Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನು ಅವರನ್ನು ಕಷ್ಟಗಳಿಂದ ಕುಗ್ಗಿಸಿದನು; ನಿರಾಶ್ರಯರಾಗಿ ಬಿದ್ದುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕರಗಿತ್ತವರ ಹೃದಯ ಕಡುಕಷ್ಟದಿಂದ I ಎಡವಿ ಬಿದ್ದಿದ್ದರು ಅಸಹಾಯತೆಯಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆತನು ಅವರನ್ನು ಕಷ್ಟಗಳಿಂದ ಕುಗ್ಗಿಸಿದನು; ನಿರಾಶ್ರಯರಾಗಿ ಬಿದ್ದುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರ ಕಾರ್ಯಗಳ ನಿಮಿತ್ತವೇ ದೇವರು ಅವರ ಜೀವನವನ್ನು ಸಂಕಷ್ಟಕ್ಕೆ ಒಳಪಡಿಸಿದನು. ಅವರು ಎಡವಿಬಿದ್ದರು, ಅವರಿಗೆ ಸಹಾಯಮಾಡಲು ಯಾರೂ ಇರಲಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೇವರು ಅವರ ಹೃದಯವನ್ನು ಕಷ್ಟದಿಂದ ತಗ್ಗಿಸಿದಾಗ ಸಹಾಯಕನಿಲ್ಲದೆ ಕೆಳಗೆ ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:12
19 ತಿಳಿವುಗಳ ಹೋಲಿಕೆ  

ನನಗೀಗ ಕಷ್ಟವು ಪ್ರಾಪ್ತವಾಗಿದೆ; ಸಹಾಯಕರು ಯಾರೂ ಇಲ್ಲ, ದೂರವಾಗಿರಬೇಡ.


ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.


ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು. ಅವರು ನಿನಗೆ, ‘ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು’ ಎಂದು ಹೇಳಲು, ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ, ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡೆಯಲ್ಲಾ.”


ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ, ಯಾವ ಬೆಂಬಲವೂ ಇಲ್ಲದ್ದನ್ನು ಕಂಡು ಸ್ತಬ್ಧನಾದೆನು; ಆಗ ನನ್ನ ಸ್ವಹಸ್ತವೇ ನನಗೆ ರಕ್ಷಣಾಸಾಧನವಾಯಿತು, ನನ್ನ ರೌದ್ರವೇ ನನಗೆ ಆಧಾರವಾಯಿತು.


ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಸೆರೆತೆಗೆದುಕೊಂಡು ಹೋಗಿರುವಾಗ ನಾನು ಇಲ್ಲಿ ಸುಮ್ಮನಿರುವುದು ಹೇಗೆ? ನನ್ನ ಪ್ರಜೆಯನ್ನು ಆಳುವವರು ರೌದ್ರದಿಂದ ಅರಚುತ್ತಾರೆ. ನನ್ನ ನಾಮವು ದಿನವೆಲ್ಲಾ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ.


ದೇವರು ತನ್ನ ಸಿಟ್ಟನ್ನು ತೊಲಗಿಸಿಬಿಡುವುದಿಲ್ಲ; ರಾಹಾಬನ ಸಹಾಯಕರು ಆತನಿಗೆ ಅಡ್ಡಬಿದ್ದರಲ್ಲಾ.


ನಮ್ಮ ಪಾಪಗಳ ನಿಮಿತ್ತವಾಗಿ ನಿನ್ನಿಂದ ನಮ್ಮ ಮೇಲೆ ನೇಮಿಸಲ್ಪಟ್ಟ ರಾಜರಿಗೆ ಈ ದೇಶದ ಹೇರಳವಾದ ಹುಟ್ಟುವಳಿಯು ಹೋಗುತ್ತಾ ಇದೆ. ದೈಹಿಕವಾಗಿ ನಮ್ಮ ಮೇಲೆ ಹಾಗೂ ನಮ್ಮ ಪಶುಗಳ ಮೇಲೆ ಅವರು ಮನಸ್ಸಿಗೆ ಬಂದಂತೆ ಅಧಿಕಾರ ನಡಿಸುತ್ತಿದ್ದಾರೆ. ನಾವು ಮಹಾಸಂಕಟದಲ್ಲಿದ್ದೇವೆ” ಎಂದು ಪ್ರಾರ್ಥಿಸಿದರು.


ಅವನು ಅವರೊಡನೆ ಮಾತನಾಡುತ್ತಿರುವಾಗಲೇ, ಸೇವಕನು ಅರಸನೊಂದಿಗೆ ಬಂದನು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು, ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು” ಎಂದನು.


“ನಾನೂ ಫಿಲಿಷ್ಟಿಯರ ಸಂಗಡ ಸಾಯುವೆನು” ಎಂದು ಹೇಳಿ ಬಲವಾಗಿ ಬಾಗಿಕೊಂಡನು. ಆಗ ಅ ಕಟ್ಟಡವು ಅಧಿಪತಿಗಳ ಮೇಲೆಯೂ ಅಲ್ಲಿ ಬಂದಿದ್ದ ಎಲ್ಲಾ ಜನರ ಮೇಲೆಯೂ ಬಿದ್ದಿತು. ಅವನು ಜೀವದಿಂದಿದ್ದಾಗ ಕೊಂದುಹಾಕಿದವರಿಗಿಂತ ಸಾಯುವಾಗ ಕೊಂದವರ ಸಂಖ್ಯೆಯೇ ಹೆಚ್ಚಾಗಿತ್ತು.


ನಾನು ನನ್ನ ಬಲಗಡೆಗೆ ನೋಡಲು, ಅಲ್ಲಿ ಸಹಾಯಕರು ಯಾರೂ ಇಲ್ಲ, ಆಶ್ರಯವೂ ನಾಶವಾಯಿತು, ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.


ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಹಿಟ್ಟನ್ನು ಬೀಸುವುದಕ್ಕೆ ಇರಿಸಿದರು.


ಇಸ್ರಾಯೇಲರು ಯೆಹೋವನಿಗೆ ಅವಿಧೇಯರಾಗಿ ಘೋರಕಷ್ಟವನ್ನು ಅನುಭವಿಸುತ್ತಿದ್ದರು. ಅವರಲ್ಲಿ ಸ್ವತಂತ್ರರೂ, ಪರತಂತ್ರರೂ ನಾಶವಾಗುತ್ತಿದ್ದರೆ, ಅವರನ್ನು ರಕ್ಷಿಸುವವನು ಒಬ್ಬನೂ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು