Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 19:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪ್ರಭುವಿನ ಆಜ್ಞೆ ಪರಿಪೂರ್ಣ; ಜೀವನಕದು ನವಚೇತನ I ನಂಬಲರ್ಹ; ಪ್ರಭುವಿನ ಶಾಸನ ಮುಗ್ದರಿಗದು ಸುಜ್ಞಾನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆ ನಂಬಿಕೆಗೆ ಯೋಗ್ಯವಾದದ್ದು; ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನ ಉಪದೇಶಗಳು ನಿಷ್ಕಳಂಕವಾಗಿವೆ. ಅವು ದೇವಜನರಿಗೆ ಬಲವನ್ನು ಕೊಡುತ್ತವೆ. ಯೆಹೋವನ ಕಟ್ಟಳೆಯು ಭರವಸೆಗೆ ಯೋಗ್ಯವಾಗಿದೆ. ಅದು ಮೂಢರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರ ನಿಯಮವು ಸಂಪೂರ್ಣವಾಗಿದ್ದು, ಪ್ರಾಣಕ್ಕೆ ಜೀವಕರವಾಗಿದೆ; ಯೆಹೋವ ದೇವರ ಶಾಸನಗಳು ವಿಶ್ವಾಸಪಾತ್ರವಾಗಿದ್ದು, ಮುಗ್ಧನನ್ನು ಜ್ಞಾನಿಗಳನ್ನಾಗಿ ಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 19:7
41 ತಿಳಿವುಗಳ ಹೋಲಿಕೆ  

ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ, ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ.


ಆತನ ಕೈಕೆಲಸಗಳು ನೀತಿ, ಸತ್ಯತೆಗಳನ್ನು ಪ್ರಕಟಿಸುತ್ತವೆ; ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ.


ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.


ಈ ನುಡಿಗಳು ಮೂಢರಿಗೆ ಜಾಣತನವನ್ನೂ, ಯೌವನಸ್ಥರಿಗೆ ತಿಳಿವಳಿಕೆಯನ್ನು ಮತ್ತು ಬುದ್ಧಿಯನ್ನು ಉಂಟುಮಾಡುವವು.


ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ.


ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ, ನನ್ನ ದಾರಿಗೆ ಬೆಳಕೂ ಆಗಿದೆ.


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.


ಯೆಹೋವನೇ, ನಿನ್ನ ಕಟ್ಟಳೆಗಳು ಬಹುಖಂಡಿತವಾಗಿವೆ; ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.


ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು.


ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.


ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.


ಈ ಮೊದಲು ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಶಾಸ್ತ್ರಗಳು ಬರೆಯಲ್ಪಟ್ಟವು.


ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ವತ್ತಾಗಿ ಆರಿಸಿಕೊಂಡಿದ್ದೇನೆ, ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿವೆ.


ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಕೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲವೂ, ನೀನು ಹೋಗುವ ಮಾರ್ಗಗಳು ಸಫಲವಾಗುವುದು. ನೀನು ಚುರುಕು ಬುದ್ಧಿಯ ವ್ಯಕ್ತಿಯಾಗಿ ರೂಪಾಂತರ ಹೊಂದುವಿ.


ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ” ಅಂದನು.


ನೀನು ಕೊಟ್ಟ ಧರ್ಮಶಾಸ್ತ್ರವು, ಸಾವಿರಾರು ಚಿನ್ನ, ಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ. ಯೋದ್.


ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು; ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.


ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.


ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.


ನಿನ್ನ ಕಟ್ಟಳೆಗಳು ನನ್ನ ಪರಮಾನಂದ, ಅವೇ ನನ್ನ ಮಾರ್ಗದರ್ಶನ. ದಾಲಿತ್.


ಸರ್ವಸಂಪತ್ತಿನಲ್ಲಿ ಹೇಗೋ, ಹಾಗೆಯೇ ನಿನ್ನ ಕಟ್ಟಳೆಯ ಮಾರ್ಗದಲ್ಲಿ ಆನಂದಿಸುತ್ತೇನೆ.


ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ.


ಬೋಧನೆಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ಉಪದೇಶವನ್ನು ಮುಚ್ಚಿ ಮುದ್ರಿಸು.


ನೀನು ನಿನ್ನ ಕಟ್ಟಳೆಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಿ ಎಂದು, ನಾನು ಮೊದಲಿನಿಂದಲೇ ಅವುಗಳ ಮೂಲಕ ತಿಳಿದುಕೊಂಡಿದ್ದೇನೆ. ರೇಷ್.


ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ.


ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಹೀಗೆಯೇ ಸ್ಥಿರವಾಗಿರುತ್ತದಲ್ಲವೇ? ಆತನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿದ್ದಾನಲ್ಲವೋ? ಅದು ಎಂದಿಗೂ ಬಿದ್ದುಹೋಗದೆ ಎಲ್ಲಾ ವಿಷಯಗಳಲ್ಲಿಯೂ ಖಚಿತವಾಗಿರುತ್ತದೆ. ನನ್ನ ರಕ್ಷಣೆಯ ಮೂಲವೂ, ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ?


ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು.


ಎಲ್ಲಾ ವಿಷಯಗಳನ್ನು ಕುರಿತು ಹೇಳಲು ಬಹಳ ಉಂಟು. ಮೊದಲನೇಯದಾಗಿ ದೈವೋಕ್ತಿಗಳು ಅವರ ವಶಕ್ಕೆ ಸಮರ್ಪಿಸಿ ಒಪ್ಪಿಸಲ್ಪಟ್ಟಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು