Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 137:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು, ಚೀಯೋನನ್ನು ನೆನಪುಮಾಡಿಕೊಂಡು ಅತ್ತೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬಾಬಿಲೋನಿನ ನದಿಗಳ ತೀರದಲಿ ಕುಳಿತು I ಅತ್ತು ಪ್ರಲಾಪಿಸಿದೆವು ಸಿಯೋನನ್ನು ನೆನೆದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕೂತುಕೊಂಡು ಚೀಯೋನನ್ನು ನೆನಸಿ ಅತ್ತೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾವು ಬಾಬಿಲೋನ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು ಚೀಯೋನನ್ನು ನೆನಸಿಕೊಳ್ಳುತ್ತಾ ಅತ್ತೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬಾಬಿಲೋನಿನ ನದಿಗಳ ಹತ್ತಿರ ನಾವು ಕುಳಿತುಕೊಂಡು, ಚೀಯೋನನ್ನು ಜ್ಞಾಪಕ ಮಾಡಿಕೊಂಡಾಗ ಅತ್ತೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 137:1
27 ತಿಳಿವುಗಳ ಹೋಲಿಕೆ  

ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ವಾಸಿಸುತ್ತಿದ್ದಾಗ, ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ತೆರೆಯಲ್ಪಟ್ಟಿತು, ನಾನು ದೇವ ದರ್ಶನಗಳನ್ನು ಕಂಡೆನು.


ಆಗ ಸೆರೆಯಾಗಿ ಒಯ್ಯಲ್ಪಟ್ಟು ಕೆಬಾರ್ ನದಿಯ ಹತ್ತಿರ ತೇಲ್ ಆಬೀಬಿನಲ್ಲಿ ವಾಸವಾಗಿದ್ದವರ ಬಳಿಗೆ ಬಂದು, ಅವರು ಕುಳಿತುಕೊಂಡಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆನು; ಏಳು ದಿನಗಳವರೆಗೂ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ಧನಾಗಿ ಉಳಿದುಬಿಟ್ಟೆನು.


ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,


ಯೆಹೋವನ ವಾಕ್ಯವು ಕಸ್ದೀಯ ದೇಶದೊಳಗೆ ಕೆಬಾರ್ ನದಿಯ ಹತ್ತಿರ ಬೂಜಿಯ ಮಗನೂ, ಯಾಜಕನೂ ಆದ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಕೇಳಿಸಿತು; ಅಲ್ಲಿ ಯೆಹೋವನ ಹಸ್ತಸ್ಪರ್ಶದಿಂದ ಅವನು ಪರವಶನಾದನು.


ಸ್ವಜನರು ನಾಶವಾದ ಕಾರಣ ನನ್ನ ಕಣ್ಣೀರು ಹೊಳೆಹೊಳೆಯಾಗಿ ಹರಿಯುವುದು.


ನಿನ್ನ ಜನರು ಕರ್ತನಿಗೆ ಮನಃಪೂರ್ವಕವಾಗಿ ಮೊರೆಯಿಟ್ಟಿದ್ದಾರೆ; “ಚೀಯೋನ್ ನಗರಿಯ ಕೋಟೆಯವರೇ, ನಿಮ್ಮ ಕಣ್ಣೀರು ಹಗಲಿರುಳೂ ತೊರೆಯಂತೆ ಹರಿಯಲಿ, ನಿಮಗೆ ವಿರಾಮವೇ ಬೇಡ, ಅದು ನಿಮ್ಮ ನೇತ್ರದಿಂದ ನಿಲ್ಲದೆ ಸುರಿಯಲಿ;


ಈ ವಿಪತ್ತುಗಳಿಂದ ಗೋಳಾಡುತ್ತಿರುವೆನು, ನನ್ನನ್ನು ಸಂತೈಸಿ ದಣಿವಾರಿಸತಕ್ಕವನು ದೂರವಾಗಿರುವುದರಿಂದ ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವುದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು.


ನಾನು ವಿನೋದಗಾರರ ಕೂಟದಲ್ಲಿ ಕುಳಿತುಕೊಳ್ಳಲಿಲ್ಲ, ಉಲ್ಲಾಸಪಡಲೂ ಇಲ್ಲ. ನೀನು ನನ್ನ ಮೇಲೆ ಕೈಯಿಟ್ಟಿದ್ದರಿಂದ ಒಂಟಿಗನಾಗಿ ಕುಳಿತೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ.


ನಾನು ಭಜನೋತ್ಸವದಲ್ಲಿ ಸೇರಿ, ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ, ಸ್ತೋತ್ರಪದಗಳನ್ನು ಹಾಡುತ್ತಾ, ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು, ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.


ನಾನು ಅರಸನಿಗೆ, “ಅರಸನು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವುದು ಹೇಗೆ?” ಎಂದು ಹೇಳಿದೆನು.


ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಯೆರೂಸಲೇಮಿಗೆ ಹೊರಟೆವು. ನಮ್ಮ ದೇವರ ಹಸ್ತವು ನಮ್ಮನ್ನು ಪಾಲಿಸುತ್ತಾ ಇತ್ತು. ಆತನು ಶತ್ರುಗಳ ಮತ್ತು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ನಮ್ಮನ್ನು ತಪ್ಪಿಸಿದನು.


ಆ ಮೇಲೆ ಆ ಅಹವಾ ನದಿಯ ಬಳಿಯಲ್ಲಿ ನಾವು ಉಪವಾಸದಿಂದಿದ್ದು, ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಬೇಡಿಕೊಳ್ಳಬೇಕೆಂದು ಉಪವಾಸವನ್ನು ಪ್ರಕಟಿಸಿದನು.


ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.”


ನಾನು ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ, ವಿಜ್ಞಾಪನೆಗಳಲ್ಲಿ ನಿರತನಾದೆನು.


ನನ್ನ ಪಟ್ಟಣದ ಕನ್ಯೆಯರಿಗಾಗಿ ಅಳುತ್ತಿರುವ ನಾನು ಕಣ್ಣುರಿಯಿಂದ ಪೀಡಿತನಾಗಿದ್ದೇನೆ.


ಯೆರೂಸಲೇಮ್ ನಗರವನ್ನು ಪ್ರೀತಿಸುವವರೇ, ನೀವೆಲ್ಲರೂ ಆಕೆಯೊಂದಿಗೆ ಆನಂದಿಸಿರಿ, ಆಕೆಯ ವಿಷಯದಲ್ಲಿ ಹರ್ಷಗೊಳ್ಳಿರಿ!


ಆಹಾ, ನನ್ನ ಪ್ರಜೆಯೆಂಬಾಕೆಯು, “ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ?” ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ. ಅದಕ್ಕೆ ಯೆಹೋವನು, “ಇವರು ತಮ್ಮ ವಿಗ್ರಹಗಳಿಂದಲೂ, ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ” ಎಂದು ನುಡಿಯುತ್ತಾನೆ.


ಅವನು ನನಗೆ, “ನೀನು ಕೊಂಡುಕೊಂಡು ಸೊಂಟಕ್ಕೆ ಬಿಗಿದ ನಡುಕಟ್ಟನ್ನು ತೆಗೆದುಕೊಂಡು ಹೊರಟು ಯೂಫ್ರೆಟಿಸ್ ನದಿಗೆ ಹೋಗಿ, ಅದನ್ನು ಅಲ್ಲಿ ಬಂಡೆಯ ಸಂದಿನೊಳಗೆ ಬಚ್ಚಿಡು” ಎಂಬುದಾಗಿ ನುಡಿದನು.


ಆಹಾ, ಬಹುಜಲಾಶ್ರಯಗಳ ಮಧ್ಯೆ ನಿವಾಸಿನಿಯಾಗಿರುವ ನಗರವೇ, ಧನಭರಿತಪುರವೇ, ನಿನ್ನ ಅಂತ್ಯವು ಬಂದಿದೆ, ನೀನು ಸೂರೆಮಾಡಿದ್ದು ಸಾಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು