Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನ ಸಂತತಿಯು ನಿರ್ಮೂಲವಾಗಲಿ; ಎರಡನೆಯ ತಲೆಯಲ್ಲಿಯೇ ಅದು ನಿರ್ನಾಮವಾಗಿ ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿರ್ಮೂಲವಾಗಲಿ ಅವನಾ ಪೀಳಿಗೆ I ನಿರ್ನಾಮವಾಗಲಿ ಮರುವಂಶದೊಳಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವನ ಸಂತತಿಯು ನಿರ್ಮೂಲವಾಗಲಿ. ಎರಡನೆಯ ತಲೆಯಲ್ಲಿಯೇ ಅದು ನಿರ್ನಾಮವಾಗಿ ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವನನ್ನು ಸಂಪೂರ್ಣವಾಗಿ ನಾಶಮಾಡು. ಮುಂದಿನ ತಲೆಮಾರಿನಲ್ಲಿಯೇ ಅವನ ಹೆಸರು ಇಲ್ಲವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವನ ಸಂತಾನವು ಮುಗಿದು ಹೋಗಲಿ; ಎರಡನೆಯ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:13
17 ತಿಳಿವುಗಳ ಹೋಲಿಕೆ  

ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ, ದುಷ್ಟರ ನಾಮವು ನಿರ್ನಾಮಕಾಸ್ಪದ.


ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.


ಅವನಿಗೆ ಸ್ವಜನರಲ್ಲಿ ಮಗನಾಗಲಿ, ಮೊಮ್ಮಗನಾಗಲಿ ಇರುವುದಿಲ್ಲ. ಅವನು ವಾಸಿಸುವ ಸ್ಥಳದಲ್ಲಿ ಯಾರೂ ಉಳಿಯುವುದಿಲ್ಲ.


ಯೆಹೋವನು, “ಇವನನ್ನು ಮಕ್ಕಳಿಲ್ಲದವನು, ವ್ಯರ್ಥಜನ್ಮದವನು ಎಂದು ಪಟ್ಟಿಯಲ್ಲಿ ಬರೆಯಿರಿ; ಇವನ ಸಂತಾನದಲ್ಲಿ ಇನ್ನು ಮೇಲೆ ಯಾರೂ ದಾವೀದನ ಸಿಂಹಾಸನದಲ್ಲಿ ಕುಳಿತು ಯೆಹೂದವನ್ನು ಆಳಿ ಬಾಳನು” ಎಂದು ಹೇಳುತ್ತಾನೆ.


ನೀನು ಅವರನ್ನು ಸಂಹರಿಸಿ, ಭೂಮಿಯ ಮೇಲೆ ಅವರ ಸಂತತಿಯೇ ಇಲ್ಲದಂತೆ ಮಾಡುವಿ; ಅವರ ವಂಶದವರು ಮನುಷ್ಯರೊಳಗೆ ಉಳಿಯುವುದೇ ಇಲ್ಲ.


ಅವನ ಮಕ್ಕಳು ಶಾಪಗ್ರಸ್ತರಾದರೆಂದು ಅವನಿಗೆ ತಿಳಿದು ಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿಮಿತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.


ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು.


ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು.


ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಭೂಮಿಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾ ಬಲಿಷ್ಠ ಜನಾಂಗವು ನಿನ್ನಿಂದುಂಟಾಗುವಂತೆ ಮಾಡುವೆನು” ಎಂದು ಹೇಳಿದನು.


ನಮ್ಮ ತಂದೆಗೆ ಗಂಡು ಮಗನಿಲ್ಲದ ಕಾರಣದಿಂದ ಅವನ ಹೆಸರು ಕುಲದಿಂದ ತೆಗೆದು ಹಾಕುವುದು ನ್ಯಾಯವೋ? ತಂದೆಯ ಕುಲದವರೊಂದಿಗೆ ನಮಗೂ ಸ್ವತ್ತನ್ನು ಕೊಡಬೇಕು” ಎಂದು ಕೇಳಿಕೊಂಡರು.


ಅವನು ಸಿಂಹಾಸನದ ಮೇಲೆ ಕುಳಿತು ಆಳತೊಡಗಿದ ಕೂಡಲೇ ಬಾಷನ ಮನೆಯವರನ್ನೂ ಅವನ ಬಂಧು ಮಿತ್ರರನ್ನೂ ಸಂಹರಿಸಿದನು. ಅವರಲ್ಲಿ ಒಬ್ಬ ಗಂಡಸನ್ನೂ ಉಳಿಸಲಿಲ್ಲ.


ಇವರು ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಮಕ್ಕಳು. ಇಷ್ಟು ಜನರನ್ನು ಕೊಂದರೂ ಯೆಹೂದ್ಯರು ಸುಲಿಗೆಗೆ ಕೈಹಾಕಲಿಲ್ಲ.


ಅವನ ಸ್ಮರಣೆಯು ಭೂಮಿಯಲ್ಲಿ ಅಳಿದುಹೋಗುವುದು, ಅವನ ಹೆಸರು ಹೊರಗಣ ಪ್ರಾಂತ್ಯಗಳಲ್ಲಿಯೂ ಇರುವುದಿಲ್ಲ.


ಅವರು ತಂತ್ರೋಪಾಯಗಳನ್ನು ಕಲ್ಪಿಸಿ, ನಿನಗೆ ಕೇಡನ್ನು ಮಾಡಬೇಕೆಂದು ಆಲೋಚಿಸಿದರೂ ಅದು ನಡೆಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು