Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 19:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು. ಅಂಥ ಪಾಪಗಳು ನನ್ನನ್ನು ಆಳದಿರಲಿ. ಆಗ ನಾನು ತಪ್ಪಿಲ್ಲದವನಾಗಿ ಮಹಾದ್ರೋಹಕ್ಕೆ ಒಳಗಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕಾಪಾಡೆನ್ನನು, ಬೇಕು ಬೇಕೆಂದು ಪಾಪಮಾಡದಂತೆ I ಕಾದಿಡು, ಅಂಥ ಪಾಪಕೆ ನಾ ದಾಸನಾಗದಂತೆ I ನಿರ್ದೋಷಿಯಾಗುವೆನು, ಆ ದ್ರೋಹಕ್ಕೊಳಗಾಗದಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು. ಅಂಥ ಪಾಪಗಳು ನನ್ನನ್ನು ಆಳದಿರಲಿ. ಆಗ ನಾನು ತಪ್ಪಿಲ್ಲದವನಾಗಿ ಮಹಾ ದ್ರೋಹಕ್ಕೆ ಒಳಗಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ಇಷ್ಟಾನುಸಾರ ಪಾಪಮಾಡಲು ನನ್ನನ್ನು ಬಿಟ್ಟುಬಿಡಬೇಡ. ಆ ಪಾಪಗಳು ನನ್ನನ್ನು ಆಳದಿರಲಿ. ನೀನು ಸಹಾಯಮಾಡಿದರೆ ನಾನು ಪರಿಶುದ್ಧನಾಗಿಯೂ ಪಾಪದಿಂದ ವಿಮುಕ್ತನಾಗಿಯೂ ಇರಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಬೇಕುಬೇಕೆಂದು ಪಾಪಮಾಡದಂತೆ ನಿಮ್ಮ ಸೇವಕನನ್ನು ಕಾಪಾಡು; ಅಂಥ ಪಾಪಗಳು ನನ್ನ ಮೇಲೆ ಆಳಿಕೆ ಮಾಡದಿರಲಿ. ಆಗ ನಾನು ತಪ್ಪಿಲ್ಲದವನಾಗಿ, ಮಹಾಪರಾಧದಿಂದ ಬಿಡುಗಡೆಯಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 19:13
21 ತಿಳಿವುಗಳ ಹೋಲಿಕೆ  

ನಿನ್ನ ನುಡಿಗನುಸಾರವಾಗಿ ನನ್ನ ಹೆಜ್ಜೆಯನ್ನು ದೃಢಪಡಿಸು, ಯಾವ ಅನ್ಯಾಯವಾದರೂ ನನ್ನನ್ನು ಆಳದಂತೆ ಮಾಡು.


ಇದರ ದೆಸೆಯಿಂದ ದೇವರ ಮುಂದೆಯೂ, ಮನುಷ್ಯರ ಮುಂದೆಯೂ ನಿರ್ದೋಷವಾದ ಮನಸ್ಸಾಕ್ಷಿಯುಳ್ಳವನಾಗಿರಬೇಕೆಂದು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ.


ನಾಬಾಲನು ಸತ್ತನೆಂಬ ವರ್ತಮಾನವು ದಾವೀದನು ಕೇಳಿ, “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿತೀರಿಸಿದಂತ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಕೆಟ್ಟತನಕ್ಕೆ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದನಲ್ಲಾ” ಎಂದು ಹೇಳಿದನು. ಅನಂತರ ಅವನು ಅಬೀಗೈಲಳನ್ನು ತನಗೆ ಹೆಂಡತಿಯಾಗಿರಬೇಕೆಂದು ದೂತರ ಮೂಲಕ ಹೇಳಿ ಕಳುಹಿಸಿದನು.


ನನ್ನನ್ನು ರಕ್ಷಿಸುವ ಗುರಾಣಿಯು ದೇವರೇ; ಆತನು ಯಥಾರ್ಥರನ್ನು ಕಾಪಾಡುತ್ತಾನೆ.


ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?


ಅದಕ್ಕೆ ದೇವರು, “ನೀನು, ಇದನ್ನು ಯಥಾರ್ಥ ಮನಸ್ಸಿನಿಂದ ಮಾಡಿದೆ ಎಂಬುದನ್ನು ನಾನು ಬಲ್ಲೆ; ಆದಕಾರಣ ನೀನು ನನಗೆ ವಿರುದ್ಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.


ಮುಖ್ಯವಾಗಿ ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು.


ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು; ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.


ಏಕೆಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. ಸಜ್ಜನರು ಆತನ ಸಾನ್ನಿಧ್ಯವನ್ನು ಸೇರುವರು.


ಆದರೆ ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶದಿಂದಲೇ ಅವನನ್ನು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞವೇದಿಯ ಬಳಿಯಿಂದ ಕರೆದುಕೊಂಡು ಹೋಗಿ ಕೊಂದುಹಾಕಬೇಕು.


“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ ‘ಯಾರೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಿಯಾದರೆ ಅವನಿಗೆ ದೋಷಪರಿಹಾರ ಮಾಡಿಕೊಳ್ಳುವ ಕ್ರಮ ಹೀಗಿದೆ.


“‘ಇಸ್ರಾಯೇಲರ ಸಮೂಹವೆಲ್ಲಾ ತಿಳಿಯದೆ ದೋಷಿಗಳಾದರೆ ಅಂದರೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರೂ ಮಾಡಿ ದೋಷಕ್ಕೆ ಗುರಿಯಾದರೆ,


“‘ಮುಖ್ಯಾಧಿಕಾರಿ ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,


“‘ನಿಮ್ಮ ದೇಶದ ಜನರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,


ನಾನು ಕಾಣದಿರುವುದನ್ನು ನೀನೇ ಸೂಚಿಸು; ನಾನು ಒಂದು ವೇಳೆ ಅನ್ಯಾಯವನ್ನು ಮಾಡಿದ್ದರೂ ಇನ್ನು ಮೇಲೆ ಮಾಡುವುದಿಲ್ಲ’ ಎಂದು ಹೇಳುವುದಕ್ಕಾದೀತೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು