Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ, ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಪರ್ಯಾಲೋಚಿಸಲಿವುಗಳನು ಬುದ್ಧಿವಂತರು I ಗ್ರಹಿಸಲಿ ಪ್ರಭುವಿನಚಲ ಪ್ರೀತಿಯನಾ ಜನರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಜ್ಞಾನಿಯು ಇವುಗಳನ್ನು ನೆನಪು ಮಾಡಿಕೊಂಡು ದೇವರ ನಿಜಪ್ರೀತಿಯನ್ನು ಅರ್ಥಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಜ್ಞಾನಿಗಳು ಇವುಗಳನ್ನು ಗಮನಿಸಲಿ, ಯೆಹೋವ ದೇವರ ಪ್ರೀತಿಕೃತ್ಯಗಳನ್ನು ಗ್ರಹಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:43
12 ತಿಳಿವುಗಳ ಹೋಲಿಕೆ  

ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.


ಯಾರೂ ದಾಟದ ಹಾಗೆ ದೇಶವು ಹಾಳಾಗಿ ಕಾಡಿನಂತೆ ಸುಟ್ಟು ಹೋದದ್ದು ಏಕೆ? ಈ ವಿಚಾರವನ್ನು ಗ್ರಹಿಸತಕ್ಕ ಜ್ಞಾನಿಯು ಯಾರು? ಅದನ್ನು ಯೆಹೋವನ ಬಾಯಿಂದಲೇ ಕೇಳಿ ತಿಳಿಸಬಲ್ಲವನು ಯಾರು?


ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ, ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು.


ಆ ಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ, ನೀನು ದೈವಸಂಕಲ್ಪವನ್ನು ವಿಮರ್ಶಿಸುವುದಕ್ಕೂ, ನಿನ್ನನ್ನು ನಿನ್ನ ದೇವರ ಮುಂದೆ ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ವಿಜ್ಞಾಪನೆಯು ದೇವರಿಗೆ ಮುಟ್ಟಿತು; ಆ ವಿಜ್ಞಾಪನೆಯ ನಿಮಿತ್ತವೇ ನಾನು ಬಂದೆನು.


ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು, ನಾನು ಲೋಕದಲ್ಲಿ ಪ್ರೀತಿ, ನೀತಿ ಮತ್ತು ನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬುವುದಕ್ಕೇ ಹೆಚ್ಚಳಪಡಲಿ; ಪ್ರೀತಿ, ನೀತಿ ಮತ್ತು ನ್ಯಾಯಗಳೇ ನನಗೆ ಆನಂದ” ಎಂದು ಯೆಹೋವನು ನುಡಿಯುತ್ತಾನೆ.


ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”


ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.


ಅವರು ಯೆಹೋವನ ಕಾರ್ಯಗಳನ್ನೂ ಮತ್ತು ಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು; ಆದುದರಿಂದ ಆತನು ಅವರನ್ನು ಹಾಳುಮಾಡುವನೇ ಹೊರತು ವೃದ್ಧಿಪಡಿಸುವುದಿಲ್ಲ.


ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ, ಇವನ ಕಿವಿ ತೆರೆದಿದ್ದರೂ ಕೇಳನು.


ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ.


ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು; ದುಷ್ಟರು ದುಷ್ಟರಾಗಿಯೇ ನಡೆಯುವರು, ಅವರಲ್ಲಿ ಯಾರಿಗೂ ವಿವೇಕವಿರದು; ಜ್ಞಾನಿಗಳಿಗೆ ವಿವೇಕವಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು