Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅನಂತರ ಆತನು ಐಗುಪ್ತ ದೇಶದಲ್ಲಿ ಕ್ಷಾಮವನ್ನು ಬರಮಾಡಿ, ಆಹಾರವನ್ನು ನಾಶಮಾಡಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ತದನಂತರ ಬರಮಾಡಿದನಾ ನಾಡಿನಲಿ ಕ್ಷಾಮವನು I ಮುರಿದುಬಿಟ್ಟನು ಆಹಾರವೆಂಬಾ ಊರುಗೋಲನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅನಂತರ ಆತನು ದೇಶದಲ್ಲಿ ಕ್ಷಾಮವನ್ನು ಬರಮಾಡಿ ಆಹಾರವೆಂಬ ಊರುಗೋಲನ್ನು ಮುರಿದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದೇವರು ಆ ದೇಶಕ್ಕೆ ಬರಗಾಲವನ್ನು ಬರಮಾಡಿದನು. ಜನರಿಗೆ ತಿನ್ನುವುದಕ್ಕೂ ಸಾಕಷ್ಟು ಆಹಾರವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದೇವರು ಕ್ಷಾಮವನ್ನು ದೇಶದಲ್ಲಿ ಅನುಮತಿಸಿದರು. ಆಹಾರದ ಒದಗುವಿಕೆಯನ್ನು ಸ್ವಲ್ಪಕಾಲ ನಿಲ್ಲಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:16
17 ತಿಳಿವುಗಳ ಹೋಲಿಕೆ  

ಇದಲ್ಲದೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ನಿಲ್ಲಿಸಿಬಿಡುವೆನು. ನಿವಾಸಿಗಳು ಅನ್ನವನ್ನು ತೂಕದ ಪ್ರಕಾರ ಕಳವಳದಿಂದ ತಿನ್ನುವರು, ನೀರನ್ನು ಅಳತೆಯ ಪ್ರಕಾರ ನಡುಗುತ್ತಾ ಕುಡಿಯುವರು.


ಇಗೋ, ಕರ್ತನೂ, ಸೇನಾಧೀಶ್ವರನೂ ಆಗಿರುವ ಯೆಹೋವನೆಂಬ ನಾನು ಯೆರೂಸಲೇಮಿನಿಂದಲೂ, ಯೆಹೂದದಿಂದಲೂ ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವೆನು.


ಯೋಸೇಫನು ಹೇಳಿದ ಪ್ರಕಾರ ಕ್ಷಾಮದ ಏಳು ವರ್ಷಗಳು ಪ್ರಾರಂಭವಾಯಿತು. ಬರವು ಸುತ್ತಲಿರುವ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು. ಐಗುಪ್ತ ದೇಶದಲ್ಲಿ ಮಾತ್ರ ಆಹಾರವಿತ್ತು.


ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಜನರು ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿಸುಟ್ಟು, ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಊಟಮಾಡಿದಾಗ ತೃಪ್ತಿಹೊಂದುವುದಿಲ್ಲ.


“ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರಗಾಲ ಬಂದು ಜನರಿಗೆ ಬಹಳ ಸಂಕಟವಾಯಿತು; ಅಲ್ಲಿ ನಮ್ಮ ಪೂರ್ವಿಕರಿಗೆ ಆಹಾರ ಸಿಕ್ಕಲಿಲ್ಲ.


ಹೃದಯಾನಂದಕರವಾದ ದ್ರಾಕ್ಷಾರಸವನ್ನು, ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು, ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ.


ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಯೆಹೋವನು ಈ ದೇಶಕ್ಕೆ ಏಳು ವರ್ಷಗಳ ಕಾಲ ಕ್ಷಾಮವನ್ನು ಬರಮಾಡುವುದಕ್ಕಿದ್ದಾನೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು” ಎಂದು ಹೇಳಿದನು.


ಬರವು ಬಹು ಘೋರವಾಗಿದ್ದುದರಿಂದ ದೇಶದ ಯಾವ ಭಾಗದಲ್ಲಿಯೂ ಆಹಾರ ಸಿಕ್ಕುತ್ತಿರಲಿಲ್ಲ. ಆ ಬರದ ನಿಮಿತ್ತ ಐಗುಪ್ತ ದೇಶವು ಹಾಗೂ ಕಾನಾನ್‌ ದೇಶವು ಕ್ಷಾಮದಿಂದ ಬರಡಾದವು.


ಆಗ ನಾನು ನೋಡಲು ಇಗೋ, ನಸು ಹಸಿರು ಬಣ್ಣದ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು ಮೃತ್ಯು ಎಂದು. ಮೃತ್ಯುಲೋಕ ಅವನನ್ನು ಹಿಂಬಾಲಿಸುತ್ತಿತ್ತು. ಅವನಿಗೆ ಭೂಮಿಯ ನಾಲ್ಕನೇ ಒಂದು ಭಾಗವನ್ನು ಕತ್ತಿಯಿಂದಲೂ, ಕ್ಷಾಮದಿಂದಲೂ, ಅಂಟುರೋಗದಿಂದಲೂ, ಭೂಮಿಯ ಕಾಡುಮೃಗಗಳಿಂದಲೂ ಕೊಂದುಹಾಕುವುದಕ್ಕೆ ಅಧಿಕಾರ ಕೊಡಲಾಗಿತ್ತು.


ನಾನು ನಿಮ್ಮ ದುಡಿತದ ಫಲವನ್ನೆಲ್ಲಾ ಆನೆಕಲ್ಲು ಮಳೆಯಿಂದಲೂ, ಬಿಸಿಗಾಳಿಗೂ ಹಾಳುಮಾಡಿ ನಿಮ್ಮನ್ನು ಬಾಧಿಸಿದರೂ, ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ” ಇದು ಯೆಹೋವನ ನುಡಿ.


ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?


“ನಿನ್ನ ಕಣ್ಣೆದುರಿಗೆ ನಾವು ಏಕೆ ಸಾಯಬೇಕು; ನಮ್ಮ ಭೂಮಿಯು ಏಕೆ ಹಾಳಾಗಬೇಕು; ನಮ್ಮನ್ನೂ ನಮ್ಮ ಭೂಮಿಯನ್ನೂ ತೆಗೆದುಕೊಂಡು ಧಾನ್ಯವನ್ನು ಕೊಡು; ನಾವು ನಮ್ಮ ಭೂಮಿಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವನಿಗೆ ಗುಲಾಮರಾಗುವೆವು. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂಮಿಯು ಹಾಳಾಗದ ಹಾಗೆ ನೀನು ನಮಗೆ ಬಿತ್ತನೆ ಬೀಜವನ್ನು ಕೊಡಬೇಕು” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು