Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 147:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಆನಂದಿಸುವುದು ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮೆಚ್ಚುವನಾತ ತನ್ನಲಿ ಭಯಭಕ್ತಿಯುಳ್ಳವರನು I ತನ್ನಚಲ ಪ್ರೀತಿಯಲಿ ಭರವಸೆಯುಳ್ಳವರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಆನಂದಿಸುವದು ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ತನ್ನನ್ನು ಆರಾಧಿಸುವ ಜನರಲ್ಲೇ ಸಂತೋಷಪಡುವನು. ಆತನು ತನ್ನ ಶಾಶ್ವತ ಪ್ರೀತಿಯಲ್ಲಿ ಭರವಸವಿಟ್ಟಿರುವವರನ್ನು ಮೆಚ್ಚಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರು ತಮಗೆ ಭಯಪಡುವವರಲ್ಲಿ ಆನಂದಿಸುತ್ತಾರೆ, ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರಲ್ಲಿ ಹರ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 147:11
13 ತಿಳಿವುಗಳ ಹೋಲಿಕೆ  

ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.


ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು.


ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.


ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.


ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ; ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.


ನನ್ನ ನ್ಯಾಯಸ್ಥಾಪನೆಯನ್ನು ಬಯಸುವವರು ಆನಂದದೊಡನೆ ಜಯಧ್ವನಿಮಾಡಲಿ; ತನ್ನ ಸೇವಕನ ಹಿತವನ್ನು ಕೋರುವ ಯೆಹೋವನಿಗೆ ಸ್ತೋತ್ರ ಎಂದು ಯಾವಾಗಲೂ ಹೇಳುವವರಾಗಲಿ.


ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ, ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು.


ವಕ್ರಹೃದಯರು ಯೆಹೋವನಿಗೆ ಅಸಹ್ಯರು, ಸನ್ಮಾರ್ಗಿಗಳು ಆತನ ದಯೆಗೆ ಪಾತ್ರರು.


ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.


ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.


ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ.


ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಹಾಲೂ, ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಸೇರಿಸಿ ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು