Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನ ಕಣ್ಣುಗಳನ್ನು ತೆರೆ, ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಿನ್ನ ಶಾಸ್ತ್ರದ ಮಹಿಮೆಯನು ಅರಿಯುವಂತೆ I ನನ್ನ ಕಣ್ಗಳಿಂದ ನೀ ತೆಗೆದುಬಿಡು ಅಂಧತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನನ್ನ ಕಣ್ಣು ತೆರೆ; ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನ್ನ ಕಣ್ಣುಗಳನ್ನು ತೆರೆ, ಆಗ ನಾನು ನಿನ್ನ ಉಪದೇಶಗಳನ್ನು ಕಾಣುವೆ; ನೀನು ಮಾಡಿದ ಅದ್ಭುತಕಾರ್ಯಗಳ ಕುರಿತು ಓದುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿಮ್ಮ ನಿಯಮದೊಳಗಿನ ಅದ್ಭುತಗಳನ್ನು ಕಾಣುವಂತೆ ನನ್ನ ಕಣ್ಣುಗಳನ್ನು ತೆರೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:18
17 ತಿಳಿವುಗಳ ಹೋಲಿಕೆ  

ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.


ಆಗ ಕುರುಡರ ಕಣ್ಣು ಕಾಣುವುದು, ಕಿವುಡರ ಕಿವಿ ಕೇಳುವುದು.


ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತನಾಡುವುದಕ್ಕೆ ಕಾರಣವೇನೆಂದರೆ, ಅವರು ಕಂಡರೂ ಕಾಣುವುದಿಲ್ಲ. ಅವರು ಕೇಳಿದರೂ ನಿಜವಾಗಿಯೂ ಆಲಿಸುವುದಿಲ್ಲ ಮತ್ತು ತಿಳಿದುಕೊಳ್ಳುವುದಿಲ್ಲ.


ಆಗ ನೋಡುವವರ ಕಣ್ಣು ಮೊಬ್ಬಾಗದು, ಕೇಳುವವರ ಕಿವಿ ಮಂದವಾಗದು.


ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗೂ ಕಾಣುವುದು.


ಆಗ ಯೇಸುವು, “ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು” ಎಂದನು.


ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.


ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.


ಮೋಶೆಯು ಗುಡಾರವನ್ನು ಕಟ್ಟುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು” ಎಂದು ದೇವರಿಂದ ಎಚ್ಚರಿಸಲ್ಪಟ್ಟಂತೆಯೇ ಪರಲೋಕದಲ್ಲಿರುವವುಗಳ ಪ್ರತಿರೂಪವೂ, ಛಾಯೆಯೂ ಆಗಿರುವ ಆಲಯದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.


ಎಲ್ಲಾ ಸಂಪೂರ್ಣತೆಗೂ ಮೇರೆಯುಂಟೆಂದು ಬಲ್ಲೆನು, ಆದರೆ ನಿನ್ನ ಆಜ್ಞಾಶಾಸನವು ಅಪರಿಮಿತವಾದದ್ದು. ಮೆಮ್.


ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು.


ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪವಾಗಿ ಅದಕ್ಕೆ ಬರೆಯಿಸಿಕೊಟ್ಟರೂ, ಅವುಗಳು ತನಗೆ ಸಂಬಂಧಪಟ್ಟವುಗಳಲ್ಲ ಎಂದು ಅದು ಭಾವಿಸುತ್ತದೆ.


ಅವರು, “ಕರ್ತನೇ, ನಮ್ಮ ಕಣ್ಣುಗಳು ಕಾಣುವಂತೆ ಮಾಡು” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು