Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 122:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಜೆರುಸಲೇಮಿನ ಶುಭಕ್ಕಾಗಿ ಮಾಡಿರಿ ಪ್ರಾರ್ಥನೆ I “ಜೆರುಸಲೇಮ್, ನಿನ್ನಭಿಮಾನಿಗಳಿಗೆ ಪ್ರವರ್ಧನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆರೂಸಲೇವಿುನ ಶುಭಕ್ಕೋಸ್ಕರ ಪ್ರಾರ್ಥಿಸಿರಿ. [ಯೆರೂಸಲೇಮೇ,] ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಜೆರುಸಲೇಮಿನ ಶಾಂತಿಗೋಸ್ಕರ ಪ್ರಾರ್ಥಿಸಿರಿ: “ನಿನ್ನನ್ನು ಪ್ರೀತಿಸುವ ಜನರು ಅಲ್ಲಿ ಶಾಂತಿಯನ್ನು ಕಂಡುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥನೆಮಾಡಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಅಭಿವೃದ್ಧಿಯಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 122:6
16 ತಿಳಿವುಗಳ ಹೋಲಿಕೆ  

ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; ಯೆರೂಸಲೇಮಿನ ಪೌಳಿಗೋಡೆಯನ್ನು ಕಟ್ಟಿಸು.


ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ, ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ.


ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.


ಖಡ್ಗಕ್ಕೆ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ; ದೂರದಲ್ಲಿಯೂ ಯೆಹೋವನನ್ನು ಸ್ಮರಿಸಿರಿ, ಯೆರೂಸಲೇಮಿನ ಹಂಬಲ ನಿಮ್ಮ ಮನಸ್ಸಿನಲ್ಲಿ ಹುಟ್ಟಲಿ.


ಆ ಜನಾಂಗವು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದೆ, ಮೃಗೇಂದ್ರನಿಗೆ ಸಮನಾದ ಆ ಜನರನ್ನು ಕೆಣಕುವುದು ಯಾರಿಂದಾದೀತು? ಇಸ್ರಾಯೇಲರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ, ಶಪಿಸುವವನಿಗೆ ಶಾಪವೂ ಉಂಟಾಗುವುದು” ಎಂದನು.


ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.


ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ.


ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇ ಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.


ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ.


ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.


ಇಸ್ರಾಯೇಲರ ಪ್ರಮುಖರು ಮಾತ್ರ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತು ಜನರಲ್ಲಿ ಒಂಭತ್ತು ಜನ ತಮ್ಮ ತಮ್ಮ ಊರುಗಳಲ್ಲಿ ವಾಸಮಾಡುತ್ತಿದ್ದರು, ಒಬ್ಬನು ಮಾತ್ರ ಪವಿತ್ರನಗರವಾಗಿರುವ ಯೆರೂಸಲೇಮಿನಲ್ಲಿ ವಾಸಮಾಡಬೇಕು ಎಂದು ಚೀಟು ಹಾಕಿ ಅವನನ್ನು ಗೊತ್ತು ಮಾಡುತ್ತಿದ್ದರು.


ಮತ್ತು ಸ್ವಇಚ್ಛೆಯಿಂದ ಯೆರೂಸಲೇಮಿನಲ್ಲಿ ವಾಸಿಸುವುದಕ್ಕೆ ಮನಸ್ಸು ಮಾಡಿದಂಥವರನ್ನು ಜನರು ಆಶೀರ್ವದಿಸಿದರು.


ಅದರೊಂದಿಗೆ ತಮ್ಮನ್ನು ಸಂಹರಿಸುವುದಕ್ಕೋಸ್ಕರ ಶೂಷನಿನಲ್ಲಿ ಪ್ರಕಟವಾದ ರಾಜಶಾಸನದ ಒಂದು ಪ್ರತಿಯನ್ನು ಕೊಟ್ಟು, “ಇದನ್ನು ಎಸ್ತೇರಳಿಗೆ ತೋರಿಸಿ ವಿವರಿಸು; ಮತ್ತು ಆಕೆಯು ಅರಸನ ಬಳಿಗೆ ಹೋಗಿ ಅವನು ಕೃಪೆ ತೋರಿಸುವಂತೆ ಅವನ ಸನ್ನಿಧಿಯಲ್ಲಿ ತನ್ನ ಜನರಿಗೋಸ್ಕರ ಬಿನ್ನಹ ಮಾಡಲಿ” ಎಂದು ಹೇಳಿಕಳುಹಿಸಿದನು.


ಆತನು ಯೆರೂಸಲೇಮನ್ನು ಭದ್ರಪಡಿಸಿ, ಲೋಕಪ್ರಸಿದ್ಧಿಗೆ ತರುವ ತನಕ ನಿಮಗೂ ವಿರಾಮ ಇಲ್ಲದಿರಲಿ, ಅತನಿಗೂ ವಿರಾಮ ಇಲ್ಲದಿರಲಿ.


ಯೆರೂಸಲೇಮ್ ನಗರವನ್ನು ಪ್ರೀತಿಸುವವರೇ, ನೀವೆಲ್ಲರೂ ಆಕೆಯೊಂದಿಗೆ ಆನಂದಿಸಿರಿ, ಆಕೆಯ ವಿಷಯದಲ್ಲಿ ಹರ್ಷಗೊಳ್ಳಿರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು