Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 24:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು I ತೆರೆದು ಸ್ವಾಗತಿಸಲಿ ಕದಗಳು, ಸನಾತನ ದ್ವಾರಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದ್ವಾರಗಳೇ, ಉನ್ನತವಾಗಿರ್ರಿ; ಪುರಾತನವಾದ ಕದಗಳೇ, ತೆರೆದುಕೊಂಡಿರ್ರಿ; ಮಹಾಪ್ರಭಾವವುಳ್ಳ ಅರಸನು ಆಗವಿುಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಹೆಬ್ಬಾಗಿಲುಗಳೇ, ಉನ್ನತವಾಗಿರಿ! ಪುರಾತನ ದ್ವಾರಗಳೇ, ತೆರದುಕೊಂಡಿರಿ. ಮಹಿಮಾಸ್ವರೂಪನಾದ ರಾಜನು ಆಗಮಿಸುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದ್ವಾರಗಳೇ ತಲೆ ಎತ್ತಿ ನೋಡಿರಿ, ಪುರಾತನ ದ್ವಾರಗಳೇ, ತೆರೆದುಕೊಳ್ಳಿರಿ; ಮಹಿಮೆಯ ಅರಸ ಒಳಗೆ ಬರಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 24:7
23 ತಿಳಿವುಗಳ ಹೋಲಿಕೆ  

ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಗೊಳ್ಳುವ ಜನಾಂಗವು ಒಳಗೆ ಪ್ರವೇಶಿಸಲಿ!


ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿತಿರಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ;


ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು; ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು.


“ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡ ಮೇಘವು ಆಲಯವನ್ನು ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲು ಆಗಲಿಲ್ಲ.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.


ಜನರು ಯೆಹೋವನ ಮಂಜೂಷವನ್ನು ತಂದು ದಾವೀದನು ಹಾಕಿಸಿದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿಟ್ಟರು. ಆಗ ದಾವೀದನು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.


ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.


ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.


‘ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವುದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು’” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ, ನಿನ್ನ ವಾಸಸ್ಥಾನಕ್ಕೆ ಬಂದು ನೆಲೆಸು.


ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು.


ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿ ಇಟ್ಟರು.


ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ; ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ.


ನಿನ್ನ ರಕ್ಷಣಕಾರ್ಯದಿಂದ ಅವನ ಗೌರವ ಬಹು ವೃದ್ಧಿಯಾಯಿತು; ಘನತೆ ಮತ್ತು ವೈಭವಗಳನ್ನು ಅವನಿಗೆ ಅನುಗ್ರಹಿಸಿದ್ದೀ.


ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಸರಿಪಡಿಸಿರಿ. ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಲ್ಲಿ ಧ್ವಜವನ್ನೆತ್ತಿರಿ!


ಕುರಿಮಂದೆಗೆ ರಕ್ಷಣೆ ಕೊಡುವ ಗೋಪುರವೇ, ಚೀಯೋನ್ ಯುವತಿಯ ಸುಭದ್ರ ಕೋಟೆಯೇ, ನಿನ್ನ ಹಿಂದಿನ ಆಡಳಿತವು ನಿನಗೆ ದೊರೆಯುವುದು. ಯೆರೂಸಲೇಮ್ ಪುರಿಯ ರಾಜ್ಯಾಧಿಕಾರವು ನಿನಗೆ ಲಭಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು