Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 132:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಾಕೋಬನ ಶೂರನಾದ ಯೆಹೋವನಿಗಾಗಿ ಒಂದು ವಾಸಸ್ಥಾನವನ್ನು ಏರ್ಪಡಿಸುವ ತನಕ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸ್ಮರಿಸಿಕೊ ಪ್ರಭೂ, ಆತನು ಮಾಡಿದ ಶಪಥವನು I ಯಕೋಬ್ಯ ಘನದೇವನಿಗಾತ ಕೊಟ್ಟ ಈ ಮಾತನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯಾಕೋಬ್ಯರ ಶೂರನಾದ ಯೆಹೋವನಿಗಾಗಿ ಒಂದು ವಾಸಸ್ಥಾನವನ್ನು ಏರ್ಪಡಿಸುವ ತನಕ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದಾವೀದನು ಯೆಹೋವನಿಗೆ ವಿಶೇಷವಾದ ವಾಗ್ದಾನವನ್ನು ಮಾಡಿದನು; ಇಸ್ರೇಲರ ಶೂರನಾದ ದೇವರಿಗೆ ಆತನು ವಿಶೇಷವಾದ ಹರಕೆಯೊಂದನ್ನು ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದಾವೀದನು ಯೆಹೋವ ದೇವರಿಗೆ ಆಣೆ ಇಟ್ಟು, ಪರಾಕ್ರಮಿಯಾದ ಯಾಕೋಬನ ದೇವರಿಗೆ ಹೀಗೆಂದು ಪ್ರಮಾಣ ಮಾಡಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 132:2
15 ತಿಳಿವುಗಳ ಹೋಲಿಕೆ  

ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರಮಿಯ ಭುಜಬಲದಿಂದಲೂ, ಇಸ್ರಾಯೇಲನಿಗೆ ಪಾಲಕನೂ ಬಂಡೆಯೂ ಆಗಿರುವಾತನಿಂದಲೂ ಅವನ ಕೈಗಳ ಬಿಲ್ಲು ಸ್ಥಿರವಾಗಿ ನಿಂತಿರುವುದು. ಅವನ ಕೈಗಳು ಯಾಕೋಬನ ಒಡೆಯನಿಂದ ಬಲಗೊಂಡಿವೆ.


ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಸಿದ್ಧವಾಗಿದೆ; ಹರಕೆಗಳು ನಿನಗೆ ಸಲ್ಲುತ್ತವೆ.


ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.


ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು” ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವುದು.


ಅವನು ಯೆಹೋವನಿಗೆ ಪ್ರಮಾಣಮಾಡಿ, ಯಾಕೋಬನ ಶೂರನಿಗೆ ಹರಕೆ ಮಾಡಿಕೊಂಡನಲ್ಲಾ.


ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು.


ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು; ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು.


ಬಲಿಷ್ಠ ದೇವರಾದ ಯೆಹೋವನು ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ, ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.


ಯೆಹೋವನ ಅನುಗ್ರಹದಿಂದ ಸುತ್ತಣ ವೈರಿಗಳ ಭಯವೆಲ್ಲಾ ತಪ್ಪಿಹೋಗಿ ಅರಸನು ಅರಮನೆಯಲ್ಲಿ ಸಮಾಧಾನದಿಂದ ವಾಸಿಸುತ್ತಿದ್ದನು.


ಅರಸನು ಒಂದು ದಿನ ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ. ದೇವರ ಮಂಜೂಷವಾದರೂ ಬಟ್ಟೆಯ ಗುಡಾರದಲ್ಲಿ ಇರುತ್ತದೆ” ಎಂದು ಹೇಳಿದನು.


ಅವರು ಸೇರಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನೆಂದರೆ, “ನನ್ನ ಸಹೋದರರೇ, ನನ್ನ ಪ್ರಜೆಗಳೇ, ನನ್ನ ಮಾತನ್ನು ಕೇಳಿರಿ, ಯೆಹೋವನ ಒಡಂಬಡಿಕೆಯ ಮಂಜೂಷಕ್ಕೋಸ್ಕರ ನಮ್ಮ ದೇವರ ಪಾದಪೀಠಕ್ಕೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು