Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:78 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

78 ಗರ್ವಿಷ್ಠರು ಮಾನಭಂಗ ಹೊಂದಲಿ, ಅವರು ಮೋಸದಿಂದ ನನಗೆ ಕೇಡು ಮಾಡಿದ್ದಾರೆ. ನಾನಾದರೋ ನಿನ್ನ ನಿಯಮಗಳನ್ನು ಧ್ಯಾನಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

78 ನನಗೆ ಕೇಡು ಬಗೆದ ಗರ್ವಿಗಳಿಗಾಗಲಿ ಮಾನಭಂಗ I ನಾನಾದರೋ ಗೈವೆ ನಿನ್ನ ನೇಮಗಳ ಧ್ಯಾನಯೋಗ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

78 ಗರ್ವಿಷ್ಠರು ಮಾನಭಂಗಹೊಂದಲಿ; ಅವರು ಮೋಸದಿಂದ ನನಗೆ ಕೇಡುಮಾಡಿದ್ದಾರೆ. ನಾನಾದರೋ ನಿನ್ನ ನೇಮಗಳನ್ನು ಧ್ಯಾನಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

78 ಗರ್ವಿಷ್ಠರಿಗೆ ಅವಮಾನವಾಗಲಿ; ಅವರು ನನ್ನ ಬಗ್ಗೆ ಸುಳ್ಳು ಹೇಳಿದ್ದಾರೆ. ನಾನಾದರೋ ನಿನ್ನ ನಿಯಮಗಳನ್ನು ಧ್ಯಾನಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

78 ಅಹಂಕಾರಿಗಳು ಕಾರಣವಿಲ್ಲದೆ ನನಗೆ ಕೇಡು ಮಾಡಿದ್ದರಿಂದ ನಾಚಿಕೆಪಡಲಿ; ಆದರೆ ನಾನು ನಿಮ್ಮ ಸೂತ್ರಗಳನ್ನು ಧ್ಯಾನಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:78
18 ತಿಳಿವುಗಳ ಹೋಲಿಕೆ  

ತಪ್ಪುಮಾಡಿ ಗುದ್ದು ತಿನ್ನುವುದರಲ್ಲಿ ನೀವು ಸಹಿಸಿಕೊಂಡರೆ ಅದರಿಂದೇನು ಕೀರ್ತಿ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ಸಹಿಸಿಕೊಂಡರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ.


‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.


ಗರ್ವಿಷ್ಠರು ನನ್ನನ್ನು ಬಹಳವಾಗಿ ಅಪಹಾಸ್ಯ ಮಾಡಿದರು, ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಬಿಡಲಿಲ್ಲ.


ಪ್ರಭುಗಳು ಕುಳಿತುಕೊಂಡು, ನನಗೆ ವಿರುದ್ಧವಾಗಿ ಒಳಸಂಚು ಮಾಡಿದರೂ, ನಿನ್ನ ಸೇವಕನು ನಿನ್ನ ನಿಬಂಧನೆಗಳನ್ನೇ ಧ್ಯಾನಿಸುತ್ತಿರುವನು.


ನಿಷ್ಕಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು, ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು.


ಸೊಕ್ಕಿನ ರಾಜ್ಯವು ಎಡವಿ ಬೀಳುವುದು, ಅದನ್ನು ಯಾರೂ ಎತ್ತರು; ಅದರ ಪಟ್ಟಣಗಳಿಗೆ ಬೆಂಕಿಹೊತ್ತಿಸುವೆನು, ಅದು ಸುತ್ತಲಿರುವುದನ್ನು ನುಂಗಿಬಿಡುವುದು.”


ನೀನು ಗರ್ವಿಷ್ಠರನ್ನು ಗದರಿಸುತ್ತಿ, ನಿನ್ನ ಆಜ್ಞೆಗಳನ್ನು ಮೀರಿದವರು ಶಾಪಗ್ರಸ್ತರು.


ಅವರು ಹಗೆಯ ನುಡಿಗಳಿಂದ ನನ್ನನ್ನು ಮುತ್ತಿಕೊಂಡು, ಕಾರಣವಿಲ್ಲದೆ ನನ್ನ ಸಂಗಡ ಯುದ್ಧ ಮಾಡಿದ್ದಾರೆ.


ನಿಷ್ಕಾರಣ ದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ; ನಿರಾಕಾರಣವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ. ನಾನು ಅಪಹರಿಸದಿದ್ದರೂ ನನ್ನಿಂದ ದಂಡ ತೆಗೆದುಕೊಂಡರಲ್ಲಾ.


ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು, ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ.


ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ.


ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ, ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು.


ನನ್ನ ಸ್ವಾಮಿಯು ತನ್ನ ಸೇವಕನನ್ನು ಈ ಪ್ರಕಾರ ಹಿಂಸಿಸುವುದೇಕೇ? ನಾನೇನು ಮಾಡಿದೆನು?


ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತನೂ. ನಾನು ನಿನಗೆ ಕೇಡುಮಾಡಿದರೂ ನೀನು ನನಗೆ ಒಳ್ಳೆಯದನ್ನೇ ಮಾಡಿದಿ.


ನಿನ್ನ ನಿಯಮಗಳನ್ನು ಧ್ಯಾನಿಸುತ್ತಾ, ನಿನ್ನ ದಾರಿಯನ್ನು ಲಕ್ಷಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು