Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 142:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನ ಕೂಗನ್ನು ಲಾಲಿಸು, ಬಲು ಕುಗ್ಗಿಹೋಗಿದ್ದೇನೆ. ಹಿಂಸಕರ ಕೈಯಿಂದ ನನ್ನನ್ನು ತಪ್ಪಿಸು, ಅವರು ನನಗಿಂತ ಬಲಿಷ್ಠರಾಗಿದ್ದಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕುಗ್ಗಿ ಹೋಗಿರುವೆ, ನನ್ನ ಕೂಗಿಗೆ ಪ್ರಭು ಕಿವಿಗೊಡು I ಬಲಿಷ್ಠ ಹಿಂಸಾತ್ಮಕರಿಂದ ನನ್ನನು ಪಾರುಮಾಡು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ಕೂಗನ್ನು ಲಾಲಿಸು, ಬಲು ಕುಗ್ಗಿಹೋಗಿದ್ದೇನೆ. ಹಿಂಸಕರ ಕೈಯಿಂದ ನನ್ನನ್ನು ತಪ್ಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ನೀನು ನನಗೆ ಬೇಕೇಬೇಕು. ನನ್ನನ್ನು ಬೆನ್ನಟ್ಟುತ್ತಿರುವ ಜನರಿಂದ ನನ್ನನ್ನು ರಕ್ಷಿಸು. ಅವರು ನನಗಿಂತ ಬಹು ಬಲಿಷ್ಠರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನ ಕೂಗನ್ನು ಆಲೈಸಿರಿ, ಏಕೆಂದರೆ ನಾನು ಬಹಳ ಕುಂದಿಹೋಗಿದ್ದೇನೆ; ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸಿರಿ, ಏಕೆಂದರೆ ಅವರು ನನಗಿಂತ ಬಲಿಷ್ಠರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 142:6
18 ತಿಳಿವುಗಳ ಹೋಲಿಕೆ  

ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಪಿಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹಳವಾಗಿ ಕುಗ್ಗಿಹೋಗಿದ್ದೇವೆ.


ಯೆಹೋವನು ಸರಳ ಮನಸ್ಸುಳ್ಳವರನ್ನು ಕಾಪಾಡುವನು; ಕುಗ್ಗಿದವನಾದ ನನ್ನನ್ನು ರಕ್ಷಿಸಿದನು.


ನಾವು ದೀನಾವಸ್ಥೆಯಲ್ಲಿ ಇದ್ದಾಗ ನಮ್ಮನ್ನು ನೆನಪುಮಾಡಿಕೊಂಡನು, ಆತನ ಪ್ರೀತಿಯು ಶಾಶ್ವತವಾದದ್ದು.


ಯೆಹೋವನೇ, ನ್ಯಾಯವಾದುದನ್ನು ಆಲೈಸು; ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಕಪಟವಾದ ಬಾಯಿಂದ ಬಂದದ್ದಲ್ಲ.


ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ ಪೂರ್ಣ ಜಯಶಾಲಿಗಳಾಗಿದ್ದೇವೆ.


ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ.


ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.


ಇಗೋ, ಅವರು ನನ್ನ ಜೀವಕ್ಕೆ ಹೊಂಚುಹಾಕುತ್ತಾರೆ; ಬಲಿಷ್ಠರು ನನಗೆ ವಿರುದ್ಧವಾಗಿ ಗುಂಪುಕೂಡಿದ್ದಾರೆ. ಯೆಹೋವನೇ, ನಾನು ನಿರ್ದೋಷಿಯೂ ನಿರಪರಾಧಿಯೂ ಅಲ್ಲವೇ!


ನನ್ನ ಶತ್ರುಗಳು ಚುರುಕಾದವರೂ, ಬಲಿಷ್ಠರೂ ಆಗಿದ್ದಾರೆ; ನನ್ನನ್ನು ಅನ್ಯಾಯವಾಗಿ ದ್ವೇಷಿಸುವವರು ಬಹು ಜನ.


ನನಗಿಂತ ಬಲಿಷ್ಠರೂ, ಪುಷ್ಟರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು.


ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ; ನನಗೆ ವೈರಿಗಳಾಗಿ ನಿಂತ ಜನರು ಅತ್ಯಧಿಕವಾಗಿದ್ದಾರೆ.


ಇಸ್ರಾಯೇಲರ ಅರಸನೇ ಯಾರನ್ನು ಹಿಂಬಾಲಿಸಿ ಹೊರಟಿರುವೇ? ಯಾರನ್ನು ಹಿಡಿಯಬೇಕೆಂದಿರುತ್ತೀ? ಸತ್ತ ನಾಯಿಯನ್ನೋ? ಒಂದು ಬಡ ನೊಣವನ್ನೋ?.


ವೈರಿಯು ನನ್ನ ಪ್ರಾಣವನ್ನು ಹಿಂಸಿಸಿದ್ದಾನೆ; ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾನೆ. ಕಾರ್ಗತ್ತಲೆಯಲ್ಲಿ ನನ್ನನ್ನು ಹಾಕಿದ್ದಾನೆ; ಬಹು ಕಾಲದಿಂದ ಸತ್ತವರಂತಿದ್ದೇನೆ.


ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು ಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ.


ಆದುದರಿಂದ ಭೂಮಿಯು ಮಾರ್ಪಟ್ಟರೂ, ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ, ನಮಗೇನೂ ಭಯವಿಲ್ಲ.


ನಾನು ಯೆಹೋವನಿಗೆ, “ನೀನೇ ನನ್ನ ಶರಣನು, ನನ್ನ ದುರ್ಗವು, ನಾನು ಭರವಸವಿಟ್ಟಿರುವ ನನ್ನ ದೇವರು” ಎಂದು ಹೇಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು