Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 150:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕೊಂಬೂದುತ್ತಾ ಆತನನ್ನು ಸ್ತುತಿಸಿರಿ; ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆತನನ್ನು ಸ್ತುತಿಸಿರಿ ಕೊಂಬುಗಳನ್ನೂದುತಾ I ಸ್ವರಮಂಡಲಗಳನು, ಕಿನ್ನರಿಗಳನು ಬಾರಿಸುತಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕೊಂಬೂದುತ್ತಾ ಆತನನ್ನು ಸ್ತುತಿಸಿರಿ; ಸ್ವರಮಂಡಲಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ತುತ್ತೂರಿಗಳನ್ನೂ ಕೊಂಬುಗಳನ್ನೂ ಊದುತ್ತಾ ಆತನನ್ನು ಸ್ತುತಿಸಿರಿ! ಹಾರ್ಪ್‌ವಾದ್ಯಗಳನ್ನೂ ಲೈರ್‌ವಾದ್ಯಗಳನ್ನೂ ನುಡಿಸುತ್ತಾ ಆತನನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ತುತೂರಿಯ ಶಬ್ದದಿಂದ ದೇವರನ್ನು ಸ್ತುತಿಸಿರಿ, ಕಿನ್ನರಿಯಿಂದಲೂ, ವೀಣೆಯಿಂದಲೂ, ಅವರನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 150:3
17 ತಿಳಿವುಗಳ ಹೋಲಿಕೆ  

ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ; ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ಸಂಕೀರ್ತಿಸಿರಿ.


ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ.


ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ, ರಾತ್ರಿಯಲ್ಲಿ ನಿನ್ನ ಸತ್ಯವನ್ನೂ ವರ್ಣಿಸುವುದು ಉಚಿತವಾಗಿದೆ.


ಸ್ವರಮಂಡಲವೇ, ಕಿನ್ನರಿಯೇ, ಎಚ್ಚರಗೊಳ್ಳಿರಿ. ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು.


ಹೇಮಾನ್ ಮತ್ತು ಯೆದುತೂನರ ಹತ್ತಿರ ವಾದ್ಯಗಾರರಿಗಾಗಿ ತುತ್ತೂರಿ, ತಾಳ ಮೊದಲಾದ ವಾದ್ಯಗಳೂ ಮತ್ತು ದೇವಕೀರ್ತನಾ ಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿ ನೇಮಿಸಲ್ಪಟ್ಟರು.


ಹೀಗೆ ಎಲ್ಲಾ ಇಸ್ರಾಯೇಲರು ಆನಂದ ಘೋಷಣೆಗಳಿಂದಲೂ, ಕೊಂಬು ಮತ್ತು ತುತ್ತೂರಿಗಳನ್ನು, ತಾಳ, ತಂತಿ ವಾದ್ಯಗಳ ಸಂಗೀತದಿಂದ ತಾಳಹಾಕುತ್ತಾ ಕಿನ್ನರಿ ಸ್ವರಮಂಡಲಗಳನ್ನು ನುಡಿಸುತ್ತಾ, ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತಂದರು.


ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ ಮತ್ತು ಎಲೀಯೆಜೆರ್ ಎಂಬ ಯಾಜಕರು ತುತ್ತೂರಿಗಳನ್ನು ಊದುತ್ತಾ ದೇವ ಮಂಜೂಷದ ಮುಂದೆ ಹೋಗುವವರು. ಓಬೇದೆದೋಮ್ ಮತ್ತು ಯೆಹೀಯ ಎಂಬುವವರು ಮಂಜೂಷದ ದ್ವಾರಪಾಲಕರಾಗಿದ್ದರು.


ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯು, ಹಬ್ಬಗಳಲ್ಲಿಯು, ಅಮಾವಾಸ್ಯೆಗಳಲ್ಲಿಯು ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ಆ ತುತ್ತೂರಿಯ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು, ನಾನೇ ನಿಮ್ಮ ದೇವರಾದ ಯೆಹೋವನು.”


ನೀವು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಪೂಜಿಸಬೇಕು.


ದಾವೀದನೂ ಎಲ್ಲಾ ಇಸ್ರಾಯೇಲರೂ ಶಂಕುಮರದಿಂದ (ಸೈಪ್ರಸ್ ಮರ) ಮಾಡಿದ ಕಿನ್ನರಿ, ಸ್ವರಮಂಡಲ, ದಮ್ಮಡಿ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ಯೆಹೋವನ ಮುಂದೆ ನರ್ತನ ಮಾಡುತ್ತಾ ಹೋದರು.


ಹೀಗೆ ದಾವೀದನೂ ಎಲ್ಲಾ ಇಸ್ರಾಯೇಲರೂ ಅರ್ಭಟಿಸುತ್ತಾ, ತುತ್ತೂರಿ ಊದುತ್ತಾ, ಯೆಹೋವನ ಮಂಜೂಷವನ್ನು ತಂದರು.


ಜೆಕರ್ಯ, ಅಜೀಯೇಲ್, ಶೆಮೀರಾಮೋತ್, ಯೆಹೀಯೇಲ್,, ಉನ್ನೀ, ಎಲೀಯಾಬ್, ಮಾಸೇಯ ಮತ್ತು ಬೆನಾಯ ಎಂಬುವವರು ತಾರಕಸ್ಥಾಯಿಯ ಸ್ವರಮಂಡಲಗಳನ್ನು ಬಾರಿಸುವವರು.


ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ,


ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಏಕ ಸ್ವರದಿಂದ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವುದಕ್ಕಾಗಿ ತುತ್ತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತ್ತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿಯೊಡನೆ ಹೀಗೆ ಹಾಡಿದರು, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವುದು” ಎಂದು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ, ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.


ಅವರು ಸ್ವರಮಂಡಲ, ಕಿನ್ನರಿ, ತುತ್ತೂರಿ, ಇವುಗಳೊಡನೆ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು