Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆಯುಳ್ಳವರಾದ್ದರಿಂದ, ಅವರು ಹೊರಟು ಹೋದದ್ದಕ್ಕೆ ಸಂತೋಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಭೀತಿಯಿತ್ತಾ ಈಜಿಪ್ಟರಿಗೆ ಇಸ್ರಯೇಲರ ಬಗ್ಗೆ I ಈ ಕಾರಣ ಆನಂದಿಸಿದರು ಅವರು ಹೋದುದಕ್ಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆಯುಳ್ಳವರಾದ್ದರಿಂದ ಅವರು ಹೊರಟು ಹೋದದಕ್ಕೆ ಸಂತೋಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ದೇವಜನರು ಈಜಿಪ್ಟಿನಿಂದ ಹೊರಟಾಗ ಸಂತೋಷಪಟ್ಟರು; ಯಾಕೆಂದರೆ ಅವರು ದೇವಜನರಿಗೆ ಹೆದರಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಅವರೆಲ್ಲರೂ ಹೊರಗೆ ಹೋಗುವಾಗ ಈಜಿಪ್ಟ್ ದೇಶವು ಸಂತೋಷಿಸಿತು; ಏಕೆಂದರೆ ಈಜಿಪ್ಟಿನವರಿಗೆ ಅವರನ್ನು ಕುರಿತು ಹೆದರಿಕೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:38
6 ತಿಳಿವುಗಳ ಹೋಲಿಕೆ  

ಐಗುಪ್ತರು, “ನಾವೆಲ್ಲರು ಸಾಯುತ್ತೇವೆ” ಎಂದುಕೊಂಡು ಇಸ್ರಾಯೇಲರನ್ನು ತಮ್ಮ ದೇಶದಿಂದ ಬೇಗನೇ ಕಳುಹಿಸಿಬಿಡುವುದಕ್ಕೆ ಅಪೇಕ್ಷೆಪಟ್ಟು ಅವರನ್ನು ಬಲವಂತಮಾಡಿದರು.


ಭಯವೂ, ಹೆದರಿಕೆಯೂ, ಅವರಿಗುಂಟಾಗುವುದು. ನಿನ್ನ ಭುಜಬಲದ ಶಕ್ತಿಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು. ಅಷ್ಟರಲ್ಲಿ ಯೆಹೋವನೇ, ನೀನು ಕಾಪಾಡಿದ ನಿನ್ನ ಪ್ರಜೆಗಳು ದಾಟಿ ಹೋಗಿ ದೇಶವನ್ನು ಸೇರುವರು.


“ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆಂದು ನಾನು ಬಲ್ಲೆನು. ನಿಮ್ಮ ವಿಷಯದಲ್ಲಿ ನಮಗೆ ಮಹಾಭಯವುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.


ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ, ಸುತ್ತಲಿರುವ ಊರುಗಳಲ್ಲಿ ದೇವರ ಭಯವು ಇದ್ದುದರಿಂದ ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.


ಆಗ ಫರೋಹನ ಪರಿವಾರದವರು ಅವನಿಗೆ, “ಈ ಮನುಷ್ಯನು ಇನ್ನು ಎಷ್ಟು ದಿನ ನಮಗೆ ಉರುಲಾಗಿರಬೇಕು. ಆ ಜನರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸುವುದಕ್ಕೆ ಅಪ್ಪಣೆಕೊಡು. ಐಗುಪ್ತ ದೇಶವು ಹಾಳಾಯಿತೆಂದು ಇನ್ನು ನಿನ್ನ ಮನಸ್ಸಿಗೆ ಬರಲಿಲ್ಲವೋ?” ಎಂದು ಹೇಳಿದರು.


ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನ ಉಂಟಾಯಿತು; ಅವರು ಸಂತೋಷದಿಂದಲೂ, ಉಲ್ಲಾಸದಿಂದಲೂ ಭಕ್ಷ್ಯಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು