Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 141:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ, ನಾನು ದುಷ್ಟರೊಡನೆ ಸೇರಿ ಕೆಟ್ಟ ಕೆಲಸಗಳನ್ನು ನಡೆಸದಂತೆಯೂ ನನ್ನನ್ನು ಕಾಪಾಡು. ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮಾಡು ನನ್ನ ಹೃದಯ ದುರಾಚಾರವನು ಮೆಚ್ಚದಂತೆ I ಕಾಪಾಡು ದುರ್ಜನರೊಡಗೂಡಿ ಕೇಡನು ಮಾಡದಂತೆ I ನೋಡು ದುರುಳರೌತಣಗಳಲಿ ನಾ ಪಾಲ್ಗೊಳ್ಳದಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ ನಾನು ದುಷ್ಟರೊಡನೆ ಕೂಡಿ ಕೆಟ್ಟ ಕೆಲಸಗಳನ್ನು ನಡಿಸದಂತೆಯೂ ನನ್ನನ್ನು ಕಾಪಾಡು. ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಕೆಟ್ಟದ್ದನ್ನು ಮಾಡಲು ನನಗೆ ಅವಕಾಶಕೊಡಬೇಡ. ಕೆಟ್ಟವರೊಂದಿಗೆ ಸೇರಿ ಕೆಟ್ಟದ್ದನ್ನು ಮಾಡದಂತೆ ನನ್ನನ್ನು ಕಾಪಾಡು. ಅವರು ಹರ್ಷಿಸುವಂಥವುಗಳಲ್ಲಿ ನಾನು ಪಾಲುಗಾರನಾಗದಂತೆ ನೋಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅಪರಾಧ ಮಾಡುವವರ ಸಂಗಡ ನಾನು ಸಹ ಸೇರಿಕೊಂಡು ಕೆಟ್ಟ ಕಾರ್ಯಗಳನ್ನು ಮಾಡಲು ನನ್ನ ಹೃದಯ ಸೆಳೆಯದಂತೆ ಕಾಪಾಡಿರಿ; ಅವರ ಸವಿ ಊಟಗಳನ್ನು ನಾನು ಉಣ್ಣದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 141:4
21 ತಿಳಿವುಗಳ ಹೋಲಿಕೆ  

ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು


ನನ್ನ ಮನಸ್ಸನ್ನು ದ್ರವ್ಯಾಶೆಗಲ್ಲ, ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಸು.


ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನಪಡಿಸುವುದೇಕೆ? ನಿನ್ನ ಸೇವಕರ ನಿಮಿತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು.


ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.


ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”


ನಾವು ನಮ್ಮ ಪೂರ್ವಿಕರಿಗೆ ಕೊಡಲ್ಪಟ್ಟ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವಂತೆ ನಮ್ಮ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿಕೊಳ್ಳಿಲಿ.


ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ “ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು” ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ.


ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.


ಪರಲೋಕದಿಂದ ಹೇಳುವ ಮತ್ತೊಂದು ಧ್ವನಿಯನ್ನು ಕೇಳಿದೆನು, “ನನ್ನ ಜನರೇ, ಅವಳನ್ನು ಬಿಟ್ಟು ಬನ್ನಿರಿ, ಏಕೆಂದರೆ ಅವಳ ಪಾಪಗಳಲ್ಲಿ ನೀವೂ ಪಾಲುಗಾರರಾಗಬಾರದು. ಅವಳಿಗೆ ಆಗುವ ಉಪದ್ರವಗಳು ನಿಮ್ಮನ್ನು ಬಾಧಿಸಬಾರದು.


ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು ಮತ್ತು ಕೇಳುವ ಕಿವಿ ಇವುಗಳನ್ನು ಯೆಹೋವನು ಇಂದಿನವರೆಗೂ ನಿಮಗೆ ಅನುಗ್ರಹಿಸಲಿಲ್ಲ.


‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ, ‘ಹೋಗಿ ಅದರಂತೆ ಮಾಡು ಅವನನ್ನು ಪ್ರೇರೇಪಿಸಿ ಸಫಲವಾಗುವಿ’ ಅಂದನು.


ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿಮ್ಮಿಂದ ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪವಾಗಿತ್ತು; ಅದು ಈಗಾಗಲೇ ನೆರವೇರಿತಲ್ಲಾ.


ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲರನ್ನು ಆಹ್ವಾನಿಸಿದರು. ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು.


ಅವನು ಹೋಗಿ ಅವುಗಳನ್ನು ತಂದು ತಾಯಿಗೆ ಕೊಟ್ಟನು. ರೆಬೆಕ್ಕಳು ಅವನ ತಂದೆಗೆ ಇಷ್ಟವಾಗಿದ್ದ ಸವಿಯೂಟವನ್ನು ಸಿದ್ಧಪಡಿಸಿದಳು.


ಆದರೆ ದೇವರ ಮನುಷ್ಯನು ಅರಸನಿಗೆ, “ನೀನು ನನಗೆ ನಿನ್ನ ಆಸ್ತಿಯಲ್ಲಿ ಅರ್ಧವನ್ನು ಕೊಟ್ಟರೂ, ನಾನು ನಿನ್ನ ಸಂಗಡ ಬರುವುದಿಲ್ಲ. ಇಲ್ಲಿ ಅನ್ನ ಪಾನಗಳನ್ನು ತೆಗೆದುಕೊಳ್ಳುವುದಿಲ್ಲ.


ನೀನು ದುಷ್ಟರೊಡನೆಯೂ, ದುರ್ಜನಗಳ ಸಂಗಡಲೂ ನನ್ನನ್ನೂ ಎಳೆದುಕೊಂಡು ಹೋಗಬೇಡ. ಅವರು ಹೊರಗೆ ಒಳ್ಳೆಯದಾಗಲಿ ಎಂದು ಹೇಳಿದರೂ, ಒಳಗೆ ಕೇಡಾಗಲಿ ಎಂದು ಯೋಚಿಸುವವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು