Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನು ಅವನ ಹಿರಿಯರ ಪಾಪವನ್ನು ಮರೆಯದಿರಲಿ; ಅವನ ತಾಯಿಯ ಪಾಪವು ಅಳಿದುಹೋಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮರೆಯದಿರಲಿ ಪ್ರಭು ಅವನಾ ಹಿರಿಯರ ದೋಷವನು I ಪರಿಹರಿಸದಿರಲಿ ಅವನ ತಾಯಿಯು ಗೈದ ಪಾಪವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನು ಅವನ ಹಿರಿಯರ ಪಾಪವನ್ನು ಮರೆಯದಿರಲಿ; ಅವನ ತಾಯಿಯ ಪಾಪವು ಅಳಿದುಹೋಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ನನ್ನ ಶತ್ರುವಿನ ತಂದೆಯ ಪಾಪವನ್ನು ಮರೆಯದಿರಲಿ; ಅವನ ತಾಯಿಯ ಪಾಪವು ಅಳಿದುಹೋಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನ ಪಿತೃಗಳ ಅಕ್ರಮವು ಯೆಹೋವ ದೇವರ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:14
15 ತಿಳಿವುಗಳ ಹೋಲಿಕೆ  

ಅವರ ಅಪರಾಧವನ್ನು ಕ್ಷಮಿಸಬೇಡ; ನಿನ್ನೆದುರಿಗಿರುವ ಅವರ ಅಪರಾಧವನ್ನು ಅಳಿಸಿಬಿಡಬೇಡ. ಕಟ್ಟುವವರ ಮುಂದೆಯೇ ಅವರು ನಿನ್ನನ್ನು ಕೆಣಕಿ ಕೋಪಗೊಳಿಸಿದ್ದಾರಲ್ಲಾ.


ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.


ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ. ಅವರ ಅಪರಾಧವನ್ನು ಕ್ಷಮಿಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ. ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು.


ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.


ಅಹಜ್ಯನು ಮರಣಹೊಂದಿದನೆಂದು ಅವನ ತಾಯಿಯಾದ ಅತಲ್ಯಳು ಕೇಳಿದಾಗ ಪಕ್ಕನೆ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.


ಯೆಹೂದ್ಯರ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ” ಎಂದು ಕೂಗಲು, ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.


ಅಹಜ್ಯನಿಗೆ ಅಹಾಬನ ಕುಟುಂಬದವರೊಂದಿಗೆ ಸಂಬಂಧವಿದ್ದುದ್ದರಿಂದ ಅವನು ಅವರ ಮಾರ್ಗದಲ್ಲೆ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ದಾವೀದನ ಕಾಲದಲ್ಲಿ ಮೂರು ವರ್ಷಗಳ ವರೆಗೂ ಎಡಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ, ಅವನ ಮನೆಯವರ ಮೇಲೆಯೂ ರಕ್ತಾಪರಾಧವಿದೆ” ಎಂದು ಉತ್ತರ ಕೊಟ್ಟನು.


ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ (ರಕ್ತ, ಕೀವುಸ್ರವಿಸುವ ಚರ್ಮ ರೋಗ), ಕುಷ್ಠರೋಗಿಗಳೂ, ಕುಂಟರೂ, ಕತ್ತಿಯಿಂದ ಹತರಾಗುವವರೂ, ಭಿಕ್ಷೇ ಬೇಡುವವರು ಇದ್ದೇ ಇರಲಿ” ಅಂದನು.


ನಿಮ್ಮಲ್ಲಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ಮತ್ತು ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷೀಣವಾಗಿ ಹೋಗುವರು.


ಸಾವಿರಾರು ತಲೆಮಾರುಗಳವರೆಗೂ ದಯೆತೋರಿಸುವವನು; ದೋಷಾಪರಾಧ ಪಾಪಗಳನ್ನು ಕ್ಷಮಿಸುವವನು; ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡುವುದಿಲ್ಲ; ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಮಾರುಗಳವರೆಗೆ ಬರಮಾಡುವವನು ಆಗಿದ್ದಾನೆ” ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು