Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:109 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

109 ನನ್ನ ಜೀವವು ಅಪಾಯದಲ್ಲಿದ್ದೆ, ಆದರೂ ನಿನ್ನ ಧರ್ಮಶಾಸ್ತ್ರವನ್ನು ಮರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

109 ಕೈಯಲಿ ಜೀವ ಹಿಡಿದು ಕಳೆಯುತಿರುವೆ ಕಾಲವೆಲ್ಲ I ಆದರೂ ಪ್ರಭು, ನಾ ಧರ್ಮಶಾಸ್ತ್ರವನು ಮರೆತಿಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

109 ನಾನು ಯಾವಾಗಲೂ ಕೈಯಲ್ಲಿ ಜೀವ ಹಿಡಿದಿದ್ದೇನೆ; ಆದರೂ ನಿನ್ನ ಧರ್ಮಶಾಸ್ತ್ರವನ್ನು ಮರೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

109 ನನ್ನ ಪ್ರಾಣವು ಯಾವಾಗಲೂ ಅಪಾಯದಲ್ಲಿದೆ. ಆದರೂ ನಾನು ನಿನ್ನ ಉಪದೇಶಗಳನ್ನು ಮರೆತುಬಿಟ್ಟಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

109 ನನ್ನ ಜೀವನ ಆಗಾಗ ಅಪಾಯದಲ್ಲಿದೆ, ಆದಾಗ್ಯೂ ನಾನು ನಿಮ್ಮ ನಿಯಮವನ್ನು ಮರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:109
11 ತಿಳಿವುಗಳ ಹೋಲಿಕೆ  

ನೀವು ಸಹಾಯಮಾಡುವುದಿಲ್ಲವೆಂದು ತಿಳಿದು ಜೀವವನ್ನು ಕೈಯಲ್ಲಿ ಹಿಡಿದು ಅಮ್ಮೋನಿಯರೊಡನೆ ಯುದ್ಧಕ್ಕೆ ಹೋದೆನು. ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿದನು. ಹೀಗಿರಲು ನೀವು ಈಗ ಬಂದು ನನ್ನೊಡನೆ ಕಲಹಮಾಡುವುದೇಕೆ?” ಎಂದು ಉತ್ತರಿಸಿ,


ಪ್ರಿಯರೇ, ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತಾಗಿ ನನಗಿರುವ ಹೆಮ್ಮೆಯ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.


ನನ್ನ ಪ್ರಾಣವನ್ನು ಬಾಯಿಂದ ಕಚ್ಚಿಕೊಂಡಿರುವೆನು, ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು.


ಅವರು ಕ್ರಿಸ್ತನ ಸೇವಕರೋ? ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ ಕ್ರಿಸ್ತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಯ ವಾಸವನ್ನು ಅನುಭವಿಸಿದ್ದೇನೆ, ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ. ಅನೇಕ ಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡಿದ್ದೇನೆ.


“ದೇವರೇ ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗುತ್ತಿದ್ದೇವೆ. ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಎಣಿಸಿದರು.” ಎಂಬುದಾಗಿ ಬರೆದಿರುವಂತೆ ಆಗುತ್ತದಲ್ಲಾ.


ನೀನು ನಿನ್ನ ಕಟ್ಟಳೆಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಿ ಎಂದು, ನಾನು ಮೊದಲಿನಿಂದಲೇ ಅವುಗಳ ಮೂಲಕ ತಿಳಿದುಕೊಂಡಿದ್ದೇನೆ. ರೇಷ್.


ನೀನು ನನಗೆ ಆಧಾರವಾಗಿರು, ಆಗ ನಾನು ಸುರಕ್ಷಿತನಾಗಿ ಸದಾ ನಿನ್ನ ನಿಬಂಧನೆಗಳನ್ನು ಲಕ್ಷಿಸುವೆನು.


ಹೊಗೆಯಲ್ಲಿ ನೇತು ಹಾಕಿರುವ ಬುದ್ದಲಿಯಂತಿದ್ದೇನೆ, ಆದರೂ ನಿನ್ನ ನಿಬಂಧನೆಗಳನ್ನು ಮರೆಯಲಿಲ್ಲ.


ಅದಕ್ಕೆ ದಾವೀದನು, “ನಿನ್ನ ಕಣ್ಣುಮುಂದೆ ನನಗೆ ದಯೆ ದೊರಕುತ್ತದೆಂಬುದನ್ನು ನಿನ್ನ ತಂದೆಯು ಬಲ್ಲನು. ಆದ್ದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಅಂತರವಿದೆ” ಎಂದು ಖಂಡಿತವಾಗಿ ಹೇಳಿದನು.


ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಫಿಲಿಷ್ಟಿಯನನ್ನು ಕೊಂದನು. ಯೆಹೋವನು ಇಸ್ರಾಯೇಲ್ಯರಿಗೆ ಮಹಾ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ. ದಾವೀದನನ್ನು ನಿಷ್ಕರುಣೆಯಾಗಿ ಕೊಂದು, ನಿರಪರಾಧಿಯ ರಕ್ತವನ್ನು ಸುರಿಸಿ, ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ?” ಅಂದನು.


ನಿನ್ನ ನಿಬಂಧನೆಗಳಲ್ಲಿ ಉಲ್ಲಾಸಪಡುವೆನು, ನಿನ್ನ ವಾಕ್ಯವನ್ನು ಮರೆಯುವುದಿಲ್ಲ. ಗಿಮೆಲ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು