Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು, “ನಾನು ಕದಲುವುದೇ ಇಲ್ಲ; ನನಗೆ ವಿಪತ್ತು ಎಂದೆಂದಿಗೂ ಸಂಭವಿಸುವುದಿಲ್ಲ” ಅಂದುಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೆನೆವನು ಮನದೊಳು ದುರುಳನಿಂತು: I “ಯಾರಿಗೂ ನನ್ನ ಕದಲಿಸಲಾಗದು I ಬಾರದು ನನಗೆಂದಿಗು ಆಪತ್ತು” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ತಾನು ಕದಲುವದೇ ಇಲ್ಲ; ತನಗೆ ವಿಪತ್ತು ಎಂದೆಂದಿಗೂ ಸಂಭವಿಸುವದಿಲ್ಲ ಅಂದುಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರು, “ನಮ್ಮನ್ನು ಯಾವುದೂ ಕದಲಿಸದು; ನಮಗೆ ಕೇಡಾಗದಿರುವುದರಿಂದ ಸಂತೋಷವಾಗಿರೋಣ” ಎಂದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನು ತನ್ನ ಹೃದಯದಲ್ಲಿ ಹೀಗೆ ಹೇಳುವನು, “ಯಾವುದೂ ಎಂದೂ ನನ್ನನ್ನು ಕದಲಿಸುವುದಿಲ್ಲ.” ಅವನು ಹೀಗೆ ಶಪಥ ಮಾಡುವನು, “ಯಾರೂ ಎಂದಿಗೂ ನನಗೆ ಕೇಡುಮಾಡಲಾರರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:6
11 ತಿಳಿವುಗಳ ಹೋಲಿಕೆ  

ಆದರೆ ಆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು


“ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷ ದಿನವಾಗಿರುವುದು” ಎಂದು ಹರಟೆ ಕೊಚ್ಚಿಕೊಳ್ಳುವರು.


ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೇ ನಡೆಯದಿರುವ ಕಾರಣ ಅಪರಾಧ ಮಾಡಬೇಕೆಂಬ ಯೋಚನೆಯು ಮನುಷ್ಯರ ಹೃದಯದಲ್ಲಿ ತುಂಬಿ ತುಳುಕುವುದು.


ಅವಳು ಎಷ್ಟರ ಮಟ್ಟಿಗೆ ತನ್ನನ್ನು ಘನಪಡಿಸಿಕೊಂಡು ಸುಖಭೋಗವನ್ನು ಅನುಭವಿಸಿದಳೋ ಅದಕ್ಕೆ ತಕ್ಕಂತೆ ನೀವು ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ, ಏಕೆಂದರೆ ಅವಳು ತನ್ನ ಹೃದಯದಲ್ಲಿ, ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಎಂದೆಂದಿಗೂ ಕಾಣುವುದೇ ಇಲ್ಲ’ ಎಂದು ಹೇಳಿಕೊಂಡಿದ್ದಾಳೆ.


“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ, ಮಧ್ಯಪಾನದಲ್ಲೇ ಮತ್ತರಾಗಿ ಮುಳುಗಿಹೋಗಿದ್ದರೂ, ಒಣಗಿದ ಹುಲ್ಲಂತೆ ಬೆಂಕಿಗೆ ತುತ್ತಾಗುವರು.


ನಾನಂತೂ ಸುಖದಿಂದಿದ್ದಾಗ, “ನಾನು ಎಂದಿಗೂ ಕದಲುವುದಿಲ್ಲ” ಎಂದು ಹೇಳಿಕೊಂಡಿದ್ದೆನು.


ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.


ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.


ನಾನು ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ. ನೀವು, “ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ” ಎಂದು ಹೇಳುವುದೇಕೆ?


“ನಾನು ಶಾಶ್ವತವಾದ ರಾಣಿ” ಎಂದು ನೀನು ಅಂದುಕೊಂಡು ಅವರ ಹಿಂಸೆಗಳನ್ನು ಮನಸ್ಸಿಗೆ ತಾರದೆ, ಅವುಗಳಿಂದ ನಿನಗಾಗುವ ಪರಿಣಾಮವನ್ನು ನೆನಸಿಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು