Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 110:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಮೆಲ್ಕಿಸೆದೆಕ್ ಪರಂಪರೆಯ ಯಾಜಕ ನೀ ನಿರುತ” I ಬದಲಿಸನು ಪ್ರಭು ತಾನಿತ್ತ ಪ್ರಮಾಣದೀ ಮಾತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಪಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ನನಗೆ, “ನೀನು ಸದಾಕಾಲ ಮೆಲ್ಕಿಜೆದೇಕನಂತಹ ಯಾಜಕನಾಗಿರುವೆ” ಎಂದು ವಾಗ್ದಾನ ಮಾಡಿದ್ದಾನೆ. ಆತನು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನೀವು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಯಾಜಕರಾಗಿದ್ದೀರಿ,” ಎಂದು ಯೆಹೋವ ದೇವರು ಆಣೆಯಿಟ್ಟು ಹೇಳಿದ್ದಾರೆ. ಅವರು ತಮ್ಮ ಮನಸ್ಸನ್ನು ಬದಲಾಯಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 110:4
14 ತಿಳಿವುಗಳ ಹೋಲಿಕೆ  

ಆತನ ವಿಷಯದಲ್ಲಿ “ನೀನು ಸದಾಕಾಲಕ್ಕೂ ಮೆಲ್ಕಿಜೆದೇಕನ ತರಹದ ಯಾಜಕನೇ” ಎಂಬುದಾಗಿ ಧರ್ಮಶಾಸ್ತ್ರವು ಸಾಕ್ಷಿಕರಿಸುತ್ತದೆ.


ಆತನು ಇನ್ನೊಂದು ಕಡೆಯಲ್ಲಿ, “ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನು” ಎಂದು ಹೇಳುತ್ತಾನೆ.


ಆತನಾದರೋ, ಪ್ರತಿಜ್ಞೆಯೊಡನೆ ಯಾಜಕನಾಗಿ ಮಾಡಲ್ಪಟ್ಟನು. ಆದರೆ ದೇವರು ಆತನಿಗೆ “‘ನೀನು ಸದಾಕಾಲವೂ ಯಾಜಕನಾಗಿದ್ದೀ’ ಎಂದು ನಾನು ಪ್ರಮಾಣಮಾಡಿ ನುಡಿದಿದ್ದೇನೆ ಮತ್ತು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ” ಎಂಬುದಾಗಿ ಹೇಳಿದ್ದಾನೆ.


ಸಾಲೇಮಿನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದನು.


ಧರ್ಮಶಾಸ್ತ್ರವು ದುರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಕ ಮಾಡುತ್ತದೆ. ಆದರೆ ಧರ್ಮಶಾಸ್ತ್ರದ ತರುವಾಯ ಪ್ರತಿಜ್ಞೆಯೊಡನೆ ಬಂದ ವಾಕ್ಯವು ಸದಾಕಾಲಕ್ಕೂ ಸರ್ವಸಂಪೂರ್ಣನಾಗಿರುವ ಮಗನನ್ನೇ ಯಾಜಕನನ್ನಾಗಿ ನೇಮಕ ಮಾಡಿದೆ.


ಇಸ್ರಾಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿದ್ದಾದರೆ, ಆರೋನನ ಪರಂಪರೆಗೆ ಸೇರದ, ಮೆಲ್ಕಿಜೆದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಬರುವುದರ ಅಗತ್ಯವೇನಿತ್ತು?


ಅಲ್ಲಿಗೆ ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ, ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.


ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?


ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್.


ಹೌದು, ಅವನೇ ಯೆಹೋವನ ಆಲಯವನ್ನು ಕಟ್ಟಿಸಿ ರಾಜವೈಭವವನ್ನು ಹೊಂದಿಕೊಂಡು ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು. ಮತ್ತು ಯಾಜಕರು ತನ್ನ ಸಿಂಹಾಸನದಲ್ಲಿ ಕುಳಿತಿರುವರು. ಅವರಿಬ್ಬರೂ ಸಮ್ಮತಿ ಸಮಾಧಾನದಿಂದ ಇರುವರು.


ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವುದಿಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು