Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 148:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬೆಂಕಿ, ಕಲ್ಮಳೆ, ಹಿಮ, ಹಬೆ ಇವುಗಳು, ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕಿಚ್ಚು, ಕಲ್ಮಳೆ, ಹಿಮ, ಹಬೆ ಇವುಗಳೆಲ್ಲವೂ I ಆತ ಹೇಳಿದಂತೆ ಕೇಳುವ ಬಿರುಗಾಳಿಯೂ, II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬೆಂಕಿ, ಕಲ್ಮಳೆ, ಹಿಮ, ಹಬೆ ಇವುಗಳೂ ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆತನು ಬೆಂಕಿಯನ್ನೂ ಆಲಿಕಲ್ಲನ್ನೂ ಮಂಜನ್ನೂ ಹೊಗೆಯನ್ನೂ ಬಿರುಗಾಳಿಯನ್ನೂ ಉಂಟುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮಿಂಚೇ, ಕಲ್ಮಳೆಯೇ, ಹಿಮವೇ, ಹಬೆಯೇ, ದೇವರ ಮಾತನ್ನು ಕೇಳುವ ಬಿರುಗಾಳಿಯೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 148:8
24 ತಿಳಿವುಗಳ ಹೋಲಿಕೆ  

ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಅಲಿಕಲ್ಲು ಸುಮಾರು ನಲ್ವತ್ತು ಕಿಲೊಗ್ರಾಮಿನಷ್ಟು ತೂಕವಾಗಿತ್ತು. ಆ ಆಲಿಕಲ್ಲಿನ ಮಳೆಯ ಉಪದ್ರವವು ಬಹಳ ವಿಪರೀತವಾದ್ದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.


ಆಗ ಯೆಹೋವನು ದೊಡ್ಡ ಬಿರುಗಾಳಿಯನ್ನು ಸಮುದ್ರದ ಮೇಲೆ ಬರಮಾಡಿದನು. ಸಮುದ್ರದಲ್ಲಿ ದೊಡ್ಡ ತುಫಾನು ಎದ್ದು ಹಡಗು ಒಡೆದುಹೋಗುವ ಹಾಗಾಯಿತು.


ಕರ್ತನಾದ ಯೆಹೋವನು ಇನ್ನೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಕರ್ತನಾದ ಯೆಹೋವನು ತನ್ನ ಜನರನ್ನು ದಂಡಿಸುವುದಕ್ಕಾಗಿ ಅಗ್ನಿಯನ್ನು ಕರೆದನು. ಅದು ಮಹಾ ಸಾಗರವನ್ನು ನುಂಗಿ ದೇಶವನ್ನೂ ತಿಂದುಬಿಟ್ಟಿತು.


ಇಗೋ, ಪರ್ವತಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ ಮತ್ತು ಭೂಮಿಯ ಉನ್ನತ ಪ್ರದೇಶಗಳನ್ನು ತುಳಿದುಬಿಡುವಾತನು” ಸೇನಾಧೀಶ್ವರ ದೇವರಾದ ಯೆಹೋವನೆಂಬುದೇ ನನ್ನ ನಾಮಧೇಯ.


ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು ಮಾಡುವೆನು. ರಕ್ತ, ಬೆಂಕಿ, ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು.


ಯೆಹೋವನು ಅಗ್ನಿಯಿಂದಲೂ ಮತ್ತು ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು; ಆಗ ಆತನಿಂದ ಹತರಾಗುವವರು ಬಹು ಜನರು.


ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆ ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ.


ಆತನ ಸನ್ನಿಧಿಯ ಪ್ರಕಾಶದಿಂದ ಕಲ್ಮಳೆಯೂ, ಉರಿಗೆಂಡಗಳೂ ಹೊರಟು, ಆತನ ಸುತ್ತಲಿದ್ದ ಕಪ್ಪು ಮೋಡಗಳನ್ನು ದಾಟಿ ಸುರಿದವು.


ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್‍ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ತಲುಪುವವರೆಗೂ ಯೆಹೋವನು ಅವರ ಮೇಲೆ ಆಕಾಶದಿಂದ ದೊಡ್ಡ ಆಲಿಕಲ್ಲಿನ ಮಳೆಯನ್ನು ಸುರಿಸಿದನು. ಈ ಕಾರಣದಿಂದ ಅನೇಕರು ಸತ್ತರು ಇಸ್ರಾಯೇಲ್ಯರ ಕತ್ತಿಯಿಂದ ಸಂಹಾರವಾದವರಿಗಿಂತ ಆಲಿಕಲ್ಲಿನ ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.


ನಂತರ ಯೆಹೋವನ ಬಳಿಯಿಂದ ಬೆಂಕಿಹೊರಟು, ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ದಹಿಸಬಿಟ್ಟಿತು.


ಆಗ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ದಹಿಸಿಬಿಟ್ಟಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು.


ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ, ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ಇಬ್ಭಾಗವಾಯಿತು.


ಯೆಹೋವನು ಪಶ್ಚಿಮದಿಂದ ಬಿರುಗಾಳಿ ಬೀಸುವಂತೆ ಮಾಡಿದನು. ಅದು ಆ ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪುಸಮುದ್ರದೊಳಗೆ ಹಾಕಿಬಿಟ್ಟಿತು. ಐಗುಪ್ತ ದೇಶದ ಮೇರೆಗಳೊಳಗೆ ಒಂದು ಮಿಡತೆಯೂ ನಿಲ್ಲಲಿಲ್ಲ.


ಮೋಶೆ ತನ್ನ ಕೋಲನ್ನು ಐಗುಪ್ತ ದೇಶದ ಮೇಲೆ ಚಾಚಿದಾಗ, ಯೆಹೋವನು ಹಗಲಿರುಳು ಮೂಡಣದಿಕ್ಕಿನಿಂದ ಗಾಳಿಯನ್ನು ಬೀಸುವಂತೆ ಮಾಡಿದನು. ಹೊತ್ತಾರೆ ಗಾಳಿಯ ದೆಸೆಯಿಂದ ಮಿಡತೆಗಳು ಬಂದಿದ್ದವು.


ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ


ಸಿಡಿಲುಗಳು ಭೂಮಂಡಲದಲ್ಲೆಲ್ಲಾ ತಾನು ವಿಧಿಸುವುದನ್ನೇ ಮಾಡಲಿ ಎಂದು, ಅವುಗಳನ್ನು ನಡಿಸಿ ಸುತ್ತಮುತ್ತಲು ತಿರುಗಿಸುವನು.


ಆಗ ನಾವಿಕರು ಹೆದರಿ ತಮ್ಮತಮ್ಮ ದೇವರುಗಳಿಗೆ ಮೊರೆಯಿಟ್ಟರು. ಹಡಗನ್ನು ಹಗುರ ಮಾಡಲು ಹಡಗಿನಲ್ಲಿರುವ ಸರಕುಗಳನ್ನು ಸಮುದ್ರಕ್ಕೆ ಬಿಸಾಡಿಬಿಟ್ಟರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಮಲಗಿ ಗಾಢನಿದ್ರೆ ಮಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು