Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಹೊಲಗಳನ್ನು ಬಿತ್ತಿ, ದ್ರಾಕ್ಷಾಲತೆಗಳನ್ನು ನೆಟ್ಟು, ಆದಾಯವನ್ನು ಕೂಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಉತ್ತು ಬಿತ್ತಿದರು, ನೆಟ್ಟರು ದ್ರಾಕ್ಷಾಲತೆಯನು I ಕೂಡಿಸಿಕೊಂಡರು ಅಧಿಕವಾದ ಆದಾಯವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಹೊಲಗಳನ್ನು ಬಿತ್ತಿ ದ್ರಾಕ್ಷಾಲತೆಗಳನ್ನು ನೆಟ್ಟು ಆದಾಯವನ್ನು ಕೂಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಅವರು ಹೊಲಗಳಲ್ಲಿ ಬೀಜ ಬಿತ್ತಿ ತೋಟಗಳಲ್ಲಿ ದ್ರಾಕ್ಷಾಲತೆಗಳನ್ನು ನೆಟ್ಟು ಒಳ್ಳೆಯ ಸುಗ್ಗಿಗಳನ್ನು ಪಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಅವರು ಹೊಲಗಳನ್ನು ಬಿತ್ತಿ, ದ್ರಾಕ್ಷಿಯ ಬಳ್ಳಿಗಳನ್ನು ನೆಟ್ಟರು; ಅವು ಹುಟ್ಟುವಳಿಯ ಫಲವನ್ನು ಕೊಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:37
16 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ನೆಡುವವನಾಗಲಿ, ನೀರುಹೊಯ್ಯುವವನಾಗಲಿ ಮುಖ್ಯವಾದವನಲ್ಲ. ಬೆಳೆಸುವ ದೇವರೇ ಪ್ರಾಮುಖ್ಯವಾದಾತನು.


ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.


“ನೆಮ್ಮದಿಯ ಬೆಳೆಯಾಗುವುದು; ದ್ರಾಕ್ಷಾಲತೆಯು ಹಣ್ಣುಬಿಡುವುದು, ಭೂಮಿಯು ಧಾನ್ಯವನ್ನೀಯುವುದು, ಆಕಾಶವು ಇಬ್ಬನಿಯನ್ನು ಸುರಿಸುವುದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.


ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಅವುಗಳ ಫಲವನ್ನು ಅನುಭವಿಸಿರಿ.


ಈ ಮಾತುಗಳು ನೆರವೇರುವುದು ಎಂಬುದಕ್ಕೆ, ನೀವು ಈ ವರ್ಷದಲ್ಲಿ ಕೂಳೆಬೆಳೆಯನ್ನೂ, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ, ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.


ಅಲ್ಲಿ ನಿರ್ಭಯವಾಗಿ ವಾಸಿಸುವರು, ಮನೆಗಳನ್ನು ಕಟ್ಟಿಕೊಂಡು, ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಆಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ನಿರ್ಭಯವಾಗಿ ವಾಸಿಸುವರು. ಆಗ ಯೆಹೋವನಾದ ನಾನೇ ಅವರ ದೇವರು ಎಂದು ಅವರಿಗೆ ನಿಶ್ಚಯವಾಗುವುದು.’”


ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರ್ಷದಲ್ಲಿ ನೂರರಷ್ಟು ಬೆಳೆಯನ್ನು ಕೊಯ್ದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು;


ಆದರೆ ದೇವರು ತನ್ನ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಮೂಲಕ ಸಾಕ್ಷಿ ನೀಡುತ್ತಲೇ ಬಂದಿದ್ದಾನೆ; ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ, ಸುಗ್ಗಿಕಾಲಗಳನ್ನೂ ದಯಪಾಲಿಸಿ, ಆಹಾರ ಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ, ಉಪಕಾರಮಾಡುತ್ತಾ ಬಂದವನು ಆತನೇ” ಎಂದು ಹೇಳಿದರು.


ನೀನು ತಿರುಗಿ ಸಮಾರ್ಯದ ಗುಡ್ಡಗಳಲ್ಲಿ ದ್ರಾಕ್ಷಿತೋಟಗಳನ್ನು ಮಾಡಿಕೊಳ್ಳುವಿ; ನೆಡುವವರು ನೆಟ್ಟು ಫಲವನ್ನು ಅನುಭವಿಸುವರು.


ಅಲ್ಲಿನ ಜನರು ತಾವು ಕಟ್ಟಿದ ಮನೆಗಳಲ್ಲಿ ತಾವೇ ವಾಸಿಸುವರು, ತಾವು ಮಾಡಿದ ದ್ರಾಕ್ಷಿಯ ತೋಟಗಳ ಫಲವನ್ನು ತಾವೇ ಅನುಭವಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು