Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 142:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ನನ್ನ ಬಲಗಡೆಗೆ ನೋಡಲು, ಅಲ್ಲಿ ಸಹಾಯಕರು ಯಾರೂ ಇಲ್ಲ, ಆಶ್ರಯವೂ ನಾಶವಾಯಿತು, ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಕ್ಕಪಕ್ಕದಲಿ ಸಹಾಯಕರಾರೂ ಇಲ್ಲ I ಆಶ್ರಯರಹಿತ, ಹಿತಚಿಂತಕರಾರೂ ನನಗಿಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ಬಲಗಡೆಗೆ ನೋಡಿ ಪರಾಂಬರಿಸು; ಅಲ್ಲಿ ಸಹಾಯಕರು ಯಾರೂ ಇಲ್ಲ. ಆಶ್ರಯವು ನಾಶವಾಯಿತು; ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಸುತ್ತಮುತ್ತ ನೋಡಿದರೂ ನನ್ನ ಸ್ನೇಹಿತರಲ್ಲಿ ಯಾರೂ ಕಾಣುತ್ತಿಲ್ಲ. ಓಡಿಹೋಗಲು ನನಗೆ ಯಾವ ಸ್ಥಳವೂ ಇಲ್ಲ. ನನ್ನನ್ನು ರಕ್ಷಿಸಲು ಯಾರೂ ಪ್ರಯತ್ನಿಸುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೋಡಿರಿ ನನ್ನ ಬಲಗಡೆಯಲ್ಲಿ, ನನ್ನ ಪರವಾಗಿ ಯಾರೂ ಇಲ್ಲ; ಆಶ್ರಯವು ನನಗೆ ಇಲ್ಲ; ನನಗಾಗಿ ಚಿಂತಿಸುವವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 142:4
19 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ, “ಇಗೋ, ‘ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರ’ ಎಂದು ಜನರು ಹೇಳಿ, ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ, ನಿನ್ನನ್ನು ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.”


ನನ್ನ ಆಪ್ತಮಿತ್ರರನ್ನು ದೂರಮಾಡಿದಿ; ಅಂಧಕಾರವೇ ನನ್ನ ಒಡನಾಡಿ.


ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು; ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ.


ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ನನ್ನ ಆಪ್ತರು ನನ್ನನ್ನು ನೋಡಿ ಅಸಹ್ಯಪಟ್ಟರು, ನನ್ನನ್ನು ಅವರು ಹೇಸಿ ಬಿಟ್ಟುಹೋಗುವಂತೆ ಮಾಡಿದ್ದೀ; ಸಿಕ್ಕಿಬಿಟ್ಟಿದ್ದೇನೆ, ಬಿಡಿಸಿಕೊಳ್ಳಲಾರೆನು.


ನಿಂದೆಯಿಂದ ನಿರಾಶೆಗೊಂಡು ಕುಂದಿಹೋಗಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ; ಸಿಕ್ಕಲಿಲ್ಲ.


ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.


ದಾವೀದನು ತನ್ನ ಮನಸ್ಸಿನಲ್ಲಿ, “ನಾನು ಇಲ್ಲೇ ಇದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಸಾಯಲೇಬೇಕು ಆದ್ದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆ ಮೇಲೆ ಸೌಲನು ಇಸ್ರಾಯೇಲ್ಯರ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು. ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು” ಅಂದುಕೊಂಡನು.


ಕುರುಬರು ಓಡಿಹೋಗುವುದಕ್ಕೆ ಮಾರ್ಗವು ಸಿಕ್ಕದು, ಮಂದೆಯ ಹಿರಿಯ ನಾಯಕರು ತಪ್ಪಿಸಿಕೊಳ್ಳುವುದಕ್ಕೆ ಆಸ್ಪದ ದೊರೆಯದು.


ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು, ಪ್ರಾಣಬಿಡಬೇಕೆಂಬುದೇ ಅವರ ಬಯಕೆ.”


ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.


ನಾನು ಯೆಹೋವನಿಗೆ, “ನೀನೇ ನನ್ನ ದೇವರು, ಯೆಹೋವನೇ, ನನ್ನ ವಿಜ್ಞಾಪನೆಗೆ ಕಿವಿಗೊಡು,


ಕೆಡುಕರ ಉರುಲಿನಲ್ಲಿ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು, ಅವರು ಬೀಸಿಟ್ಟಿರುವ ಬಲೆಯಿಂದ ನನ್ನನ್ನು ತಪ್ಪಿಸು.


ನನ್ನ ಆತ್ಮವು ಕುಂದಿಹೋಗಿದೆ; ನನ್ನ ಮನಸ್ಸು ಬೆರಗಾಗಿದೆ.


ಸುಲಿಗೆಯವರ ಗುಂಪನ್ನು ಫಕ್ಕನೆ ಅವರ ಮೇಲೆ ಬೀಳಮಾಡು, ಅವರ ಮನೆಗಳೊಳಗಿಂದ ಅರಚಾಟವು ಕೇಳಿಸಲಿ. ಅವರು ನನ್ನನ್ನು ಹಿಡಿಯಲಿಕ್ಕೆ ಗುಂಡಿಯನ್ನು ತೋಡಿ, ನನ್ನ ಕಾಲುಗಳಿಗೆ ಪಾಶಗಳನ್ನು ಗುಪ್ತವಾಗಿ ಒಡ್ಡಿದ್ದಾರೆ.


“ನಿರ್ಜೀವ ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ದೇವರ ಕರುಣಾನಿಧಿಯನ್ನು ತೊರೆದುಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು