Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 14:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. ಪ್ರತಿಯೊಬ್ಬನೂ ದಾರಿತಪ್ಪಿದವನು, ಎಲ್ಲರೂ ಕೆಟ್ಟು ಹೋದವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದಾರಿತಪ್ಪಿಹೋದ ದ್ರೋಹಿಗಳು ಅವರೆಲ್ಲ I ಒಳಿತನ್ನು ಮಾಡುವವನಿಲ್ಲ; ಓರ್ವನೂ ಇಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. ಪ್ರತಿಯೊಬ್ಬನು ದಾರಿತಪ್ಪಿದವನು, ಎಲ್ಲರೂ ಕೆಟ್ಟುಹೋದವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಪ್ರತಿಯೊಬ್ಬನೂ ದೇವರಿಗೆ ವಿಮುಖನಾಗಿದ್ದಾನೆ. ಎಲ್ಲರೂ ಕೆಟ್ಟುಹೋಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಎಲ್ಲರೂ ದಾರಿತಪ್ಪಿ ಹೋಗಿದ್ದಾರೆ, ಎಲ್ಲರೂ ಕೆಟ್ಟು ಹೋಗಿದ್ದಾರೆ; ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ, ಒಬ್ಬರಾದರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 14:3
25 ತಿಳಿವುಗಳ ಹೋಲಿಕೆ  

ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ.


ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.


ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ.


ದುಷ್ಟರು ಜನ್ಮದಿಂದಲೇ ಧರ್ಮಭ್ರಷ್ಟರು; ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ತಪ್ಪಿದವರು.


ನಾವೆಲ್ಲರೂ ಪೂರ್ವದಲ್ಲಿ ಅವರ ಹಾಗೆಯೇ ಇದ್ದೆವು, ಶರೀರಭಾವದ ಆಸೆಗಳಿಗೆ ಅಧೀನರಾಗಿ, ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು.


ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.


ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.


ನಾನು ತಪ್ಪಿಹೋದ ಕುರಿಯಂತೆ ಅಲೆಯುತ್ತಿದ್ದೇನೆ, ನಿನ್ನ ಸೇವಕನನ್ನು ಪರಾಂಬರಿಸು. ನಾನು ನಿನ್ನ ಆಜ್ಞೆಗಳನ್ನು ಮರೆಯುವುದಿಲ್ಲ.


ದೇವರು ಮನುಷ್ಯರನ್ನು ಸತ್ಯವಂತನನ್ನಾಗಿ ಸೃಷ್ಟಿಸಿದನು. ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ.


ನನ್ನ ಮೂರ್ಖತನದ ಫಲವಾದ ಬಾಸುಂಡೆಗಳು, ಕೀವು ಸೋರಿ ದುರ್ವಾಸನೆಯಿಂದ ನಾರುತ್ತಿದೆ.


ಆತನು, “ನಿಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದ ಆ ಒಳ್ಳೇ ದೇಶವನ್ನು ಈ ದುಷ್ಟ ಸಂತತಿಯವರಲ್ಲಿ ಯಾರೂ ನೋಡುವುದಿಲ್ಲ” ಎಂದು ಪ್ರಮಾಣಮಾಡಿದನು.


ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಹೇಳುತ್ತಿದ್ದೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯವನ್ನು ಬಗೆಹರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?


ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ, ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ!


ಆ ರಾತ್ರಿಯಲ್ಲಿ ಫರೋಹನೂ, ಅವನ ಪರಿವಾರದವರೂ, ಐಗುಪ್ತ್ಯರೆಲ್ಲರೂ ಎದ್ದು ನೋಡಲಾಗಿ ಸಾವಿಲ್ಲದ ಮನೆ ಒಂದೂ ಇರಲಿಲ್ಲ. ಐಗುಪ್ತ ದೇಶದಲ್ಲಿ ದೊಡ್ಡ ಗೋಳಾಟವಾಯಿತು.


ಮೋಶೆಯು ಪ್ರಾರ್ಥಿಸಿದಂತೆಯೇ ಯೆಹೋವನು ಮಾಡಿದನು. ಆ ನೊಣಗಳೆಲ್ಲಾ ಫರೋಹನ ಬಳಿಯಿಂದಲೂ, ಅವನ ಪ್ರಜಾಪರಿವಾರದವರ ಬಳಿಯಿಂದಲೂ ತೊಲಗಿಹೋದವು. ಒಂದೂ ಉಳಿಯಲಿಲ್ಲ.


ದೇವರು ಭೂಮಿಯನ್ನು ನೋಡಿದಾಗ ಅದು ಕೆಟ್ಟುಹೋಗಿ ಕಲುಷಿತಗೊಂಡಿತ್ತು. ಭೂನಿವಾಸಿಗಳೆಲ್ಲರೂ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.


ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷರು ಲೋಕದಲ್ಲಿ ಇಲ್ಲವೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು