Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನ ಕಟ್ಟಳೆಗಳನ್ನು ಕೈಕೊಂಡು, ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆತನ ಕಟ್ಟಳೆಗಳನ್ನು ಕೈಗೊಳ್ಳುವವರು ಧನ್ಯರು I ಮನಃಪೂರ್ವಕವಾಗಿ ಆತನನು ಅರಸುವವರು ಧನ್ಯರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನ ಕಟ್ಟಳೆಗಳನ್ನು ಕೈಕೊಂಡು ಸಂಪೂರ್ಣಮನಸ್ಸಿನಿಂದ ಆತನನ್ನು ಹುಡುಕುವವರು ಭಾಗ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆತನ ಒಡಂಬಡಿಕೆಗೆ ಸಂಪೂರ್ಣಹೃದಯದಿಂದ ವಿಧೇಯರಾಗುವವರು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಸಂಪೂರ್ಣ ಹೃದಯದಿಂದ ದೇವರನ್ನು ಹುಡುಕುತ್ತಾ ಅವರ ಶಾಸನಗಳನ್ನು ಕೈಗೊಳ್ಳುವವರೂ ಧನ್ಯರು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:2
24 ತಿಳಿವುಗಳ ಹೋಲಿಕೆ  

ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.


ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ, ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಪಾಡು.


ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.


ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.


ಯೆಹೋವನ ನಿಬಂಧನೆ ಮತ್ತು ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ, ಆತನ ಎಲ್ಲಾ ಮಾರ್ಗಗಳು ಕೃಪೆಯೂ, ಸತ್ಯತೆಯುಳ್ಳವು.


ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ.


ಕಂದಾ, ನಿನ್ನ ಹೃದಯವನ್ನು ನನಗೆ ಕೊಡು, ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಆನಂದಿಸಲಿ.


ನಿಮ್ಮ ದೇವರಾದ ಯೆಹೋವನು ನಿಮಗೆ ನೇಮಿಸಿದ ಆಜ್ಞಾವಿಧಿನಿಯಮಗಳನ್ನು ಅನುಸರಿಸಲೇಬೇಕು.


ಅವನು ತನ್ನ ದೇವರ ಒಲುಮೆಯನ್ನು ಪಡೆದುಕೊಳ್ಳುವುದಕ್ಕಾಗಿ ದೇವಾಲಯದ ಸೇವೆ ಮಾಡುವ, ಕಾರ್ಯದಲ್ಲಿಯೂ ಧರ್ಮಶಾಸ್ತ್ರವಿಧಿಗಳ ಸಂಬಂಧದಲ್ಲಿಯೂ, ತಾನು ಪ್ರಾರಂಭಿಸಿದ ಎಲ್ಲಾ ಕಾರ್ಯಗಳನ್ನು ಯಥಾರ್ಥಚಿತ್ತದಿಂದಲೂ ಪ್ರಾಮಾಣಿಕನಾಗಿಯೂ ನಡೆದುಕೊಂಡು ಕೃತಾರ್ಥನಾದನು.


ನಿನ್ನ ದೇವರಾದ ಯೆಹೋವನ ಅಪ್ಪಣೆಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆದುಕೋ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆತನ ಆಜ್ಞಾನಿಯಮವಿಧಿ ನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಯಾವುದನ್ನು ಮಾಡಿದರೂ ಎಲ್ಲಿಗೆ ಹೋದರೂ ಸಫಲನಾಗುವಿ.


ಏಕೆಂದರೆ ನಮ್ಮ ಹೃದಯವು ಯಾವ ವಿಷಯದಲ್ಲಾದರು ನಮ್ಮನ್ನು ದೋಷಿಗಳೆಂದು ನಿರ್ಣಯಿಸಿದರೆ, ದೇವರು ನಮ್ಮ ಹೃದಯವನ್ನು ಬಲ್ಲವನಾಗಿರುವುದರಿಂದ ನಮ್ಮ ಹೃದಯವನ್ನು ಆತನಲ್ಲಿ ದೃಢಪಡಿಸಬಹುದು.


ಅವರು ತನ್ನ ವಿಧಿಗಳನ್ನು ಕೈಕೊಂಡು, ತನ್ನ ಧರ್ಮಶಾಸ್ತ್ರವನ್ನು ಅನುಸರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಯೆಹೋವನಿಗೆ ಸ್ತೋತ್ರ!


ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಮತ್ತು ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ನಿನ್ನ ಕಟ್ಟಳೆಗಳನ್ನು ಕೈಕೊಂಡವನಾದರಿಂದ, ನನಗಿರುವ ನಿಂದೆ, ಅಪಮಾನಗಳನ್ನು ತೊಲಗಿಸು.


ನಿನಗೇ ಮೊರೆಯಿಟ್ಟಿದ್ದೇನೆ ರಕ್ಷಿಸು. ನಿನ್ನ ಕಟ್ಟಳೆಗಳನ್ನು ಕೈಗೊಳ್ಳುವೆನು.


ಆದುದರಿಂದ ನೀವು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ಒಡಂಬಡಿಕೆ ಮಂಜೂಷವನ್ನೂ, ದೇವಾರಾಧನೆಯ ಪವಿತ್ರ ಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ” ಎಂದು ಹೇಳಿದನು.


ನಿನ್ನ ಸೇವಕನಾದ ನನ್ನ ಮೇಲೆ ದಯವಿಡು, ಆಗ ಜೀವದಿಂದಿದ್ದು ನಿನ್ನ ವಾಕ್ಯವನ್ನು ಕೈಗೊಳ್ಳುವೆನು.


ಯೆಹೋವನೇ, ನಿನ್ನ ಕಟ್ಟಳೆಗಳ ಮಾರ್ಗವನ್ನು ನನಗೆ ಉಪದೇಶಿಸು, ಕಡೆಯವರೆಗೂ ಅದನ್ನೇ ಅನುಸರಿಸಿ ನಡೆಯುವೆನು.


ನನಗೆ ತಿಳಿವಳಿಕೆಯನ್ನು ದಯಪಾಲಿಸು, ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು.


ಯೆಹೋವನೇ, ನನ್ನ ಪಾಲು ನೀನೇ, ನಿನ್ನ ವಾಕ್ಯಗಳನ್ನು ಕೈಗೊಳ್ಳುವೆನೆಂದು ನಿರ್ಣಯಿಸಿಕೊಂಡಿದ್ದೇನೆ.


ಗರ್ವಿಷ್ಠರು ನನ್ನ ವಿರುದ್ಧವಾಗಿ ಸುಳ್ಳುಕಲ್ಪಿಸಿದ್ದಾರೆ, ನಾನಾದರೋ ಪೂರ್ಣಮನಸ್ಸಿನಿಂದ ನಿನ್ನ ನಿಯಮಗಳನ್ನು ಕೈಕೊಳ್ಳುವೆನು.


ನಿನ್ನ ಕೃಪೆಗೆ ಅನುಸಾರವಾಗಿ ನನ್ನನ್ನು ಕಾಪಾಡು, ಆಗ ನೀನು ಆಜ್ಞಾಪಿಸಿದ ಕಟ್ಟಳೆಯನ್ನು ಕೈಕೊಳ್ಳುವೆನು. ಲಾಮೆದ್.


ನಿನ್ನ ವಾಕ್ಯವನ್ನೇ ಅನುಸರಿಸಬೇಕೆಂದು, ನನ್ನ ಕಾಲುಗಳನ್ನು ಯಾವ ಕೆಟ್ಟ ದಾರಿಗೂ ಹೋಗದಂತೆ ಕಾದಿದ್ದೇನೆ.


ದುಷ್ಟರೇ, ತೊಲಗಿರಿ, ನನ್ನ ದೇವರ ಆಜ್ಞೆಗಳನ್ನು ಕೈಗೊಳ್ಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು