Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 27:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ನನಗೆ ಬೆಳಕೂ ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೇನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನೀನೇ ನನಗೆ ಬೆಳಕೂ ರಕ್ಷಕನೂ ಆಗಿರುವೆ. ನಾನು ಯಾರಿಗೂ ಭಯಪಡಬೇಕಿಲ್ಲ! ಯೆಹೋವನೇ, ನನ್ನ ಪ್ರಾಣಕ್ಕೆ ಆಶ್ರಯಸ್ಥಾನವೂ ನೀನೇ. ಆದ್ದರಿಂದ ನಾನು ಯಾರಿಗೂ ಹೆದರುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ನನ್ನ ಬೆಳಕೂ ನನ್ನ ರಕ್ಷಣೆಯೂ ಆಗಿದ್ದಾರೆ. ನಾನು ಯಾರಿಗೂ ಭಯಪಡೆನು? ಯೆಹೋವ ದೇವರು ನನ್ನ ಜೀವದ ಭದ್ರಾಶ್ರಯವಾಗಿದ್ದಾರೆ. ನಾನು ಯಾರಿಗೂ ಹೆದರೆನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 27:1
45 ತಿಳಿವುಗಳ ಹೋಲಿಕೆ  

ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.


ಯೆಹೋವನು ನನ್ನ ಕಡೆ ಇದ್ದಾನೆ; ಭಯಪಡೆನು. ಮನುಷ್ಯನು ನನಗೆ ಏನು ಮಾಡಾನು?


ನನ್ನ ಬಲವೂ, ಕೀರ್ತನೆಯೂ ಯಾಹುವೇ. ಆತನಿಂದ ನನಗೆ ರಕ್ಷಣೆ ಉಂಟಾಯಿತು. ನಮ್ಮ ದೇವರು ಆತನೇ, ಆತನನ್ನು ಸ್ತುತಿಸುವೆನು, ನಮ್ಮ ಪೂರ್ವಿಕರ ದೇವರು ಆತನೇ, ಆತನ ಮಹಿಮೆಯನ್ನು ಪ್ರಖ್ಯಾತಿಪಡಿಸುವೆವು.


ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು.


ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು” ಎಂದು ಹೇಳಿದನು.


ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.


ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲುವುದಿಲ್ಲ.


ನೀನೇ ನನ್ನ ದೀಪವನ್ನು ಹೊತ್ತಿಸುವವನಲ್ಲವೇ; ನನ್ನ ದೇವರಾದ ಯೆಹೋವನು ನನಗೆ ಬೆಳಕನ್ನು ಕೊಟ್ಟು ಕತ್ತಲನ್ನು ಪರಿಹರಿಸುವವನು.


ಆತನ ದೀಪವು ನನ್ನ ತಲೆಯ ಮೇಲೆ ಪ್ರಕಾಶಿಸುತ್ತಿತ್ತು, ಆತನ ಬೆಳಕಿನಿಂದ ಕತ್ತಲಲ್ಲೂ ಸಂಚರಿಸುತ್ತಿದ್ದೆನು.


ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ನನಗೆ ಸದುತ್ತರವನ್ನು ದಯಪಾಲಿಸಿ ರಕ್ಷಿಸಿದಾತನೇ, ನಿನ್ನನ್ನು ಕೊಂಡಾಡುತ್ತೇನೆ.


ಯೆಹೋವನೇ ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ಮತ್ತು ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.


ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.


ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲಿದರೂ ಬೀಳೆನು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.


ಯಾಕೋಬಿನ ವಂಶದವರೇ ಬನ್ನಿರಿ, ಯೆಹೋವನ ಜ್ಞಾನದ ಬೆಳಕಿನಲ್ಲಿ ನಡೆಯೋಣ.


ಯೆಹೋವನು ಚೈತನ್ಯಸ್ವರೂಪನು; ನನ್ನ ಶರಣನಿಗೆ ಸ್ತೋತ್ರ; ನನ್ನನ್ನು ರಕ್ಷಿಸುವ ದೇವರಿಗೆ ಕೊಂಡಾಟವಾಗಲಿ.


ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.


ಅವರು, “ರಕ್ಷಣೆಯೆಂಬುದು ಸಿಂಹಾಸನಾರೂಢನಾದ ನಮ್ಮ ದೇವರ ಮತ್ತು ಯಜ್ಞದ ಕುರಿಮರಿಯಾದಾತನಿಗೆ ಸೇರಿದ್ದು” ಎಂದು ಮಹಾಧ್ವನಿಯಿಂದ ಕೂಗಿದರು.


ನೀನು ಎಲ್ಲಾ ಜನರ ಸಮ್ಮುಖದಲ್ಲಿ ಸಿದ್ಧಪಡಿಸಿದ ಆ ರಕ್ಷಣೆಯನ್ನು ನಾನು ಕಣ್ಣಾರೆ ಕಂಡೆನು.


ನಾನು ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ. ನೀವು, “ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ” ಎಂದು ಹೇಳುವುದೇಕೆ?


ಜಯವು ಯೆಹೋವನಿಂದಲೇ ಉಂಟಾಗುವುದು. ಯೆಹೋವನೇ, ನಿನ್ನ ಆಶೀರ್ವಾದವು ನಿನ್ನ ಜನರ ಮೇಲೆ ಇರಲಿ. ಸೆಲಾ.


ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.


ಯೆಹೋವನಲ್ಲಿ ಮಾತ್ರ ರಕ್ಷಣೆಯೂ, ಶಕ್ತಿಯೂ ಉಂಟು. ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಆಶ್ರಯಿಸುವರು.


ದೇವರೇ, ನೀನು ನನಗೆ ದುರ್ಗಸ್ಥಾನವಲ್ಲವೇ; ಏಕೆ ನನ್ನನ್ನು ತಳ್ಳಿಬಿಟ್ಟೆ? ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?


ನಿಮ್ಮ ದೇವರಾದ ಯೆಹೋವನು ಫರೋಹನಿಗೂ ಮತ್ತು ಐಗುಪ್ತ್ಯರೆಲ್ಲರಿಗೂ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿರಿ.


ನೀವು ಅವರಿಗೆ ಹೆದರಿಕೊಳ್ಳಬೇಡಿರಿ; ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿದ್ದಾನೆ; ಆತನು ನಮ್ಮ ಭಕ್ತಿಗೆ ಪ್ರತಿಕಾರವಾಗಿ ವಿಸ್ಮಯ ಹುಟ್ಟಿಸುವ ದೇವರಾಗಿದ್ದಾನೆ.


ನಿನ್ನ ಬಲದಿಂದ ದಂಡಿನ ಮೇಲೆ ಬೀಳುವೆನು; ನನ್ನ ದೇವರ ಸಹಾಯದಿಂದ ಗೋಡೆಯನ್ನು ಹಾರುವೆನು.


ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದುದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು. ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತ ಅವಮಾನಕ್ಕೆ ಒಳಗಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು