Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ, ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ತಿವಾರಗಳು ಕಂಡುಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಪ್ರಭು, ನಿನ್ನ ಗದರಿಕೆಯಿಂದ, ನಿನ್ನಾ ಶ್ವಾಸಭರದಿಂದ I ಕಾಣಿಸಿಕೊಂಡಿತು ಇಂಗಿಹೋದ ಸಮುದ್ರದ ತಳ I ತೋರಿಬಂದಿತು ಭೂಲೋಕದ ಅಸ್ತಿಭಾರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ತಿವಾರಗಳು ತೋರಿಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನೇ, ನೀನು ಆಜ್ಞಾಪಿಸಿದಾಗ ಬಿರುಗಾಳಿಯು ಬೀಸತೊಡಗಿ ನೀರನ್ನು ನೂಕಲು ಸಮುದ್ರದ ತಳವೇ ಕಾಣಿಸಿತು. ಭೂಮಿಯ ಅಸ್ತಿವಾರಗಳೂ ಕಾಣಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರೇ, ನಿಮ್ಮ ಗದರಿಕೆಯಿಂದಲೂ, ನಿಮ್ಮ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ತಳವು ಕಾಣಿಸಿದವು, ಭೂಲೋಕದ ಅಸ್ತಿವಾರಗಳು ಬಯಲಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:15
22 ತಿಳಿವುಗಳ ಹೋಲಿಕೆ  

ಆತನು ಗದರಿಸಲು ಕೆಂಪು ಸಮುದ್ರವು ಒಣಗಿಹೋಯಿತು; ಅಡವಿಯನ್ನೋ ಎಂಬಂತೆ ಸಾಗರವನ್ನು ದಾಟಿಸಿದನು.


ನಿನ್ನ ಮೂಗಿನ ಶ್ವಾಸದಿಂದ ಸಮುದ್ರದ ನೀರು ಒಟ್ಟುಗೂಡಿದವು; ಪ್ರವಾಹವು ಗೋಡೆಯೋಪಾದಿಯಲ್ಲಿ ನಿಂತುಕೊಂಡಿತು; ಸಾಗರದಾಳದೊಳಗಿನ ನೀರು ಗಟ್ಟಿಯಾಯಿತು.


ಬೆಟ್ಟಗಳೇ ಯೆಹೋವನ ವ್ಯಾಜ್ಯವನ್ನು ಕೇಳಿರಿ. ಭೂಮಿಯ ಶಾಶ್ವತವಾದ ಅಸ್ತಿವಾರಗಳೇ, ಕಿವಿಗೊಡಿರಿ. ಯೆಹೋವನಿಗೆ ಆತನ ಪ್ರಜೆಯ ಮೇಲೆ ವ್ಯಾಜ್ಯವಿದೆ. ಆತನು ಇಸ್ರಾಯೇಲಿನೊಂದಿಗೆ ವಿವಾದಿಸುತ್ತಾನೆ.”


ಯೆಹೋವನು, “ಮೇಲೆ ಆಕಾಶಮಂಡಲವನ್ನು ಅಳೆಯಬಹುದಾದರೆ, ಕೆಳಗೆ ಭೂಮಂಡಲದ ಅಸ್ತಿವಾರವನ್ನು ಪರೀಕ್ಷಿಸಬಹುದಾದರೆ ಆಗ ಇಸ್ರಾಯೇಲ್ ವಂಶವು ಮಾಡಿರುವ ಸಕಲ ದುಷ್ಕೃತ್ಯಗಳ ನಿಮಿತ್ತ, ನಾನು ಆ ವಂಶವನ್ನು ನಿರಾಕರಿಸಿಬಿಡುವೆನು” ಎಂದು ಹೇಳುತ್ತಾನೆ.


ಭೂಮಿಯು ಯುಗಯುಗಾಂತರಕ್ಕೂ ಕದಲದ ಹಾಗೆ ಅದನ್ನು ದೃಢವಾದ ಅಸ್ತಿವಾರದ ಮೇಲೆ ಸ್ಥಾಪಿಸಿದ್ದೀ.


ಯಾಕೋಬ ವಂಶದವರ ದೇವರೇ, ನಿನ್ನ ಗದರಿಕೆಯಿಂದ ರಥಬಲವೂ, ಅಶ್ವಬಲವೂ ಮೈಮರೆತು ಹೋದವು.


ದೇವರ ಶ್ವಾಸದಿಂದ ನಾಶವಾಗುತ್ತಾರೆ. ಆತನ ಸಿಟ್ಟೆಂಬ ಗಾಳಿಯಿಂದ ಹಾಳಾಗುತ್ತಾರೆ.


ಆಗ ಯೆಹೋವನ ಗದರಿಕೆಯಿಂದಲೂ ಆತನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ಥಿವಾರವು ತೋರಿಬಂದವು.


ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು; ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು.


ಆದುದರಿಂದ, ನಾನು ಅವನ ಮೇಲೆ ಭಯದ ಆತ್ಮವನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಹೋಗಿ ಅಲ್ಲಿ ಕತ್ತಿಯಿಂದ ನಾಶವಾಗುವಂತೆ ಮಾಡುವೆನು’ ಎಂಬುದಾಗಿ ಯೆಹೋವನು ನಿಮ್ಮ ಯಜಮಾನನಿಗೆ ಹೇಳುತ್ತಾನೆ” ಎಂದು ಉತ್ತರಕೊಟ್ಟನು.


ಪರ್ವತಗಳ ತಳಹದಿಗೆ ಇಳಿದುಹೋದೆನು, ಭೂಲೋಕದ ದ್ವಾರಗಳ ಚಿಲಕಗಳು ಎಂದಿಗೂ ತೆಗೆಯದ ಹಾಗೆ ನನ್ನನ್ನು ಬಂಧಿಸಿದವು; ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿನಿಂದ ಉದ್ಧರಿಸಿದ್ದೀ.


ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು.


ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಮರದಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.


ಹೇಗೆಂದರೆ, ಸಮುವೇಲನು ಯಜ್ಞವನ್ನು ಅರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ವಿರುದ್ಧ ಯುದ್ಧಕ್ಕೋಸ್ಕರ ಸಮೀಪಿಸಲಾಗಿ, ಯೆಹೋವನು ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ ಇಸ್ರಾಯೇಲರಿಗೆ ಸೋತು ಓಡಿ ಹೋಗುವಂತೆ ಮಾಡಿದನು.


ಕೈತುಂಬಾ ಸಿಡಿಲನ್ನು ಹಿಡಿದು ನೀನು ವೈರಿಯನ್ನು ಹೊಡೆದು ಗುರಿಮುಟ್ಟುಲು ಬಿಡುವನು.


ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು; ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು; ಭೂಮಿಯು ಅಲ್ಲಾಡಿ ಕಂಪಿಸಿತು.


ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದಿ; ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ.


ಸಿಡಿಲಿನಿಂದ ಶತ್ರುಗಳನ್ನು ಚದರಿಸಿಬಿಡು, ನಿನ್ನ ಬಾಣಗಳಿಂದ ಅವರನ್ನು ಭ್ರಾಂತಿಗೊಳಿಸು.


ಯೆಹೋವನು ಸ್ವಜನರಿಗಾಗಿ ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣವು ಸಿಡಿಲಿನಂತೆ ಹಾರುವುದು; ಕರ್ತನಾದ ಯೆಹೋವನು ತುತ್ತೂರಿಯನ್ನು ಊದಿ ದಕ್ಷಿಣ ಪ್ರಾಂತ್ಯದ ಬಿರುಗಾಳಿಗಳೊಡನೆ ನುಗ್ಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು