Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಎದೆಗುಂದಿದವರಾದರು ಆ ವಿದೇಶಿಯರು I ತಮ್ಮ ಕೋಟೆಯಿಂದ ನಡುಗುತ್ತಾ ಹೊರಬಂದರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಆ ವಿದೇಶಿಯರು ಧೈರ್ಯವಿಲ್ಲದವರಾಗಿ ನಡುಗುತ್ತಾ ತಮ್ಮ ಕೋಟೆಗಳಿಂದ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಅವರು ಭಯಗೊಳ್ಳುವರು; ನಡುಗುತ್ತಾ ತಮ್ಮ ಕೋಟೆಗಳಿಂದ ಹೊರಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:45
9 ತಿಳಿವುಗಳ ಹೋಲಿಕೆ  

ಹಾವಿನಂತೆ ಧೂಳನ್ನು ನೆಕ್ಕುವರು. ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳ ಹಾಗೆ ತಮ್ಮ ಗುಪ್ತಸ್ಥಳಗಳಿಂದ ನಡುಗುತ್ತಾ ಈಚೆಗೆ ಹೊರಡುವರು. ಯೆಹೋವನೆಂಬ ನಮ್ಮ ದೇವರಾದ ನಿನ್ನನ್ನು ಅಂಜುತ್ತಾ, ಸೇವಿಸಿ ನಿನಗೆ ಭಯಪಡುವರು.


ಬೆಟ್ಟಗಳಿಗೂ ಬಂಡೆಗಳಿಗೂ, “ನಮ್ಮ ಮೇಲೆ ಬೀಳಿರಿ!, ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ.


ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಹುಲ್ಲು ಬಾಡಿ, ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು.


ಭೂಮಿಯು ಪ್ರಲಾಪಿಸುತ್ತಾ ಬಳಲಿದೆ, ಲೋಕವು ಕುಗ್ಗಿಹೋಗಿದೆ, ಲೋಕದ ಉನ್ನತರು ಕಂಗೆಟ್ಟಿದ್ದಾರೆ.


“ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ” ಎಂಬುದೇ.


ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿ, ಅವರನ್ನು ನೆಲಕ್ಕೆ ಉರುಳಿಸಿ, ಹಗ್ಗದಿಂದ ಅಳತೆಮಾಡಿಸಿ, ಪ್ರತಿ ಮೂರನೆಯ ಎರಡು ಭಾಗದ ಜನರನ್ನು ಕೊಲ್ಲಿಸಿ, ಮೂರನೆ ಭಾಗದ ಜನರನ್ನು ಉಳಿಸಿದನು. ಉಳಿದ ಮೋವಾಬ್ಯರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.


ಅನಂತರ ದಾವೀದನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.


ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;


ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವೆನು” ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು