Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಾನು ಬಡವನೂ, ದೀನನೂ ಆಗಿದ್ದೇನಲ್ಲಾ! ನನ್ನ ಹೃದಯದಲ್ಲಿ ಅಲಗು ನೆಟ್ಟಂತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಬಡವ ನಾನು, ನನಗಿದೆ ಕುಂದುಕೊರತೆ I ನನ್ನ ಎದೆಗೆ ಅಲಗೇ ನಾಟಿದಂತಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಾನು ಬಡವನೂ ದೀನನೂ ಆಗಿದ್ದೇನಲ್ಲಾ! ನನ್ನ ಹೃದಯದಲ್ಲಿ ಅಲಗು ನೆಟ್ಟಂತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ಕೇವಲ ಬಡವನೂ ಅಸಹಾಯಕನೂ ಆಗಿರುವೆ. ನನ್ನ ಹೃದಯವು ನೊಂದು ದುಃಖಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಏಕೆಂದರೆ ನಾನು ಬಡವನೂ ಅಗತ್ಯತೆಯಲ್ಲಿ ಇರುವವನೂ ಆಗಿದ್ದೇನೆ; ನನ್ನ ಹೃದಯವು ನನ್ನ ಅಂತರಂಗದಲ್ಲಿ ಗಾಯಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:22
15 ತಿಳಿವುಗಳ ಹೋಲಿಕೆ  

ಯೆಹೋವನೇ, ಕಿವಿಗೊಡು; ನನಗೆ ಸದುತ್ತರವನ್ನು ದಯಪಾಲಿಸು; ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ.


ನನ್ನ ಹೃದಯವು ಬಿಸಿಲಿನಿಂದ ಬಾಡಿಹೋದ ಹುಲ್ಲಿನಂತಿದೆ; ಊಟವನ್ನು ಮರೆತೆನು.


ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ಕರ್ತನೇ ನನ್ನ ಹಿತಚಿಂತಕನು. ನನ್ನ ದೇವರೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.


ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.


ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ?


ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ, ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ, ಆತನ ಬೆವರು ರಕ್ತದ ಹನಿಗಳೋಪಾದಿಯಲ್ಲಿ ನೆಲಕ್ಕೆ ಬೀಳುತ್ತಿತ್ತು.


ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.


ಏಕೆಂದರೆ ಅವನು ಕರುಣೆ ತೋರಿಸುವುದನ್ನು ಮರೆತುಬಿಟ್ಟನು, ಬಡವನನ್ನು, ದೀನನನ್ನು, ಮನಗುಂದಿದವನನ್ನು ಹಿಂಸಿಸಿ ಕೊಲ್ಲಬೇಕೆಂದು ಯತ್ನಿಸಿದನು.


ಸರ್ವಶಕ್ತನಾದ ದೇವರ ಬಾಣಗಳು ನನ್ನಲ್ಲಿ ನಾಟಿರುತ್ತವೆ, ನನ್ನ ಆತ್ಮವು ಅವುಗಳ ವಿಷವನ್ನು ಹೀರಿಕೊಳ್ಳುತ್ತದೆ; ದೇವರು ಕಳುಹಿಸಿದ ಅಪಾಯಗಳು ನನಗೆ ವಿರುದ್ಧವಾಗಿ ವ್ಯೂಹಕಟ್ಟಿವೆ.


ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಗೇಹಜಿಯು ಆಕೆಯನ್ನು ದೂರ ಮಾಡುವುದಕ್ಕಾಗಿ ಹತ್ತಿರ ಬರಲು, ದೇವರ ಮನುಷ್ಯನು ಅವನಿಗೆ, “ಬಿಡು, ಆಕೆಯ ಮನಸ್ಸಿನಲ್ಲಿ ಬಹು ದುಃಖವಿರುವ ಹಾಗೆ ತೋರುತ್ತದೆ. ಯೆಹೋವನು ಆಕೆಯ ದುಃಖವನ್ನು ನನಗೆ ಪ್ರಕಟಿಸದೆ, ಮರೆಮಾಡಿದ್ದಾನೆ” ಎಂದು ಹೇಳಿದನು.


ನಾನು ಒಬ್ಬೊಂಟಿಗನೂ, ಬಾಧೆಪಡುವವನೂ ಆಗಿದ್ದೇನೆ; ನೀನು ಕಟಾಕ್ಷವಿಟ್ಟು ನನ್ನನ್ನು ಕರುಣಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು