Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 14:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ, ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮಾನವರನು ಪ್ರಭು ಸ್ವರ್ಗದಿಂದ ಸಮೀಕ್ಷಿಸುತಿಹನು I ದೇವರನು ಅರಸುವ ಸನ್ಮತಿಗಳಾರೆಂದು ವೀಕ್ಷಿಸುತಿಹನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರಿಗಾಗಿ ಹುಡುಕುವ ಬುದ್ಧಿವಂತರು ಮನುಷ್ಯರಲ್ಲಿ ಇದ್ದಾರೋ ಎಂದು ಯೆಹೋವನು ಪರಲೋಕದಿಂದ ಮನುಷ್ಯರನ್ನು ನೋಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇವರನ್ನು ಹುಡುಕುವ ಜ್ಞಾನಿಗಳು ಇದ್ದಾರೋ ಎಂದು ನೋಡುವುದಕ್ಕೆ ಯೆಹೋವ ದೇವರು ಸ್ವರ್ಗದಿಂದ, ಮನುಷ್ಯರ ಮೇಲೆ ದೃಷ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 14:2
29 ತಿಳಿವುಗಳ ಹೋಲಿಕೆ  

ತಿಳಿವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನು ಇಲ್ಲ.


ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.


ದೇವರು ಭೂಮಿಯನ್ನು ನೋಡಿದಾಗ ಅದು ಕೆಟ್ಟುಹೋಗಿ ಕಲುಷಿತಗೊಂಡಿತ್ತು. ಭೂನಿವಾಸಿಗಳೆಲ್ಲರೂ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.


ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು; ದುಷ್ಟರು ದುಷ್ಟರಾಗಿಯೇ ನಡೆಯುವರು, ಅವರಲ್ಲಿ ಯಾರಿಗೂ ವಿವೇಕವಿರದು; ಜ್ಞಾನಿಗಳಿಗೆ ವಿವೇಕವಿರುವುದು.


ಈ ಜನರ ಹೃದಯವು ಮಂಕಾಯಿತು. ಇವರ ಕಿವಿಗಳು ಮಂದವಾದವು. ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆ ಹೊಂದಬಾರದೆಂದು ನಿರ್ಧಾರ ಮಾಡಿಕೊಂಡಿದ್ದಾರೆ’” ಎಂಬುದೇ.


ಆದರೂ, ನೀನು ದೇಶದೊಳಗಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದು ಹಾಕಿ, ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟಿದ್ದರಿಂದ ನಿನ್ನಲ್ಲಿ ಒಳ್ಳೆಯದು ಉಂಟೆಂದು ತಿಳಿದು ಬಂದಿದೆ” ಎಂಬುದಾಗಿ ಹೇಳಿದನು.


“ಮೂಢನಾಗಿರುವವನು ಈ ಕಡೆಗೆ ತಿರುಗಲಿ” ಎಂದು ಕೂಗಿ,


ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತವೆ.


ಆಕಾಶದಿಂದ ನೋಡು, ಪರಿಶುದ್ಧವೂ, ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಉತ್ಸಾಹವೆಲ್ಲಿ, ನಿನ್ನ ಸಾಹಸ ಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ, ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿ ಹಿಡಿದಿದ್ದಿ.


ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.


ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.


ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ.


“ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನೂ ಆಶ್ರಯಿಸಿರಿ” ಎಂದು ಒಂದು ವೇಳೆ ನಿಮಗೆ ಹೇಳಾರು, “ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವುದು ಯುಕ್ತವೋ?


ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ.


ಹೀಗಿರಲು ನೀನು ನೀತಿ, ನ್ಯಾಯ, ಧರ್ಮವನ್ನೂ ಅಂದರೆ ಸಕಲ ಸನ್ಮಾರ್ಗಗಳನ್ನು ತಿಳಿದುಕೊಳ್ಳುವಿ.


ಪಶುಪ್ರಾಯನು ಅರಿಯನು; ಮೂರ್ಖನು ಇದನ್ನು ಗ್ರಹಿಸಿಕೊಳ್ಳನು.


ನನ್ನ ಕಣ್ಣುಗಳು ನಿರಂತರವಾಗಿ ಅಶ್ರುಧಾರೆ ಸುರಿಸುವುದನ್ನು, ಎಂದಿಗೂ ಬಿಡದು.


ಆಕೆಯು ಬುದ್ಧಿಹೀನರಿಗೆ, “ಮೂಢನಾಗಿರುವವನು ಈ ಕಡೆಗೆ ತಿರುಗಲಿ,


ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ, ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ.


ನಾನು ಇಳಿದು ಹೋಗಿ, ನನಗೆ ಮುಟ್ಟಿದ ಮೊರೆಯಂತೆಯೇ ಅವರು ಮಾಡಿರುವರೋ ಇಲ್ಲವೋ ಎಂದು ನೋಡಿ ತಿಳಿದುಕೊಳ್ಳುತ್ತೇನೆ” ಎಂದನು.


ಮನುಷ್ಯರು ಕಟ್ಟುತ್ತಿದ್ದ ಆ ಪಟ್ಟಣವನ್ನೂ, ಗೋಪುರವನ್ನೂ ನೋಡುವುದಕ್ಕೆ ಯೆಹೋವನು ಇಳಿದು ಬಂದನು.


ಆಹಾ, ನೀನು ಆಕಾಶವನ್ನು ಸೀಳಿ ಇಳಿದು ಬರಬಾರದೇ! ನಿನ್ನ ದರ್ಶನವು ಉಂಟಾಗಿ ಪರ್ವತಗಳು ಅಗಲಿದರೆ ಎಷ್ಟೋ ಒಳ್ಳೆಯದು!


ದೀನರು ಇದನ್ನು ನೋಡಿ ಹರ್ಷಿಸುವರು. ದೇವದರ್ಶನವನ್ನು ಅಪೇಕ್ಷಿಸುವವರೇ, ನಿಮ್ಮ ಆತ್ಮವು ಉಜ್ಜೀವಿಸಲಿ.


ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತ್ವವು ಅನೇಕರಲ್ಲಿ ಇಲ್ಲದಿದ್ದರೂ ಪೂರ್ವಿಕರ ದೇವರಾದ ಯೆಹೋವನನ್ನು ಹುಡುಕಬೇಕೆಂದು ಮನಸ್ಸುಮಾಡಿರುವವರಿಗೆಲ್ಲರಿಗೂ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದನು.


ನರನು ಎಷ್ಟರವನು! ಅವನು ಪರಿಶುದ್ಧನಾಗಿರುವುದು ಸಾಧ್ಯವೋ? ಮಾನವನಾಗಿ ಹುಟ್ಟಿದವನು ನೀತಿವಂತನಾಗಿರಬಹುದೇ?


ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.


ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನು ಅನುಸರಿಸುವ ಒಬ್ಬನಾದರೂ ಇದ್ದಾನೋ? ಇಂತಹ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬುದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷಮಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು