಉಳಿಸುವುದಿಲ್ಲ; ಕಳ್ಳರು ರಾತ್ರಿವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಹಾಳುಮಾಡುವರು.


ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು; ಅದು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ.


ಆದರೂ ಎಣ್ಣೆಯ ಮರದ ಕಾಯಿಗಳನ್ನು ಉದುರಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ, ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲುಹಣ್ಣುಗಳು ಅದರಲ್ಲಿ ಉಳಿದಿರುವುದು” ಎಂದು ಇಸ್ರಾಯೇಲರ ದೇವರಾದ ಯೆಹೋವನು ನುಡಿಯುತ್ತಾನೆ.


ಈ ನಿನವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಕೊಟ್ಟಿಗೆಯ ಬೀಡಾಗಿದೆ! ಅದರ ಮುಂದೆ ಹಾದುಹೋಗುವವರೆಲ್ಲರು ಸಿಳ್ಳು ಹಾಕಿ ಅಪಹಾಸ್ಯ ಮಾಡುತ್ತಾರೆ.


ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ. ಮಾಗಿದ ಹಣ್ಣನ್ನು ಕೊಯ್ದು, ದ್ರಾಕ್ಷಿಯ ಹಕ್ಕಲನ್ನು ಆಯ್ದ ತೋಟದ ಸ್ಥಿತಿಗೆ ಬಂದಿದ್ದೇನೆ. ತಿನ್ನುವುದಕ್ಕೆ ಗೊಂಚಲೇ ಇಲ್ಲ. ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣು ಸಿಕ್ಕದು.


ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಗುಲಾಮಳಾದಳು.


ಆಹಾ, ಲೋಕವನ್ನೆಲ್ಲಾ ಹೊಡೆದ ಚಮಟಿಗೆಯು ಮುರಿದು ತುಂಡುತುಂಡಾಯಿತು! ಬಾಬೆಲ್ ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ!


ಎಣ್ಣೆಯ ಮರವನ್ನು ಕಡಿದ ಬಳಿಕ, ದ್ರಾಕ್ಷಿಯ ಸುಗ್ಗಿಯು ತೀರಿದ ನಂತರ ಉಳಿದ ಕಾಯಿಗಳ ಹಾಗೆ ಭೂಮಂಡಲದಲ್ಲಿ ಜನಾಂಗಗಳೊಳಗೆ ಉಳಿದಿರುವುದು.


ಆಹಾ, ಉದಯನಕ್ಷತ್ರವೇ, ಉದಯಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ! ಜನಾಂಗಗಳನ್ನು ಸ್ವಾಧೀನಪಡಿಸಿಕೊಂಡ ನೀನು ಭೂಮಿಗೆ ಹೇಗೆ ತಳಲ್ಪಟ್ಟಿದ್ದೀ!


“ಇಸ್ರಾಯೇಲರೇ, ನಿಮ್ಮ ವೈಭವವು ನಿಮ್ಮ ಗುಡ್ಡಗಳಲ್ಲಿ ಮಣ್ಣು ಪಾಲಾಗಿ ಹೋಯಿತು. ಅಯ್ಯೋ ಪರಾಕ್ರಮಶಾಲಿಗಳೇ, ನೀವು ಹೇಗೆ ಹತರಾದಿರಿ.


ಸೇನಾಧೀಶ್ವರನಾದ ಯೆಹೋವನು, ಇಸ್ರಾಯೇಲಿನ ಶೇಷವನ್ನು ದ್ರಾಕ್ಷಿಯ ಹಕ್ಕಲನ್ನೋ ಎಂಬಂತೆ ಆಯಬೇಕು; ದ್ರಾಕ್ಷಿಯ ಹಣ್ಣನ್ನು ಕೀಳುವವನಂತೆ ನೀನು ನಿನ್ನ ಕೈಯನ್ನು ತಿರುಗಿ ರೆಂಬೆಗಳಲ್ಲಿ ಹಾಕು ಎಂದು ಹೇಳುತ್ತಾನೆ.


ತೇಮಾನ್ ಪಟ್ಟಣವೇ, ನಿನ್ನ ಶೂರರು ಧೈರ್ಯಗೆಟ್ಟು ಎಲ್ಲರೂ ಹತರಾಗಿ ಏಸಾವನ ಪರ್ವತದೊಳಗೆ ನಿರ್ಮೂಲರಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು