Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 13:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ನನಗೆ ಸದುತ್ತರವನ್ನು ದಯಪಾಲಿಸು; ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೇ ಪ್ರಭು, ಹೇ ದೇವ, ಎನ್ನ ವೀಕ್ಷಿಸಿ ಸದುತ್ತರ ಪಾಲಿಸು I ಮರಣ ನಿದ್ರೆ ಬಾರದಂತೆ ನನ್ನ ನೇತ್ರಗಳನು ಬೆಳಗಿಸು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ಸದುತ್ತರವನ್ನು ದಯಪಾಲಿಸು; ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನನ್ನ ದೇವರಾದ ಯೆಹೋವನೇ, ನನ್ನ ಮೇಲೆ ದೃಷ್ಟಿಯಿಟ್ಟು ಸದುತ್ತರವನ್ನು ದಯಪಾಲಿಸು. ಇಲ್ಲವಾದರೆ, ನಾನು ಸಾಯಲೇಬೇಕಾಗುವುದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನ್ನ ದೇವರಾದ ಯೆಹೋವ ದೇವರೇ, ನನ್ನನ್ನು ನೋಡಿ ನನಗೆ ಸದುತ್ತರ ಕೊಡಿರಿ. ನನಗೆ ಮರಣ ನಿದ್ರೆ ಉಂಟಾಗದಂತೆ ನನ್ನ ಕಣ್ಣುಗಳನ್ನು ಬೆಳಗಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 13:3
15 ತಿಳಿವುಗಳ ಹೋಲಿಕೆ  

ಆದರೂ ನಮ್ಮ ದೇವರಾದ ಯೆಹೋವನು ಒಂದು ಕ್ಷಣ ನಮಗೆ ಪ್ರಸನ್ನನಾಗಿ ನಮ್ಮಲ್ಲಿ ಸ್ವಲ್ಪ ಜನರನ್ನು ರಕ್ಷಣೆಗಾಗಿ ಉಳಿಸಿ ತನ್ನ ಪರಿಶುದ್ಧಸ್ಥಳದಲ್ಲಿ ಮೊಳೆಯಂತೆ ನಮ್ಮನ್ನು ನೆಲೆಗೊಳಿಸಿ, ನಮ್ಮ ಕಣ್ಣುಗಳನ್ನು ಕಳೆಗೊಳಿಸಿ ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ಉಜ್ಜೀವನವನ್ನು ಅನುಗ್ರಹಿಸಿದ್ದಾನೆ.


ನೀನೇ ನನ್ನ ದೀಪವನ್ನು ಹೊತ್ತಿಸುವವನಲ್ಲವೇ; ನನ್ನ ದೇವರಾದ ಯೆಹೋವನು ನನಗೆ ಬೆಳಕನ್ನು ಕೊಟ್ಟು ಕತ್ತಲನ್ನು ಪರಿಹರಿಸುವವನು.


ಅವರು ಹೊಟ್ಟೆಬಾಕರು, ನಾನು ಅವರಿಗೆ ಔತಣವನ್ನು ಸಿದ್ಧಪಡಿಸುವೇನು, ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವಂತೆ ತಲೆಗೇರುವ ಮಟ್ಟಿಗೆ ಕುಡಿಸುವೆನು. ಇದು ಯೆಹೋವನ ನುಡಿ” ಎಂಬುದೇ.


ಯೆಹೋವನೇ ನನ್ನ ಮೊರೆಗೆ ಕಿವಿಗೊಡು; ನನ್ನ ನರಳಾಟವನ್ನು ಲಕ್ಷ್ಯಕ್ಕೆ ತಂದುಕೋ.


ಜನರು ಬಹಳವಾಗಿ ಬಳಲಿ ಹೋದದ್ದನ್ನು ಕಂಡು ಯೋನಾತಾನನು ಆ ಮನುಷ್ಯನಿಗೆ, “ನನ್ನ ತಂದೆಯು ದೇಶದಲ್ಲಿ ಇಕ್ಕಟ್ಟನ್ನು ಉಂಟುಮಾಡಿದ್ದಾನೆ; ನಾನು ಸ್ವಲ್ಪ ಜೇನುತುಪ್ಪವನ್ನು ತಿಂದದ್ದರಿಂದ ನನ್ನ ಕಣ್ಣುಗಳು ಹೇಗೆ ಕಳೆಗೊಂಡಿರುತ್ತವೆ ನೋಡು.


ಯೋನಾತಾನನಿಗೆ ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದ್ದು ಗೊತ್ತಿರಲಿಲ್ಲವಾದ್ದರಿಂದ ಅವನು ತನ್ನ ಕೋಲನ್ನು ಜೇನುಹುಟ್ಟಿನಲ್ಲಿ ಚುಚ್ಚಿ, ಕೈಯಿಂದ ತೆಗೆದು ತಿನ್ನಲು ಅವನ ಕಣ್ಣುಗಳು ಕಳೆಗೊಂಡವು.


ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.


ಯೆಹೋವನೇ, ನಮಗಾದ ದುರ್ಗತಿಯನ್ನು ನೆನಪಿಗೆ ತಂದುಕೋ; ನಾವು ಗುರಿಯಾಗಿರುವ ಅವಮಾನವನ್ನು ದೃಷ್ಟಿಸಿ ನೋಡು.


ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರುವ ಮಟ್ಟಿಗೆ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನೆಂಬ ಹೆಸರಿನ ರಾಜಾಧಿರಾಜನು ಅನ್ನುತ್ತಾನೆ.”


ನನ್ನ ಕಷ್ಟವನ್ನು ನೋಡಿ ನನ್ನನ್ನು ರಕ್ಷಿಸು, ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆತವನಲ್ಲ.


ನಿನ್ನ ಕೃಪೆಯಲ್ಲಿ ಸಂತೋಷಿಸಿ ಉಲ್ಲಾಸದಿಂದಿರುವೆನು; ನಾನು ಕುಗ್ಗಿಹೋಗಿರುವುದನ್ನು ನೋಡಿ, ನನ್ನ ಬಾಧೆಗಳನ್ನು ನೀನು ಲಕ್ಷ್ಯಕ್ಕೆ ತೆಗೆದುಕೊಂಡಿಯಲ್ಲಾ.


ನನಗೆ ಎಷ್ಟೋ ಶತ್ರುಗಳು ಇದ್ದಾರಲ್ಲಾ; ಅವರು ಕಡು ವೈರತ್ವದಿಂದ ನನ್ನನ್ನು ಹಗೆಮಾಡುತ್ತಾರೆ.


ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.


ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.


ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು