Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 1:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನದಿಯ ಬದಿಯಲೇ ಬೆಳೆದಿಹ ಮರದಂತೆ I ಸಕಾಲಕೆ ಫಲವೀವ ವೃಕ್ಷದಂತೆ I ಎಲೆಬಾಡದೆ ಪಸಿರಿರುವ ತರುವಂತೆ I ಸಿಗುವುದು ಅವನ ಕಾರ್ಯಗಳಿಗೆ ಸಫಲತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗಿರುವನು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದಲ್ಲಾ; ಅದರ ಎಲೆ ಬಾಡುವದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಆ ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಂಥವರು ನೀರಿನ ಕಾಲುವೆಗಳ ಬಳಿಯಲ್ಲಿ ನೆಟ್ಟಿರುವ, ಮರದ ಹಾಗಿರುವರು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದೆ, ಅದರ ಎಲೆ ಉದುರುವುದೇ ಇಲ್ಲ. ಅದರಂತೆ ಅವರು ಮಾಡುವ ಕಾರ್ಯವೆಲ್ಲವೂ ಸಫಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 1:3
32 ತಿಳಿವುಗಳ ಹೋಲಿಕೆ  

ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ, ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ, ಕ್ಷಾಮದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಅವರು ಸಮಾನವಾಗಿರುವರು.”


ನದಿಯ ಎರಡು ದಡಗಳ ತನಕ ಸಕಲ ಫಲವೃಕ್ಷಗಳು ಬೆಳೆಯುವವು. ಅವುಗಳ ಎಲೆ ಬಾಡುವುದಿಲ್ಲ, ಹಣ್ಣು ತೀರುವುದಿಲ್ಲ; ನದಿಯ ನೀರು ಪವಿತ್ರಾಲಯದಿಂದ ಹೊರಟು ಬರುವ ಕಾರಣ ಅವು ತಿಂಗಳುಗಳ ಪ್ರಕಾರ ಹೊಸ ಫಲವನ್ನು ಫಲಿಸುವವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಉಪಯೋಗವಾಗುವುದು.”


ಮುಪ್ಪಿನಲ್ಲಿಯೂ ಫಲಿಸುವರು; ಪುಷ್ಟಿಯಾಗಿದ್ದು ಶೋಭಿಸುವರು.


ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.


“‘ನಿನ್ನ ಹೆತ್ತ ತಾಯಿ ನೀರಾವರಿಯಲ್ಲಿ ನಾಟಿಕೊಂಡಿದ್ದ ದ್ರಾಕ್ಷಾಲತೆಯಾಗಿದ್ದಳು, ಆ ಲತೆಯು ತುಂಬಾ ನೀರಾವರಿಯಿಂದ ಫಲವತ್ತಾಗಿಯೂ, ಪೊದೆಯಾಗಿಯೂ ಬೆಳೆದಿತ್ತು.


ಯೆಹೋವನು ಅವನ ಸಂಗಡ ಇದ್ದು ಅವನು ನಡಿಸಿದ್ದೆಲ್ಲವನ್ನು ಸಫಲಗೊಳಿಸಿದ್ದರಿಂದ ಅವನ ವಶಕ್ಕೆ ಒಪ್ಪಿಸಿದ್ದ ಯಾವ ವಿಷಯದ ಕುರಿತಾಗಿಯೂ ಸೆರೆಮನೆಯ ಯಜಮಾನನು ಯೋಚಿಸದೆ ನಿಶ್ಚಿಂತನಾಗಿದ್ದನು.


ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು.


ಅದು ಸೊಂಪಾದ ದ್ರಾಕ್ಷಾಲತೆಯಾಗಿ ರೆಂಬೆಗಳನ್ನು ಹರಡಿ ಫಲಕೊಡುವುದಕ್ಕೆ ಅನುಕೂಲವಾದ ಒಳ್ಳೆಯ ನೀರಾವರಿಯ ನೆಲದಲ್ಲಿ ನಾಟಿಕೊಂಡಿತ್ತು.’”


ಆದರೆ ಬಿಸಿಲೇರಿದಾಗ ಬೇರಿಲ್ಲದ ಕಾರಣ ಬಾಡಿ ಒಣಗಿಹೋದವು.


ಅವನು ತನ್ನ ದೇವರ ಒಲುಮೆಯನ್ನು ಪಡೆದುಕೊಳ್ಳುವುದಕ್ಕಾಗಿ ದೇವಾಲಯದ ಸೇವೆ ಮಾಡುವ, ಕಾರ್ಯದಲ್ಲಿಯೂ ಧರ್ಮಶಾಸ್ತ್ರವಿಧಿಗಳ ಸಂಬಂಧದಲ್ಲಿಯೂ, ತಾನು ಪ್ರಾರಂಭಿಸಿದ ಎಲ್ಲಾ ಕಾರ್ಯಗಳನ್ನು ಯಥಾರ್ಥಚಿತ್ತದಿಂದಲೂ ಪ್ರಾಮಾಣಿಕನಾಗಿಯೂ ನಡೆದುಕೊಂಡು ಕೃತಾರ್ಥನಾದನು.


ಯೆಹೋವನು ಯೋಸೇಫನ ಸಂಡಗವಿದ್ದು ಅವನು ಮಾಡುವ ಕೆಲಸವನ್ನೆಲ್ಲಾ ಸಫಲವಾಗುವಂತೆ ಮಾಡುತ್ತಾನೆಂದು ಅವನ ದಣಿಯು ತಿಳಿದನು.


ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, ನೀನು ಧನ್ಯನು, ನಿನಗೆ ಶುಭವಿರುವುದು.


ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.


ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿಯಾಗುವರು.


ಮಳೆ ನೀರಿನ ವಾಸನೆಯಿಂದಲೇ ಅದು ಮೊಳೆತು, ಚಿಗುರಿ ಗಿಡದ ಹಾಗೆ ಕವಲೊಡೆಯುವುದು.


ಫಲಕಾಲ ಹತ್ತಿರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವುದಕ್ಕಾಗಿ ಆ ತೋಟಗಾರರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು,


ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, “ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ” ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.


ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, ನಿಮ್ಮ ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, ಸಂಪೂರ್ಣವಾಗಿ ಸತ್ತ, ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು.


ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ.


ಅವರು ಆತನಿಗೆ, “ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ತಕ್ಕಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ತೋಟಗಾರರಿಗೆ ತನ್ನ ತೋಟವನ್ನು ಗುತ್ತಿಗೆಗೆ ಕೊಡುವನು” ಎಂದು ಹೇಳಿದರು.


ನನ್ನ ಮಗನೇ, ನೀನು ಸಫಲನಾಗಿರುವಂತೆಯೂ, ನಿನ್ನ ದೇವರಾದ ಯೆಹೋವನು ನಿನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟುವಂತೆಯೂ ಆತನು ನಿನ್ನ ಸಂಗಡ ಇರಲಿ.


ಹಾದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ ಎಂದು, ಯೆಹೋವನ ನಾಮದಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ” ಎಂದೂ ಹೇಳುವುದಿಲ್ಲ.


ಅನೇಕರು ಯೆಹೋವನಿಗೋಸ್ಕರ ಕಾಣಿಕೆಗಳನ್ನೂ, ಯೆಹೂದ್ಯರ ಅರಸನಾದ ಹಿಜ್ಕೀಯನಿಗೋಸ್ಕರ ಶ್ರೇಷ್ಠ ವಸ್ತುಗಳನ್ನೂ ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲಾ ಜನಾಂಗಗಳವರು ಹಿಜ್ಕೀಯನನ್ನು ಬಹಳ ದೊಡ್ಡವನೆಂದು ಪರಿಗಣಿಸುತ್ತಿದ್ದರು.


ಅವು ಕಣಿವೆಗಳ ಹಾಗೆಯೇ ವಿಸ್ತರಿಸಿದೆ. ನದಿಯ ಬಳಿಯಲ್ಲಿರುವ ತೋಟಗಳಂತೆಯೂ, ಯೆಹೋವನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿಯಲ್ಲಿರುವ ದೇವದಾರುವೃಕ್ಷಗಳಿಗೂ ಸಮಾನವಾಗಿವೆ.


ನಿಮ್ಮ ಕಣಜಗಳು ಯಾವಾಗಲೂ ತುಂಬಿರುವಂತೆಯೂ ಮತ್ತು ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಶುಭವನ್ನು ಅನುಗ್ರಹಿಸುವನು. ಆತನು ನಿಮಗೆ ಕೊಡುವ ದೇಶದಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವನು.


ಯೆಹೋವನು ಹಿಜ್ಕೀಯನ ಸಂಗಡ ಇದ್ದುದರಿಂದ ಅವನು ಹೋದ ಎಲ್ಲ ಕಡೆ ಅಭಿವೃದ್ಧಿ ಹೊಂದಿದನು. ಇವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ದಂಗೆ ಎದ್ದು ಸ್ವತಂತ್ರನಾದನು.


ಯೆಹೋವನು ಮೋಶೆಯ ಮುಖಾಂತರವಾಗಿ ಇಸ್ರಾಯೇಲರಿಗೆ ಕೊಟ್ಟ ವಿಧಿನ್ಯಾಯಗಳನ್ನು ನೀನು ಕೈಕೊಳ್ಳುವುದಾದರೆ ಸಫಲನಾಗುವಿ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ.


ಯಾವುದನ್ನು ಸಂಕಲ್ಪಿಸಿಕೊಳ್ಳುವಿಯೋ ಅದು ನಿನಗೆ ನೆರವೇರುವುದು, ಬೆಳಕು ನಿನ್ನ ಮಾರ್ಗಗಳಲ್ಲಿ ಪ್ರಕಾಶಿಸುವುದು.


ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು. ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು.


ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡೆಸುತ್ತಾ, ಮರುಭೂಮಿಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ, ನಿಮ್ಮ ಎಲುಬುಗಳನ್ನು ಬಲಗೊಳಿಸುವನು; ನೀವು ತಂಪಾದ ತೋಟಕ್ಕೂ, ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.


ಆದುದರಿಂದ ಆ ವೃಕ್ಷವು ಅಡವಿಯ ಎಲ್ಲಾ ಮರಗಳಿಗಿಂತಲೂ ಎತ್ತರವಾಗಿತ್ತು; ಅದರ ಕೊಂಬೆಗಳು ಹಬ್ಬಿದ್ದುದರಿಂದ ಮತ್ತು ಹೆಚ್ಚಿನ ನೀರಾವರಿಯಿದ್ದ ಕಾರಣ ಅದರ ಕೊಂಬೆಗಳು ಅಧಿಕವಾದವು. ಕೊಂಬೆಗಳು ಉದ್ದವಾಗಿ ಚಾಚಿಕೊಂಡಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು