Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 19:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ಕಟ್ಟಳೆಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪ್ರಭುವಿನ ಭೀತಿ ಪವಿತ್ರ; ಅದೆಂದಿಗೂ ಶಾಶ್ವತ I ಪ್ರಭುವಿನ ತೀರ್ಪು ಯಥಾರ್ಥ; ಪರಿಪೂರ್ಣ ನ್ಯಾಯಯುತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ವಿಧಿಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನಲ್ಲಿಡುವ ಭಯಭಕ್ತಿಯು ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದು. ಯೆಹೋವನ ವಿಧಿಗಳು ಯಥಾರ್ಥವಾಗಿವೆ; ಅವು ಯಾವಾಗಲೂ ನ್ಯಾಯಾನುಸಾರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರ ಭಯವು ಶುದ್ಧವಾಗಿದ್ದು, ಎಂದೆಂದಿಗೂ ಶಾಶ್ವತವಾಗಿದೆ. ಯೆಹೋವ ದೇವರ ತೀರ್ಪುಗಳು ಸತ್ಯವಾಗಿದ್ದು, ಅವೆಲ್ಲವೂ ನೀತಿಯುಳ್ಳದ್ದಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 19:9
36 ತಿಳಿವುಗಳ ಹೋಲಿಕೆ  

ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಆತನನ್ನು ಸತ್ಯದಿಂದಲೂ, ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;


ನಿನ್ನ ನೀತಿಯು ನಿತ್ಯವಾಗಿದೆ, ನಿನ್ನ ಧರ್ಮಶಾಸ್ತ್ರವು ಸತ್ಯವಾಗಿದೆ.


ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ, ಸದಾಚಾರಿಗಳಾಗಿ ನಡೆಯುವವರು ಧನ್ಯರು.


ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.


ಇಸ್ರಾಯೇಲನ ಮನೆತನದವರನ್ನು ಆಶೀರ್ವದಿಸುವನು; ಆರೋನನ ಮನೆತನದವರನ್ನು ಆಶೀರ್ವದಿಸುವನು. ತನ್ನ ಭಕ್ತರನ್ನು ಆಶೀರ್ವದಿಸುವನು.


ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.


ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ನೀನು ಅವನಿಗೆ ಸಿಕ್ಕದೆ ಹೋದರೆ ಅವನು ನನ್ನನ್ನು ಕೊಂದು ಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ?


ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಇಂಥ ನ್ಯಾಯವಾದ ಆಜ್ಞಾವಿಧಿಗಳುಳ್ಳ ಈ ಧರ್ಮಶಾಸ್ತ್ರಕ್ಕೆ ಸಮಾನವಾದದ್ದು ಬೇರೆ ಯಾವ ಜನಾಂಗಕ್ಕೆ ಉಂಟು?


ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನು. ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.


ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,


ಆ ಮೇಲೆ ಯಜ್ಞವೇದಿಯು ಮಾತನಾಡುತ್ತಾ, “ದೇವರಾದ ಕರ್ತನೇ ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ” ಎಂದು ಹೇಳುವುದನ್ನು ಕೇಳಿದೆನು.


ಅಂಥವುಗಳನ್ನು ಅನುಸರಿಸುವವರ ವಿಷಯದಲ್ಲಿ ದೇವರು ಕೊಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವುದೆಂದು ನಾವು ಬಲ್ಲೆವು.


ಹೌದು, ಯೆಹೋವನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಿನಗಾಗಿ ಕಾದುಕೊಂಡಿದ್ದೇವೆ; ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಇಷ್ಟವಾಗಿದೆ, ಹಿತವಾಗಿದೆ.


ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು.


ನಾನು ನಿನ್ನ ನೀತಿಯ ವಿಧಿಗಳನ್ನು ಕಲಿತ ಹಾಗೆಲ್ಲಾ, ನಿನ್ನನ್ನು ಯಥಾರ್ಥ ಹೃದಯದಿಂದ ಕೊಂಡಾಡುತ್ತಾ ಹೋಗುವೆನು.


ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ.


ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ.


ಅವನ ಪ್ರಯತ್ನಗಳು ಯಾವಾಗಲೂ ಕೈಗೂಡುತ್ತವೆ; ಆದರೆ ನಿನ್ನ ನ್ಯಾಯತೀರ್ಪು ಮಹೋನ್ನತವಾಗಿರುವುದರಿಂದ ಅದು ಅವನ ಗ್ರಹಿಕೆಗೆ ಬರುವುದಿಲ್ಲ; ವೈರಿಗಳ ಗುಂಪನ್ನಾದರೋ ತಾತ್ಸಾರಮಾಡುತ್ತಾನೆ.


ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು.


“ಈಗ ನೀನು ಅವರ ಮುಂದೆ ಇಡಬೇಕಾದ ನ್ಯಾಯವಿಧಿಗಳು ಯಾವುದೆಂದರೆ;


ಆ ದೂತನು ಅವನಿಗೆ, “ಹುಡುಗನ ಮೇಲೆ ಕೈ ಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಸಮರ್ಪಿಸುವುದಕ್ಕೆ ಹಿಂಜರಿಯಲಿಲ್ಲ. ಈಗ ನೀನು ದೇವರಲ್ಲಿ ಭಯಭಕ್ತಿಯುಳ್ಳವನು ಎಂದು ನನಗೆ ಗೊತ್ತಾಯಿತು” ಎಂದು ಹೇಳಿದನು.


ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.


ಅವರು; “ಕೊರ್ನೆಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ, ದೇವರಿಗೆ ಭಯಪಡುವವನೂ, ಯೆಹೂದ್ಯ ಜನರೆಲ್ಲರಿಂದ ಒಳ್ಳೆಯ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನಿನ್ನಿಂದ ಸುವಾರ್ತೆಯನ್ನು ಕೇಳಬೇಕೆಂದು ಪರಿಶುದ್ಧ ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದ್ದಾನೆ” ಎಂದು ಹೇಳಿದರು.


ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.


ಆತನು ತನ್ನ ವಾಕ್ಯವನ್ನು ಯಾಕೋಬ್ಯರಿಗೆ ತಿಳಿಸುತ್ತಾನೆ, ತನ್ನ ನಿಯಮವಿಧಿಗಳನ್ನು ಇಸ್ರಾಯೇಲರಿಗೆ ಪ್ರಕಟಿಸುತ್ತಾನೆ.


ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ, ನೀನು ನಂಬಿಗಸ್ತಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ.


ನಿನ್ನ ನೀತಿವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡಲು, ಮಧ್ಯರಾತ್ರಿಯಲ್ಲಿ ಏಳುವೆನು.


ನನ್ನ ಅವಮಾನವನ್ನು ತೊಲಗಿಸು, ಅದಕ್ಕೋಸ್ಕರ ಅಂಜುತ್ತಿದ್ದೇನೆ. ನಿನ್ನ ಕಟ್ಟಳೆಗಳು ಹಿತಕರವಾಗಿವೆ.


ಜನರಲ್ಲಿ ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ, ಜನರೊಳಗೆ ದುಷ್ಟತ್ವ ಆಳ್ವಿಕೆಗೆ ಬಂದಿದ್ದರೂ,


ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ವತ್ತಾಗಿ ಆರಿಸಿಕೊಂಡಿದ್ದೇನೆ, ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿವೆ.


ನಾನು ರಹಸ್ಯದಲ್ಲಿ ನುಡಿದವನಲ್ಲ, ಅಧೋಲೋಕದೊಳಗಿಂದ ಮಾತನಾಡಿದವನಲ್ಲ. ಶೂನ್ಯವನ್ನೋ ಎಂಬಂತೆ, ‘ನನ್ನನ್ನು ಹುಡುಕಿರಿ’ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ಸರಿಯಾದ ಮಾತುಗಳನ್ನೇ ಆಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು