Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಪಾಪಾತ್ಮರು ಭೂಲೋಕದಲ್ಲಿ ಮುಗಿದುಹೋಗಲಿ; ದುಷ್ಟರು ನಿರ್ಮೂಲವಾಗಲಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ಯೆಹೋವನಿಗೆ ಸ್ತೋತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ದಹಿಸಿಹೋಗಲಿ ಧರೆಯಿಂದ ದುಷ್ಟರು I ನಿರ್ಮೂಲವಾಗಲಿ ಸಕಲ ದುರುಳರು I ಪ್ರಭುವನು ನನ್ನ ಮನ ಸ್ತುತಿಸಲಿ I ಪ್ರಭುವಿಗೆ ಸ್ತುತಿಸ್ತೋತ್ರವಾಗಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಪಾಪಾತ್ಮರು ಭೂಲೋಕದಲ್ಲಿ ಮುಗಿದು ಹೋಗಲಿ; ದುಷ್ಟರು ನಿರ್ಮೂಲವಾಗಲಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ಯಾಹುವಿಗೆ ಸ್ತೋತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಪಾಪಾತ್ಮರು ಭೂಮಿಯಿಂದ ಕಾಣದೆಹೋಗಲಿ. ದುಷ್ಟರು ಎಂದೆಂದಿಗೂ ನಿರ್ಮೂಲವಾಗಲಿ. ನನ್ನ ಆತ್ಮವೇ, ಯೆಹೋವನನ್ನು ಸ್ತುತಿಸು! ಯೆಹೋವನನ್ನು ಕೊಂಡಾಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಪಾಪಿಗಳು ಭೂಮಿಯೊಳಗಿಂದ ಮುಗಿದು ಹೋಗಲಿ; ದುಷ್ಟರು ಇಲ್ಲದೆ ಹೋಗಲಿ. ನನ್ನ ಮನವೇ, ಯೆಹೋವ ದೇವರನ್ನು ಸ್ತುತಿಸು. ಯೆಹೋವ ದೇವರಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:35
16 ತಿಳಿವುಗಳ ಹೋಲಿಕೆ  

ಆತನ ರಾಜ್ಯದ ಸರ್ವಸ್ಥಳಗಳಲ್ಲಿರುವ ಎಲ್ಲಾ ಸೃಷ್ಟಿಗಳೇ, ಯೆಹೋವನನ್ನು ಕೊಂಡಾಡಿರಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು.


ದ್ರೋಹಿಗಳೆಲ್ಲರೂ ನಾಶವಾಗುವರು; ದುಷ್ಟರ ಸಂತಾನವು ತೆಗೆದುಹಾಕಲ್ಪಡುವುದು.


ದುಷ್ಟರಾದರೋ ದೇಶದೊಳಗಿಂದ ತೆಗೆದುಹಾಕಲ್ಪಡುವರು, ದ್ರೋಹಿಗಳು ನಿರ್ಮೂಲರಾಗುವರು.


ಇಸ್ರಾಯೇಲ್ ದೇವರಾದ ಯೆಹೋವನಿಗೆ, ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ; ಸರ್ವಜನರೂ “ಆಮೆನ್” ಎನ್ನಲಿ. ಯೆಹೋವನಿಗೆ ಸ್ತೋತ್ರ!


ಅವರು ತನ್ನ ವಿಧಿಗಳನ್ನು ಕೈಕೊಂಡು, ತನ್ನ ಧರ್ಮಶಾಸ್ತ್ರವನ್ನು ಅನುಸರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಯೆಹೋವನಿಗೆ ಸ್ತೋತ್ರ!


ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ, ಪ್ರತಿ ಮುಂಜಾನೆಯಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು.


ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ, ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬುದು, ಭೂಲೋಕದಲ್ಲೆಲ್ಲಾ ಗೊತ್ತಾಗಲಿ. ಸೆಲಾ


ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ.


ಇಗೋ, ನಿನ್ನನ್ನು ಬಿಟ್ಟವರು ನಾಶವಾಗುವರು; ನಿನಗೆ ದ್ರೋಹ ಮಾಡಿದವರೆಲ್ಲರನ್ನು ನಿರ್ಮೂಲ ಮಾಡುತ್ತೀ.


ಯೆಹೋವನ ಎಲ್ಲಾ ಶತ್ರುಗಳೂ ಹೀಗೆಯೇ ನಾಶವಾಗಲಿ. ಆತನನ್ನು ಪ್ರೀತಿಸುವ ಭಕ್ತರು ಪ್ರಕಾಶದಿಂದ ಉದಯಿಸುವ ಸೂರ್ಯನಂತಿರಲಿ.” ಅನಂತರ ದೇಶದಲ್ಲಿ ನಲವತ್ತು ವರ್ಷ ಸಮಾಧಾನವಿತ್ತು.


ನನ್ನ ಮನವೇ, ಯೆಹೋವನನ್ನು ಕೊಂಡಾಡು. ಯೆಹೋವನೇ, ನನ್ನ ದೇವರೇ, ನೀನು ಸರ್ವೋತ್ತಮನು; ಪ್ರಭಾವ ಮತ್ತು ಮಹತ್ವಗಳಿಂದ ಭೂಷಿತನಾಗಿರುವೆ.


ಯೆಹೋವನು ತನ್ನನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾನೆ, ಆದರೆ ಎಲ್ಲಾ ದುಷ್ಟರನ್ನು ಸಂಹರಿಸುತ್ತಾನೆ.


ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭೂಮಿಯನ್ನು ಹಾಳು ಮಾಡಿ, ಪಾಪಿಗಳನ್ನು ನಿರ್ಮೂಲಮಾಡುವುದಕ್ಕೆ ಆತನ ಕೋಪೋದ್ರೇಕದಿಂದಲೂ, ತೀಕ್ಷ್ಣವಾದ ರೋಷದಿಂದಲೂ ಕ್ರೂರವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು