Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 20:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ಬಿದ್ದುಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕೆಳಗಿಳಿವರವರು, ಕುಸಿದು ಬೀಳುವರವರು I ಏಳುವೆವು, ಸ್ಥಿರನಿಲ್ಲುವೆವು ನಾವೆಲ್ಲರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು ಬಿದ್ದು ಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವರು ಸೋತುಹೋದರು; ಯುದ್ಧದಲ್ಲಿ ಸತ್ತುಹೋದರು; ನಾವಾದರೋ ಜಯಗಳಿಸಿದೆವು! ನಾವು ಜಯಪ್ರದರಾಗಿ ನಿಂತುಕೊಳ್ಳುವೆವು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಬಗ್ಗಿ ಬೀಳುತ್ತಾರೆ, ನಾವಾದರೋ ಎದ್ದು ಸ್ಥಿರವಾಗಿ ನಿಲ್ಲುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 20:8
17 ತಿಳಿವುಗಳ ಹೋಲಿಕೆ  

ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.


ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ. ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕುಳಿತ್ತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.


ಯೆಹೋವನ ಎಲ್ಲಾ ಶತ್ರುಗಳೂ ಹೀಗೆಯೇ ನಾಶವಾಗಲಿ. ಆತನನ್ನು ಪ್ರೀತಿಸುವ ಭಕ್ತರು ಪ್ರಕಾಶದಿಂದ ಉದಯಿಸುವ ಸೂರ್ಯನಂತಿರಲಿ.” ಅನಂತರ ದೇಶದಲ್ಲಿ ನಲವತ್ತು ವರ್ಷ ಸಮಾಧಾನವಿತ್ತು.


ಅವರು ಒಡನೆ ಬಹು ರಥಾಶ್ವಗಳಿಂದ ಕೂಡಿರುವ ತಮ್ಮ ಸರ್ವಸೈನ್ಯಗಳನ್ನು ತೆಗೆದುಕೊಂಡು ಹೊರಟರು. ಆ ಸೈನಿಕರು ಸಮುದ್ರ ತೀರದ ಮರಳಿನಂತೆ ಅಸಂಖ್ಯರಾಗಿದ್ದರು.


ಆಗ ದಾವೀದನು ಅವನಿಗೆ, “ನೀನು ಈಟಿ, ಕತ್ತಿ, ಬರ್ಜಿಗಳೊಡನೆ ನನ್ನ ಬಳಿಗೆ ಬರುತ್ತೀ. ನಾನಾದರೋ ನೀನು ಹೀಯಾಳಿಸಿದಂಥ ಸೇನಾಧೀಶ್ವರನೂ, ಇಸ್ರಾಯೇಲ್ಯರ ಯುದ್ಧಭಟರ ದೇವರೂ ಆಗಿರುವ ಯೆಹೋವನ ನಾಮದೊಡನೆ ನಿನ್ನ ಬಳಿಗೆ ಬಂದಿದ್ದೇನೆ.


ನೀನು ನಿನ್ನ ದೂತರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ. ಅದರ ಎತ್ತರವಾದ ದೇವದಾರುವೃಕ್ಷಗಳನ್ನೂ ಶ್ರೇಷ್ಠವಾದ ತುರಾಯಿಮರಗಳನ್ನೂ ಕಡಿದುಬಿಟ್ಟಿದ್ದೇನೆ. ಅಲ್ಲಿನ ಬಹು ದೂರ ನಿವಾಸಸ್ಥಳಗಳನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.


ಆಸನು ಅವನಿಗೆ ವಿರುದ್ಧವಾಗಿ ಹೊರಟನು. ಮಾರೇಷದ ಬಳಿಯಲ್ಲಿರುವ ಚೆಫಾತಾ ಬಯಲಿನಲ್ಲಿ ಇಬ್ಬರೂ ವ್ಯೂಹಕಟ್ಟಿದರು.


ಆಸನು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ, ರಕ್ಷಿಸಲು ನಿನ್ನ ಹೊರತು ಬೇರಾರೂ ರಕ್ಷಿಸುವುದಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನೆದುರು ಗೆಲ್ಲಬಾರದು” ಎಂದು ಮೊರೆಯಿಡಲು.


ನಮ್ಮ ದೇವರ ಹಸ್ತವು ಆತನ ಎಲ್ಲಾ ಶರಣಾರ್ಥಿಗಳನ್ನೂ ಪಾಲಿಸುವುದು; ಆತನನ್ನು ತೊರೆದುಬಿಟ್ಟವರೆಲ್ಲರೂ ಆತನ ಉಗ್ರವಾದ ಕೋಪಕ್ಕೆ ಗುರಿಯಾಗುವರು. ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವುದಕ್ಕೋಸ್ಕರ ಸೈನ್ಯವನ್ನೂ, ಅಶ್ವಬಲವನ್ನೂ ಕೊಡಲು ಅರಸನಿಂದ ಸಹಾಯ ಕೇಳಲು ನಾಚಿಕೊಂಡಿದ್ದೆನು.


ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ.


ಜೀವದ ರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ; ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು.


ಭೂಮಿ, ಆಕಾಶಗಳನ್ನು ಉಂಟುಮಾಡಿದ, ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು.


ಅಶ್ವಬಲವು ಯುದ್ಧದಿನಕ್ಕಾಗಿ ಸನ್ನದ್ಧವಾಗಿದ್ದರೂ ಜಯವು ಯೆಹೋವನಿಂದಲೇ.


ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರಿಂದ ತೊಲಗಿಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು