Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 135:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಭೂಮಿಯಲ್ಲಿಯೂ, ಆಕಾಶದಲ್ಲಿಯೂ, ಸಮುದ್ರಗಳಲ್ಲಿಯೂ, ಬೇರೆ ಎಲ್ಲಾ ಜಲರಾಶಿಗಳಲ್ಲಿಯೂ ತನಗೆ ಬೇಕಾದದ್ದನ್ನು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮಾಡುವನು ಪ್ರಭು ತನಗಿಷ್ಟ ಬಂದುದನು I ಭೂಮ್ಯಾಕಾಶ, ಸಮುದ್ರ ಸಾಗರದೊಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ಭೂವಿುಯಲ್ಲಿಯೂ ಆಕಾಶದಲ್ಲಿಯೂ ಸಮುದ್ರಗಳಲ್ಲಿಯೂ ಬೇರೆ ಎಲ್ಲಾ ಜಲರಾಶಿಗಳಲ್ಲಿಯೂ ತನಗೆ ಬೇಕಾದದ್ದನ್ನು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ಸಮುದ್ರಗಳಲ್ಲಿಯೂ ಆಳವಾದ ಸಾಗರಗಳಲ್ಲಿಯೂ ತನ್ನ ಇಷ್ಟಾನುಸಾರವಾಗಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಆಕಾಶದಲ್ಲಿಯೂ, ಭೂಮಿಯಲ್ಲಿಯೂ, ಸಮುದ್ರದಲ್ಲಿಯೂ, ಎಲ್ಲಾ ಅಗಾಧಗಳಲ್ಲಿಯೂ ತಾವು ಅಪೇಕ್ಷಿಸುವುದನ್ನೆಲ್ಲಾ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 135:6
13 ತಿಳಿವುಗಳ ಹೋಲಿಕೆ  

ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.


ನಮ್ಮ ದೇವರು ಪರಲೋಕದಲ್ಲಿದ್ದಾನೆ; ಆತನು ತನಗೆ ಬೇಕಾದುದನ್ನೆಲ್ಲಾ ಮಾಡುತ್ತಾನೆ.


ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.


ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ.


ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.


ಉನ್ನತಲೋಕದಲ್ಲಿ ಉಪ್ಪರಿಗೆಯನ್ನು ಅನೇಕ ಅಂತಸ್ತನ್ನಾಗಿ ಕಟ್ಟಿಕೊಂಡು, ಭೂಲೋಕದ ಮೇಲೆ ಗುಮ್ಮಟವನ್ನು ಸ್ಥಾಪಿಸಿಕೊಂಡಿದ್ದಾನೆ. ಸಮುದ್ರದ ನೀರನ್ನು ಸೇದಿ, ಭೂಮಂಡಲದ ಮೇಲೆ ಹೊಯ್ಯುತ್ತಾನೆ, ಯೆಹೋವನೆಂಬುವುದೇ ಆತನ ನಾಮಧೇಯ.


ಇಗೋ, ಪರ್ವತಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ ಮತ್ತು ಭೂಮಿಯ ಉನ್ನತ ಪ್ರದೇಶಗಳನ್ನು ತುಳಿದುಬಿಡುವಾತನು” ಸೇನಾಧೀಶ್ವರ ದೇವರಾದ ಯೆಹೋವನೆಂಬುದೇ ನನ್ನ ನಾಮಧೇಯ.


ರಾತ್ರಿಯ ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಕಡೆಗೆ ಬಂದನು.


“ನೀನು ಸಕಲ ಕಾರ್ಯಗಳನ್ನು ನಡೆಸಬಲ್ಲೆಯೆಂತಲೂ, ಯಾವ ಸಂಕಲ್ಪವೂ ನಿನಗೆ ಅಸಾಧ್ಯವಲ್ಲವೆಂತಲೂ ತಿಳಿದುಕೊಂಡೇ ಇದ್ದೇನೆ.


ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು