Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಆತನು ಅವರಿಗೆ ಪರಜನಾಂಗಗಳ ದೇಶವನ್ನು ಕೊಟ್ಟನು; ಅನ್ಯಜನಾಂಗಗಳ ಕಷ್ಟಾರ್ಜಿತವು ಅವರ ಕೈ ಸೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಕೊಟ್ಟನವರಿಗೆ ಅನ್ಯರಾಷ್ಟ್ರಗಳ ನಾಡುಬೀಡನು I ಅವರ ಕೈವಶಮಾಡಿದನು ಅನ್ಯರ ಕಷ್ಟಾರ್ಜಿತವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಮತ್ತು ಆತನು ಅವರಿಗೆ ಪರಜನರ ದೇಶಗಳನ್ನು ಕೊಟ್ಟನು; ಅನ್ಯಜನಾಂಗಗಳ ಕಷ್ಟಾರ್ಜಿತವು ಅವರಿಗೆ ಕೈ ಸೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಅನ್ಯಜನರು ವಾಸವಾಗಿದ್ದ ದೇಶವನ್ನು ದೇವರು ತನ್ನ ಜನರಿಗೆ ಕೊಟ್ಟನು. ಅನ್ಯಜನರು ದುಡಿದು ಸಂಪಾದಿಸಿದ್ದವುಗಳನ್ನು ದೇವಜನರು ಪಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ದೇವರು ಜನಾಂಗಗಳ ದೇಶಗಳನ್ನು ಅವರಿಗೆ ಕೊಟ್ಟರು. ಇಸ್ರಾಯೇಲರು ಇತರರ ಕಷ್ಟಾರ್ಜಿತವನ್ನು ತಮಗಾಗಿ ಸ್ವಾಧೀನಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:44
16 ತಿಳಿವುಗಳ ಹೋಲಿಕೆ  

ಜನಾಂಗಗಳನ್ನು ಅವರ ಮುಂದಿನಿಂದ ಓಡಿಸಿಬಿಟ್ಟು, ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವತ್ತಾಗಿರುವಂತೆ ಹಂಚಿಕೊಟ್ಟು, ಆ ಜನಾಂಗಗಳ ಬಿಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.


ನೀವು ವ್ಯವಸಾಯ ಮಾಡದೆ ಬೆಳೆದಿರುವ ಭೂಮಿಯನ್ನು ನಿಮಗೆ ಕೊಟ್ಟೆನು. ನೀವು ಕಟ್ಟದೆ ಇರುವ ಪಟ್ಟಣಗಳಲ್ಲಿ ವಾಸಿಸುತ್ತಿದ್ದೀರಿ. ನೀವು ನೆಟ್ಟು ಬೆಳೆಸದೆ ಇರುವ ದ್ರಾಕ್ಷಿ, ಎಣ್ಣೆಮರ ಇವುಗಳ ಫಲಗಳನ್ನು ಅನುಭವಿಸುತ್ತೀದ್ದೀರಿ”


ನೀವು ಬಹು ಕಾಲದವರೆಗೆ ಅರಣ್ಯದಲ್ಲಿದ್ದ ನಂತರ ನಿಮ್ಮನ್ನು ಯೊರ್ದನಿನ ಆಚೆಯಲ್ಲಿ ಅಮೋರಿಯರ ದೇಶಕ್ಕೆ ಕರೆತಂದೆನು. ನಿಮ್ಮೊಡನೆ ಯುದ್ಧಕ್ಕೆ ಬಂದ ಅವರನ್ನು ನಿಮ್ಮ ಕೈಗೆ ಕೊಟ್ಟುಬಿಟ್ಟೆನು. ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಂಡಿರಿ. ಅವರನ್ನು ನಿಮ್ಮೆದುರಿನಲ್ಲೇ ಸಂಹರಿಸಿದೆನು.


ಯೆಹೋವನು ಮೋಶೆಯ ಮುಖಾಂತರ ವಾಗ್ದಾನ ಮಾಡಿದ ಪ್ರದೇಶಗಳನ್ನೆಲ್ಲಾ ಯೆಹೋಶುವನು ಸೆರೆ ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಗುಣವಾಗಿ ಅವುಗಳನ್ನು ವಿಭಾಗಿಸಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.


ನೀನು ಐಗುಪ್ತ ದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು, ಜನಾಂಗಗಳನ್ನು ಹೊರಗೆ ಹಾಕಿ, ಅದನ್ನು ನೆಟ್ಟಿದ್ದಿ.


ನಾನು ಯೊರ್ದನಿನಿಂದ ಪಶ್ಚಿಮದ ಸಮುದ್ರದವರೆಗೂ ಇರುವ ಜನಾಂಗಗಳಲ್ಲಿ ಸತ್ತವರ ಮತ್ತು ಉಳಿದಿರುವವರ ದೇಶವನ್ನು ನಿಮಗೆ ಸ್ವತ್ತಾಗಿ ಕೊಟ್ಟಿದ್ದೇನೆ.


ಯೆಹೋವನು ಇಸ್ರಾಯೇಲರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.


ಮರುದಿನದಿಂದ ಆ ದೇಶದ ಧಾನ್ಯವನ್ನು ಊಟಕ್ಕೆ ಉಪಯೋಗಿಸಲು ತೊಡಗಿದರು. ಹೇಗೆಂದರೆ ಅದೇ ಪಸ್ಕಹಬ್ಬದ ದಿನದಲ್ಲಿ ಅವರು ಹುಳಿಯಿಲ್ಲದ ರೊಟ್ಟಿಗಳನ್ನೂ, ಸುಟ್ಟ ತೆನೆಗಳನ್ನೂ ತಿಂದರು.


ಯೆಹೋವನಾದ ನಾನು ನಿಮಗೆ ಬರೆಯಿಸಿ ಕೊಟ್ಟ ಆಜ್ಞಾವಿಧಿಗಳನ್ನು ಧರ್ಮನಿಯಮಗಳನ್ನು ತಪ್ಪದೇ ಕೈಕೊಳ್ಳಬೇಕು. ನೀವು ಅನ್ಯ ದೇವತೆಗಳಿಗೆ ಭಯಪಡಬಾರದು.


ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು