Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:96 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

96 ಎಲ್ಲಾ ಸಂಪೂರ್ಣತೆಗೂ ಮೇರೆಯುಂಟೆಂದು ಬಲ್ಲೆನು, ಆದರೆ ನಿನ್ನ ಆಜ್ಞಾಶಾಸನವು ಅಪರಿಮಿತವಾದದ್ದು. ಮೆಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

96 ನಾ ಬಲ್ಲೆ ಸರ್ವಸಂಪೂರ್ಣತೆಗೂ ಮಿತಿ ಉಂಟೆಂದು I ನಿನ್ನ ಆಜ್ಞೆಗಳಾದರೋ ಅಪರಿಮಿತವಾದುವೆಂದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

96 ಎಲ್ಲಾ ಸಂಪೂರ್ಣತೆಗೂ ಮೇರೆಯುಂಟೆಂದು ಬಲ್ಲೆನು; ಆದರೆ ನಿನ್ನ ಆಜ್ಞಾಶಾಸನವು ಅಪಾರವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

96 ನಿನ್ನ ಧರ್ಮಶಾಸ್ತ್ರದ ಹೊರತು ಬೇರೆಲ್ಲವುಗಳಿಗೂ ಮೇರೆಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

96 ಸರ್ವ ಸಂಪೂರ್ಣತೆಗೂ ಒಂದು ಮಿತಿಯಿರುವುದನ್ನು ನಾನು ನೋಡಿದ್ದೇನೆ; ಆದರೆ ನಿಮ್ಮ ಆಜ್ಞೆಗಳು ಮಿತಿಯಿಲ್ಲದವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:96
23 ತಿಳಿವುಗಳ ಹೋಲಿಕೆ  

ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.


ಆಗ ನನ್ನ ಕೈಯಿಂದ ನಡೆಸಿದ ಎಲ್ಲಾ ಕೆಲಸಗಳನ್ನೂ, ನಾನು ಪಟ್ಟ ಪ್ರಯಾಸಗಳನ್ನೂ ಗಮನವಿಟ್ಟು ಪರಿಶೀಲಿಸಿದೆ, ಆಹಾ ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು. ಸೂರ್ಯನ ಕೆಳಗೆ ಯಾವ ಲಾಭವೂ ಕಾಣಲಿಲ್ಲ.


ನಿಮಗೆ ಸತ್ಯವಾಗಿ ಹೇಳುತ್ತೇನೆ, ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ.


ಧರ್ಮಶಾಸ್ತ್ರವು ಆತ್ಮೀಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ, ಪಾಪದ ಅಧೀನದಲ್ಲಿ ಗುಲಾಮನಾಗಿರುವುದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.


“ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ” ಎಂದು ಪ್ರಸಂಗಿಯು ಹೇಳುತ್ತಾನೆ.


ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.


ಅವನು ನಿಂತು ಇಸ್ರಾಯೇಲ ಸೈನ್ಯದವರನ್ನು ಕೂಗಿ ಅವರಿಗೆ, “ನೀವು ಯುದ್ಧಮಾಡಲು ಬಂದದ್ದೇಕೆ? ನಾನು ಫಿಲಿಷ್ಟಿಯನು. ನೀವು ಸೌಲನ ಸೇವಕರು. ನಿಮ್ಮಲ್ಲಿ ಒಬ್ಬನನ್ನು ಆರಿಸಿಕೊಂಡು ನನ್ನ ಬಳಿಗೆ ಕಳುಹಿಸಿರಿ.


ಕೀಷನಿಗೆ ಸೌಲನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಈ ಸೌಲನು ಯೌವನಸ್ಥನೂ, ಎಲ್ಲಾ ಇಸ್ರಾಯೇಲ್ಯರಲ್ಲಿ ಅತಿಸುಂದರನೂ ಆಗಿದ್ದನು. ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾಗಿದ್ದನು.


ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.


ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷರು ಲೋಕದಲ್ಲಿ ಇಲ್ಲವೇ ಇಲ್ಲ.


ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡದಾದ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.


ಆಗ ಯೋವಾಬನು, “ಇಲ್ಲಿ ನಿಂತು ತಡಮಾಡುವುದೇಕೆ” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು. ಅವನು ಇನ್ನೂ ಜೀವದಿಂದ ಓಕ್ ಮರದಲ್ಲಿ ನೇತಾಡುತ್ತಿರುವಾಗಲೇ


ಆ ಕಾಲದಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿರುವಷ್ಟು ಬೆಲೆಯಿತ್ತು. ದಾವೀದನೂ ಮತ್ತು ಅಬ್ಷಾಲೋಮನೂ ಅವನ ಆಲೋಚನೆಗಳನ್ನು ಗೌರವಿಸುತ್ತಿದ್ದರು.


ಸೌಂದರ್ಯದಲ್ಲಿ ಅಬ್ಷಾಲೋಮನಂತೆ ಹೆಸರುಗೊಂಡ ಪುರುಷನು ಇಸ್ರಾಯೇಲರಲ್ಲಿ ಒಬ್ಬನೂ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನೆತ್ತಿಯ ವರೆಗೂ ಒಂದು ದೋಷವಾದರೂ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು