Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದುಷ್ಟನು ಸೊಕ್ಕಿನ ಮುಖದಿಂದ, “ಯೆಹೋವನು ವಿಚಾರಿಸುವುದಿಲ್ಲ” ಎಂದು ಹೇಳಿಕೊಂಡು, ದೇವರಿಲ್ಲ ಎಂಬುದಾಗಿ ಸದಾ ಯೋಚಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸೊಕ್ಕೇರಿದ ಮುಖದಾತನು ಪ್ರಭುವನು ಅರಸುವುದಿಲ್ಲ I ಅವನ ಮನದೊಳಿದೊಂದೇ ಭಾವನೆ : “ದೇವರೇ ಇಲ್ಲ"! II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ವಿಚಾರಿಸುವದಿಲ್ಲ ಎಂದು ದುಷ್ಟನು ಸೊಕ್ಕಿನ ಮುಖದಿಂದ ಹೇಳಿಕೊಂಡು ದೇವರಿಲ್ಲವೆಂಬದಾಗಿ ಸದಾ ಯೋಚಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ದುಷ್ಟರು ಗರ್ವದಿಂದ ದೇವರನ್ನು ತೊರೆದುಬಿಡುವರು; ದುಷ್ಟಾಲೋಚನೆಗಳನ್ನು ಮಾಡುತ್ತಾ ದೇವರಿಲ್ಲದಂತೆ ವರ್ತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದುಷ್ಟನು ತನ್ನ ಗರ್ವದಲ್ಲಿ ದೇವರನ್ನು ಹುಡುಕುವುದಿಲ್ಲ; ಅವನ ಎಲ್ಲ ಯೋಚನೆಗಳಲ್ಲಿಯೂ ದೇವರಿಗೆ ಸ್ಥಳವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:4
30 ತಿಳಿವುಗಳ ಹೋಲಿಕೆ  

ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.


ಆದುದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ.


ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.


ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.


ನನ್ನನ್ನು ತೊರೆದು, ಮನಸ್ಸು ಬಂದ ಹಾಗೆ ದುರ್ಮಾರ್ಗದಲ್ಲಿ ನಡೆಯುವ ಜನರನ್ನು ನಾನು ದಿನವೆಲ್ಲಾ ಕೈಚಾಚಿ ಕರೆದೆನು.


ದುರ್ಮತಿಗಳು, “ದೇವರಿಲ್ಲ” ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟವರು; ಅಸಹ್ಯವಾದ ಅಕ್ರಮಗಳನ್ನು ನಡೆಸುತ್ತಾರೆ; ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.


ಅವರು ಆತನನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, ಸರ್ವಶಕ್ತನಾದ ದೇವರು ನಮಗೇನು ಮಾಡಾನು’ ಎಂದು ಹೇಳಿಕೊಳ್ಳುತ್ತಿದ್ದರು.


ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ ಒಂದು ವೇಳೆ ನೀವು ಅಹಂಕಾರದಿಂದ ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟೀರಿ.


ಅದಕ್ಕೆ ಫರೋಹನು, “ಯೆಹೋವನೆಂಬುವವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲರನ್ನು ಹೋಗಗೊಡಿಸುವುದೇತಕ್ಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ, ಇಸ್ರಾಯೇಲರನ್ನು ಹೋಗಲು ನಾನು ಬಿಡುವುದೇ ಇಲ್ಲ” ಅಂದನು.


ಅಂದು ನೀವು ಕ್ರಿಸ್ತನಿಂದ ದೂರವಿದವರೂ, ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.


ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ,


ಯೆಹೋವನ ನಿಯಮವನ್ನು ಕೈಕೊಂಡು ನಡೆಯುವ ಲೋಕದ ದೀನರೇ, ನೀವೆಲ್ಲರೂ ಯೆಹೋವನ ನೀತಿಯನ್ನು ಅನುಸರಿಸಿರಿ, ಧರ್ಮವನ್ನು ಅಭ್ಯಾಸಿಸಿರಿ, ನಮ್ರತೆಯನ್ನು ಹೊಂದಿಕೊಳ್ಳಿರಿ; ಬಹುಶಃ ಯೆಹೋವನ ಸಿಟ್ಟಿನ ದಿನದಲ್ಲಿ ನೀವು ಮರೆಯಾಗುವಿರಿ.


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?


ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?


ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ನಷ್ಟವೂ, ನಾಶನವೂ ಉಂಟಾಗುತ್ತವೆ;


ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಮರೆಮಾಡದೇ ಸೊದೋಮಿನವರಂತೆ ಪ್ರಕಟಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.


ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಕಣ್ಣುರೆಪ್ಪೆಗಳನ್ನೆತ್ತಿಕೊಂಡು, ಎಷ್ಟೋ ಮೇಲೆ ಎಷ್ಟೋ ಮೇಲೆ ಮೇಲೆಯೇ ನೋಡುತ್ತಿರುವ ಇನ್ನೊಂದು ತರದವರು ಉಂಟು.


ಹಾಗಾಗದೆ ಹೊಟ್ಟೆತುಂಬಿದವನಾದರೆ, “ಯೆಹೋವನು ಯಾರೋ?” ಎಂದು ನಿನ್ನನ್ನು ತಿರಸ್ಕರಿಸೇನು, ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೆನು.


ಗರ್ವದ ದೃಷ್ಟಿ, ಕೊಬ್ಬಿದ ಹೃದಯ, ದುಷ್ಟರ ಭಾಗ್ಯ, ಇವು ಧರ್ಮವಿರುದ್ಧ.


ಅವು ಯಾವುವೆಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, ನಿರ್ದೋಷಿಗಳ ರಕ್ತವನ್ನು ಸುರಿಸುವ ಕೈ,


ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ.


ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ.


“ನನ್ನ ಸಾನ್ನಿಧ್ಯಕ್ಕೆ ಬಾ” ಎಂಬ ನಿನ್ನ ಮಾತಿಗೆ, ನಾನು, “ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು” ಎಂದು ಉತ್ತರಕೊಟ್ಟೆನು.


ದೀನರನ್ನು ಉದ್ಧರಿಸುವವನೂ, ಗರ್ವದ ಕಣ್ಣುಳ್ಳವರನ್ನು ತಗ್ಗಿಸಿಬಿಡುವವನೂ ನೀನಲ್ಲವೋ?


ಅವರು “ದೇವರು ವಿಚಾರಿಸುವುದೆಲ್ಲಿ? ಪರಾತ್ಪರನಾದ ದೇವರು ಚಿಂತಿಸುವದುಂಟೋ” ಅಂದುಕೊಳ್ಳುತ್ತಾರೆ.


ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೇ ನಡೆಯದಿರುವ ಕಾರಣ ಅಪರಾಧ ಮಾಡಬೇಕೆಂಬ ಯೋಚನೆಯು ಮನುಷ್ಯರ ಹೃದಯದಲ್ಲಿ ತುಂಬಿ ತುಳುಕುವುದು.


ಆ ಕಾಲದಲ್ಲಿ ನಾನು ದೀಪಗಳನ್ನು ಹಿಡಿದು, ಯೆರೂಸಲೇಮನ್ನೆಲ್ಲಾ ಹುಡುಕಿಬಿಡುವೆನು; ಯೆಹೋವನು ಮೇಲನ್ನಾಗಲಿ, ಕೇಡನ್ನಾಗಲಿ ಮಾಡನು ಎಂದು ಮನಸ್ಸಿನೊಳಗೆ ಅಂದುಕೊಳ್ಳುವವರಾಗಿ, ಮಡ್ಡಿಯಂತೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನು ದಂಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು