Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದುಷ್ಟರು ಅಹಂಕಾರದಿಂದ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿ ಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸೊಕ್ಕಿನಿಂದ ಶೋಷಿಸುತಿಹರು ದಲಿತರನು ದುರುಳರು I ಸಿಕ್ಕಿಬೀಳಲಿ ತಾವೇ ಒಡ್ಡಿದ ಉರಿಲಿನೊಳವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದುಷ್ಟರು ಗರ್ವಿಷ್ಠರಾಗಿ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದುಷ್ಟರು ಗರ್ವಿಷ್ಠರಾಗಿ ಬಡವರನ್ನು ಹಿಂದಟ್ಟಿ ಹೋಗುತ್ತಿದ್ದರೆ, ಆ ದುಷ್ಟರ ಕುಯುಕ್ತಿಯಲ್ಲಿ ಅವರು ಸಿಕ್ಕಿಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದುಷ್ಟನು ಗರ್ವದಿಂದ ದೀನನನ್ನು ಬೇಟೆಯಾಡುತ್ತಾನೆ, ಅವನು ಕಲ್ಪಿಸಿದ ಕುಯುಕ್ತಿಗಳಲ್ಲಿ ಅವನೇ ಸಿಕ್ಕಿಬೀಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:2
18 ತಿಳಿವುಗಳ ಹೋಲಿಕೆ  

ಅವರ ಬಾಯಿಂದ ಬರುವುದೆಲ್ಲಾ ಪಾಪದ ಮಾತೇ. ಅವರ ಅಹಂಕಾರದಿಂದಲೇ ಅವರು ಸಿಕ್ಕಿಬೀಳಲಿ.


ಗರ್ವಿಷ್ಠರ ಕಾಲಕೆಳಗೆ ನಮ್ಮನ್ನು ಬೀಳಿಸಬೇಡ; ದುರ್ಜನರಿಂದ ನಾವು ದೇಶಭ್ರಷ್ಟರಾಗದಂತೆ ಮಾಡು.


ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವುದು; ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ತಲೆಯ ಮೇಲೆ ಬೀಳುವುದು.


ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರಮಿಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.


ನಿನ್ನ ಸೇವಕನ ಮೇಲಿಗಾಗಿ ನೀನು ಹೊಣೆಗಾರನಾಗು, ಗರ್ವಿಷ್ಠರು ನನ್ನನ್ನು ಬಾಧಿಸದಿರಲಿ.


ಯಾರು ನೀತಿವಂತರನ್ನು ತಾತ್ಸಾರಮಾಡಿ ಗರ್ವದಿಂದಲೂ, ಕೊಬ್ಬಿನಿಂದಲೂ ಅವರಿಗೆ ವಿರುದ್ಧವಾಗಿ ಸುಳ್ಳು ಹೇಳುತ್ತಾರೋ ಅವರ ತುಟಿಗಳು ಮುಚ್ಚಿಹೋಗಲಿ.


ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ ಉರುಲನ್ನೂ, ಪಾಶಗಳನ್ನೂ ಒಡ್ಡಿದ್ದಾರೆ, ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ, ನನಗಾಗಿ ಬಲೆಬೀಸಿಟ್ಟಿದ್ದಾರೆ. ಸೆಲಾ


ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದ ಗರ್ವಿಷ್ಠರು ನನಗಾಗಿ ಗುಂಡಿಗಳನ್ನು ತೋಡಿದ್ದಾರೆ.


ಗರ್ವಿಷ್ಠರು ನನ್ನ ವಿರುದ್ಧವಾಗಿ ಸುಳ್ಳುಕಲ್ಪಿಸಿದ್ದಾರೆ, ನಾನಾದರೋ ಪೂರ್ಣಮನಸ್ಸಿನಿಂದ ನಿನ್ನ ನಿಯಮಗಳನ್ನು ಕೈಕೊಳ್ಳುವೆನು.


ಆಮೇಲೆ ಹೋಷಾಯನ ಮಗನಾದ ಅಜರ್ಯನೂ, ಕಾರೇಹನ ಮಗನಾದ ಯೋಹಾನಾನನೂ, ಸೊಕ್ಕೇರಿದವರೆಲ್ಲರೂ ಅವನಿಗೆ, “ನಿನ್ನ ಮಾತು ಸುಳ್ಳು, ‘ಐಗುಪ್ತಕ್ಕೆ ಹೋಗಿ ವಾಸಮಾಡಬಾರದು’ ಎಂದು ತಿಳಿಸುವಂತೆ ನಮ್ಮ ದೇವರಾದ ಯೆಹೋವನು ನಿನ್ನನ್ನು ಕಳುಹಿಸಲಿಲ್ಲ.


ನಿನ್ನನ್ನು ನೋಡುವವರು ನಿನ್ನನ್ನು ದಿಟ್ಟಿಸಿ ನೋಡಿ, ಯೋಚಿಸುತ್ತಾ, ‘ಭೂಮಿಯನ್ನು ನಡುಗಿಸಿ, ರಾಜ್ಯಗಳನ್ನು ಕದಲಿಸಿ ಪಟ್ಟಣಗಳನ್ನು ನಾಶಮಾಡಿ,


ನೀನು ನಿನ್ನ ಮನಸ್ಸಿನಲ್ಲಿ, ‘ನಾನು ಆಕಾಶಕ್ಕೆ ಏರಿ, ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಘನತೆಗೇರಿಸಿ, ಉತ್ತರದಿಕ್ಕಿನ ಕಟ್ಟಕಡೆಯಿರುವ ಸಮೂಹ ಪರ್ವತದ ಮೇಲೆ ಆಸೀನನಾಗುವೆನು.


ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವುದರಲ್ಲಿ, ನಾನು ಸ್ಥಿರಮನಸ್ಸುಳ್ಳವನಾಗಿದ್ದರೆ ಒಳ್ಳೇಯದು!


ಯೆಹೋವನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ, ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ” ಅಂದನು.


ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ, ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ?


ಏಕೆಂದರೆ ಅವನು ಕರುಣೆ ತೋರಿಸುವುದನ್ನು ಮರೆತುಬಿಟ್ಟನು, ಬಡವನನ್ನು, ದೀನನನ್ನು, ಮನಗುಂದಿದವನನ್ನು ಹಿಂಸಿಸಿ ಕೊಲ್ಲಬೇಕೆಂದು ಯತ್ನಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು