Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನು ನನ್ನ ನೀತಿಗೆ ಸರಿಯಾಗಿ ಮೇಲನ್ನು ಮಾಡಿದನು, ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನನಗೊಳಿತು ಮಾಡಿದನಾತ ಸನ್ನಡತೆಗೆ ತಕ್ಕಂತೆ I ಪ್ರತಿಫಲವನಿತ್ತನು ನನ್ನ ಹಸ್ತಶುದ್ಧತೆಗೆ ತಕ್ಕಹಾಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನು ನನ್ನ ನೀತಿಗೆ ಸರಿಯಾಗಿ ಮೇಲು ಮಾಡಿದನು; ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ನಿರಪರಾಧಿಯಾಗಿದ್ದರಿಂದ ಯೆಹೋವನು ನನಗೆ ಪ್ರತಿಫಲ ನೀಡಿದನು; ನಾನು ತಪ್ಪನ್ನು ಮಾಡಿಲ್ಲದ ಕಾರಣ ನನಗೆ ಒಳ್ಳೆಯದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೆಹೋವ ದೇವರು ನನ್ನ ನೀತಿಯ ಪ್ರಕಾರ ನನ್ನೊಂದಿಗೆ ವ್ಯವಹರಿಸಿದರು; ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಪ್ರತಿಫಲಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:20
19 ತಿಳಿವುಗಳ ಹೋಲಿಕೆ  

ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, ಮೋಸ ಪ್ರಮಾಣಮಾಡದೆ, ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ,


ನೆಡುವವನೂ, ನೀರು ಹೊಯ್ಯುವವನೂ ಸರಿಸಮಾನರೇ ಆಗಿದ್ದಾರೆ. ಆದರೆ ಪ್ರತಿಯೊಬ್ಬನಿಗೆ ಅವನವನ ಶಮ್ರಕ್ಕೆ ತಕ್ಕಂತೆ ಕೂಲಿಯು ದೊರೆಯುವುದು.


ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.


ಅಧರ್ಮಿಯ ಸಂಬಳವು ಮೋಸ, ನೀತಿಯನ್ನು ಬಿತ್ತುವವನು ಲಾಭವನ್ನು ಪಡೆಯುವನು.


ನೀತಿವಂತನಿಗೆ ಫಲವುಂಟೆಂತಲೂ, ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.


ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


“ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ” ಎಂಬುದಾಗಿ ಯೆಹೋವನು ಭೂಮಿಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ.


ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ಉಪಯೋಗಮಾಡಿದ್ದು ಹಾಳೇ, ಬರಿ ಗಾಳಿಯೇ. ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ. ನನಗೆ ಲಾಭವು ನನ್ನ ದೇವರಿಂದಲೇ ಆಗುವುದು” ಎಂದು ಅಂದುಕೊಂಡೆನು.


ನಿರ್ದೋಷಿಯನ್ನು ಆತನು ತಪ್ಪಿಸುವನು, ಹೌದು, ಆತನು ಇಂಥವನನ್ನು ತಪ್ಪಿಸುವುದಕ್ಕೆ ನಿನ್ನ ಕೈಗಳ ಪರಿಶುದ್ಧತೆಯೇ ಕಾರಣವಾಗಿರುವುದು.”


ಯೆಹೋವನೇ, ನಾನು ನಿರ್ದೋಷಿ ಎಂದು, ಕೈಗಳನ್ನು ತೊಳೆದುಕೊಂಡವನಾಗಿ,


ಆದುದರಿಂದ ನಾನು ನೀತಿವಂತನೂ, ನಿರಪರಾಧಿಯೂ ಎಂದು ನೋಡಿ, ಯೆಹೋವನು ತಕ್ಕ ಪ್ರತಿಫಲವನ್ನು ಕೊಟ್ಟನು.


ಯೆಹೋವನು ಎಲ್ಲಾ ಜನಾಂಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. ಯೆಹೋವನೇ, ನಿರಪರಾಧಿಯೂ, ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು.


ಯೆಹೋವನೇ, ನನ್ನ ದೇವರೇ, ನಾನು ಕೈಗಳಲ್ಲಿ ಅನ್ಯಾಯವುಳ್ಳವನೂ,


ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತನೂ. ನಾನು ನಿನಗೆ ಕೇಡುಮಾಡಿದರೂ ನೀನು ನನಗೆ ಒಳ್ಳೆಯದನ್ನೇ ಮಾಡಿದಿ.


ಇದೇ ಮೇರೆಗೆ ನಿನ್ನನ್ನೂ ಕಷ್ಟದೊಳಗಿಂದ ತಪ್ಪಿಸಿ, ಇಕ್ಕಟ್ಟಿಲ್ಲದ ವಿಶಾಲ ಸ್ಥಳಕ್ಕೆ ಬರಮಾಡಬೇಕೆಂದೂ, ನಿನ್ನ ಮೇಜಿನ ಆಹಾರಗಳು ತುಪ್ಪದಿಂದ ತುಂಬಿರಬೇಕೆಂಬುದು ಆತನ ಉದ್ದೇಶವಾಗಿದೆ.


ಯೆಹೋವನೇ, ಕರುಣಿಸು; ಕಷ್ಟದಲ್ಲಿ ಬಿದ್ದಿದ್ದೇನೆ. ನನಗುಂಟಾದ ಬಾಧೆಯ ದೆಸೆಯಿಂದ ನನ್ನ ಕಣ್ಣು ಗುಡ್ಡೆ ಸೇದಿಹೋಗಿದೆ; ದೇಹಾತ್ಮಗಳು ಕುಗ್ಗಿಹೋದವು.


ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿ, ನನ್ನನ್ನು ವಿಶಾಲವಾದ ಸ್ಥಳದಲ್ಲಿ ನೆಲೆಸುವಂತೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು