Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; ನನ್ನ ಕೂಗು ಆತನಿಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇಂಥಾ ದುಸ್ಥಿತಿಯಲಿ ನಾ ಮೊರೆಯಿಟ್ಟೆ ಪ್ರಭುವಿಗೆ I ಪ್ರಾರ್ಥನೆ ಮಾಡಿದೆ ಆ ನನ್ನ ದೇವನಲಿ I ನನ್ನ ಪ್ರಾರ್ಥನೆ ಬಿದ್ದಿತು ಆತನ ಕಿವಿಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; ನನ್ನ ಕೂಗು ಆತನ ಸನ್ನಿಧಿಗೆ ಸೇರಿ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ನಾನು ಸಹಾಯಕ್ಕಾಗಿ ಯೆಹೋವನನ್ನು ಕೂಗಿಕೊಂಡೆನು; ನನ್ನ ದೇವರಿಗೆ ಮೊರೆಯಿಟ್ಟೆನು. ಆತನು ತನ್ನ ಆಲಯದಲ್ಲಿ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಗೆ ಕಿವಿಗೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು; ನನ್ನ ಮೊರೆಯು ಅವರ ಸನ್ನಿಧಿ ಸೇರಿ ಅವರ ಕಿವಿಗೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:6
17 ತಿಳಿವುಗಳ ಹೋಲಿಕೆ  

ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು. ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಸ್ವರವನ್ನು ಕೇಳಿದನು. ನನ್ನ ಪ್ರಾರ್ಥನೆ ಆತನ ಸನ್ನಿಧಿಗೆ ಕೇಳಿಸಿತು.


ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.


ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು.


ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ, ಸಭೆಯವರು ಅವನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು.


ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಪ್ರಾರ್ಥನೆಯ ಸ್ವರವು ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ತಲುಪಿತು.


ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.


ಆದರೆ, ಯೆಹೋವನು ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಭೂಲೋಕವೆಲ್ಲಾ ಆತನ ಮುಂದೆ ಮೌನವಾಗಿರಲಿ.”


ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.


ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು; ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ, ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು.


ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು.


“ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ. ಈ ಪಾನಪಾತ್ರೆಯನ್ನು ನನ್ನಿಂದ ತೆಗೆದುಬಿಡು ಆದರೂ ಇದು ನನ್ನ ಚಿತ್ತದಂತಲ್ಲ ನಿನ್ನ ಚಿತ್ತದಂತೆಯೇ ಆಗಲಿ” ಎಂದನು.


ಅಂಜಿ ನಡುಗುತ್ತಿದ್ದೇನೆ; ದಿಗಿಲು ನನ್ನನ್ನು ಹಿಡಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು