Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 132:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನು ಯೆಹೋವನಿಗೆ ಪ್ರಮಾಣಮಾಡಿ, ಯಾಕೋಬನ ಶೂರನಿಗೆ ಹರಕೆ ಮಾಡಿಕೊಂಡನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮುಚ್ಚೆನು ನಾನು ಕಣ್ಣುಗಳನು I ಕೂಡಿಸೆನು ನಾನು ರೆಪ್ಪೆಗಳನು” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ಯಾಕೋಬ್ಯರ ಶೂರನಾದ ಯೆಹೋವನಿಗೆ ಪ್ರಮಾಣದಿಂದ ಹರಕೆಮಾಡಿಕೊಂಡನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇಸ್ರೇಲರ ಶೂರನಾದ ದೇವರಿಗೆ ಒಂದು ಆಲಯವನ್ನು ಕಟ್ಟುವೆನು” ಎಂದು ದಾವೀದನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನನ್ನ ಕಣ್ಣುಗಳಿಗೆ ನಿದ್ದೆಯನ್ನು ಕೊಡೆನು, ನನ್ನ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 132:5
12 ತಿಳಿವುಗಳ ಹೋಲಿಕೆ  

ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ.


ಆದರೆ ಆತನಿಗೋಸ್ಕರ ಆಲಯವನ್ನು ಕಟ್ಟುವುದಕ್ಕೆ ಶಕ್ತರಾರು! ಉನ್ನತೋನ್ನತವಾದ ಆಕಾಶವೂ ಆತನ ವಾಸಕ್ಕೆ ಸಾಲದಿರುವಾಗ ಆತನಿಗಾಗಿ ಆಲಯ ಕಟ್ಟಲು ಸಾಧ್ಯವಿಲ್ಲ. ಆತನ ಸನ್ನಿಧಿಯಲ್ಲಿ ಯಜ್ಞವನ್ನು ಅರ್ಪಿಸುವುದಕ್ಕೆ ಒಂದು ಆಲಯವನ್ನು ಕಟ್ಟಬಹುದೇ ಹೊರತು ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು!


ದಾವೀದನು ಸೊಲೊಮೋನನಿಗೆ, “ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಅಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದ್ದೆನು.


ಯೆಹೋವನು ಹೀಗೆನ್ನುತ್ತಾನೆ: “ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?


ನಿಮ್ಮ ಸಹೋದರರೂ ನಿಮ್ಮನ್ನು ಶುದ್ಧಿಪಡಿಸಿಕೊಂಡು, ಇಸ್ರಾಯೇಲರ ದೇವರಾದ ಯೆಹೋವನ ಮಂಜೂಷವನ್ನು ನಾನು ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬನ್ನಿರಿ.


ಅನಂತರ ದಾವೀದನು ಯೆಹೋವನ ಮಂಜೂಷವನ್ನು ತಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರ ಎಲ್ಲಾ ಇಸ್ರಾಯೇಲರನ್ನು ಯೆರೂಸಲೇಮಿಗೆ ಕರೆಯಿಸಿದನು.


“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲದು. ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು?


ಜನರು ಯೆಹೋವನ ಮಂಜೂಷವನ್ನು ತಂದು ದಾವೀದನು ಹಾಕಿಸಿದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿಟ್ಟರು. ಆಗ ದಾವೀದನು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.


ಯೆಹೋವನ ಅನುಗ್ರಹದಿಂದ ಸುತ್ತಣ ವೈರಿಗಳ ಭಯವೆಲ್ಲಾ ತಪ್ಪಿಹೋಗಿ ಅರಸನು ಅರಮನೆಯಲ್ಲಿ ಸಮಾಧಾನದಿಂದ ವಾಸಿಸುತ್ತಿದ್ದನು.


ನನ್ನ ತಂದೆಯಾದ ದಾವೀದನು ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿಗೋಸ್ಕರ ಮನೆಯನ್ನು ಕಟ್ಟಬೇಕೆಂದು ಮನಸ್ಸು ಮಾಡಿದ್ದನು.


ಅವರು ಸೇರಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನೆಂದರೆ, “ನನ್ನ ಸಹೋದರರೇ, ನನ್ನ ಪ್ರಜೆಗಳೇ, ನನ್ನ ಮಾತನ್ನು ಕೇಳಿರಿ, ಯೆಹೋವನ ಒಡಂಬಡಿಕೆಯ ಮಂಜೂಷಕ್ಕೋಸ್ಕರ ನಮ್ಮ ದೇವರ ಪಾದಪೀಠಕ್ಕೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು