Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಕಾನಾನ್ಯರ ಮೂರ್ತಿಗಳ ಅರ್ಪಣೆಗೋಸ್ಕರ, ತಮ್ಮ ಮಕ್ಕಳ ನಿರಪರಾಧ ರಕ್ತವನ್ನು ಸುರಿಸಿದರು; ಇಂಥ ಕೊಲೆಗಳಿಂದ ದೇಶವನ್ನು ಹೊಲೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಸುರಿಸಿದರು ತಮ್ಮ ಮಕ್ಕಳ ನಿರ್ದೋಷ ರಕ್ತವನು I ಬಲಿಕೊಟ್ಟರು ಕಾನಾನ್ಯರ ವಿಗ್ರಹಗಳಿಗೆ ಅವರನು I ಹೊಲೆಮಾಡಿದರಂಥ ಕೊಲೆಗಳಿಂದ ದೇಶವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಕಾನಾನ್ಯರ ಮೂರ್ತಿಗಳ ಅರ್ಪಣೆಗೋಸ್ಕರ ತಮ್ಮ ಮಕ್ಕಳ ನಿರಪರಾಧರಕ್ತವನ್ನು ಸುರಿಸಿದರು; ಇಂಥ ಕೊಲೆಗಳಿಂದ ದೇಶವನ್ನು ಹೊಲೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ದೇವಜನರು ನಿರಪರಾಧಿಗಳಾದ ತಮ್ಮ ಮಕ್ಕಳ ರಕ್ತವನ್ನು ಆ ಸುಳ್ಳುದೇವರುಗಳಿಗೆ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ, ದೇಶವನ್ನು ರಕ್ತದಿಂದ ಅಶುದ್ಧ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:38
15 ತಿಳಿವುಗಳ ಹೋಲಿಕೆ  

“‘ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇಶವು ಅಪವಿತ್ರವಾಗುವುದಿಲ್ಲ. ರಕ್ತವು ದೇಶವನ್ನು ಅಪವಿತ್ರ ಮಾಡುವುದು. ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.


ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪ ಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂಮಿಯು ತನ್ನಲ್ಲಿ ಇಂಗಿದ್ದ ರಕ್ತವನ್ನು ಪ್ರಕಟಮಾಡುವುದು, ತನ್ನ ನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಡುವುದಿಲ್ಲ.”


ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಲು ಪ್ರೇರೇಪಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧಿಗಳ ರಕ್ತದಿಂದ ತುಂಬಿಸಿದನು.


ಆಗ ಆ ರಕ್ತಾಪರಾಧವು ಕ್ಷಮಿಸಲ್ಪಡುವುದು. ಹೀಗೆ ಯೆಹೋವನ ದೃಷ್ಟಿಯಲ್ಲಿ ಸರಿಯಾದುದನ್ನು ಮಾಡುವುದರಿಂದ ನೀವೇ ಅನ್ಯಾಯವಾದ ನರಹತ್ಯದೋಷವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕುವಿರಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿನ್ನ ಮಧ್ಯದಲ್ಲಿ ರಕ್ತವನ್ನು ಸುರಿಸಿ, ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ನಗರಿಯೇ! ನಿನ್ನ ಕೇಡಿಗಾಗಿ ವಿಗ್ರಹಗಳನ್ನು ಮಾಡಿಕೊಂಡು ನಿನ್ನನ್ನು ಹೊಲೆಗೆಡಿಸಿಕೊಂಡ ನಗರಿಯೇ!


ಒಂದು ಸರಪಣಿಯನ್ನು ಮಾಡು; ಏಕೆಂದರೆ ದೇಶವು ನರಹತ್ಯಭರಿತವಾಗಿದೆ, ಪಟ್ಟಣವು ಹಿಂಸೆಯಿಂದ ತುಂಬಿಹೋಗಿದೆ.


ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವುದನ್ನು ಕಂಡೆನು ಎಂದು ನೀವು ನೆವ ಹೇಳುವಂತಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ ನಿನ್ನನ್ನು ದಂಡಿಸುವೆನು.


ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.


ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ಅವುಗಳಿಗಾಗಿ ಯೆಹೋವನು ಯೆರೂಸಲೇಮಿನವರನ್ನು ಕ್ಷಮಿಸದೆ ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದರಿಂದ ಅವರಿಗೆ ಶಿಕ್ಷೆಯಾಯಿತು. ಇದು ಯೆಹೋವನ ಅಪ್ಪಣೆಯ ಪ್ರಕಾರ ನಡೆಯಿತು.


“‘ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು.


ಅವರ ದೇಶವು ಅಶುದ್ಧವಾಗಿ ಹೋದುದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ; ಆ ದೇಶವು ತನ್ನಲ್ಲಿ ವಾಸಿಸುತ್ತಿದ ಜನರನ್ನು ತ್ಯಜಿಸಿತು.


ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿ ಕೊಟ್ಟರು. ಯೆಹೋವನ ದೃಷ್ಟಿಯಲ್ಲಿ ನೀಚಕೃತ್ಯಗಳಾಗಿರುವ ಕಣಿಹೇಳುವುದು, ಮಾಟ ಮಂತ್ರಗಳನ್ನು ಮಾಡುವುದು ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನು ತೊಡಗಿಸಿಕೊಂಡು, ಯೆಹೋವನಿಗೆ ಕೋಪವನ್ನೆಬ್ಬಿಸಿದರು.


“‘ಈ ಜನರು ನನ್ನನ್ನು ತೊರೆದು ತಮಗಾಗಲಿ, ತಮ್ಮ ಪೂರ್ವಿಕರಿಗಾಗಲಿ ಅಥವಾ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ, ಈ ಸ್ಥಳವನ್ನು ಅನ್ಯಸ್ಥಾನವನ್ನಾಗಿ ಮಾಡಿದ್ದಾರೆ.


“ಇದಲ್ಲದೆ ನೀನು ನನಗೆ ಹೆತ್ತ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಆಹಾರವಾಗಲೆಂದು ಯಜ್ಞಮಾಡಿದೆ. ನಿನ್ನ ವ್ಯಭಿಚಾರವು ಅಲ್ಪಕಾರ್ಯವೆಂದು ಭಾವಿಸಿದಿಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು