Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 28:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ದುಷ್ಟರೊಡನೆಯೂ, ದುರ್ಜನಗಳ ಸಂಗಡಲೂ ನನ್ನನ್ನೂ ಎಳೆದುಕೊಂಡು ಹೋಗಬೇಡ. ಅವರು ಹೊರಗೆ ಒಳ್ಳೆಯದಾಗಲಿ ಎಂದು ಹೇಳಿದರೂ, ಒಳಗೆ ಕೇಡಾಗಲಿ ಎಂದು ಯೋಚಿಸುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದುರುಳರೊಡನೆ ದೂಡಬೇಡ, ದುರ್ಜನರೊಡನೆ ವಿಸರ್ಜಿಸಬೇಡೆನ್ನನು I ಪರರಿಗವರು ನುಡಿವರು ಶಾಂತಿಯನು ಉದರದಲ್ಲಿಡುವರು ಕ್ರೋಧವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ದುಷ್ಟರೊಡನೆಯೂ ಪಾತಕಿಗಳ ಸಂಗಡಲೂ ನನ್ನನ್ನೂ ಎಳೆದುಕೊಂಡು ಹೋಗಬೇಡ. ಅವರು ಹೊರಗೆ ಒಳ್ಳೇದಾಗಲಿ ಎಂದು ಹೇಳಿದರೂ ಒಳಗೆ ಕೇಡಾಗಲಿ ಎಂದು ಯೋಚಿಸುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನನ್ನನ್ನು ಆ ಕೆಟ್ಟವರೊಂದಿಗೆ ಲೆಕ್ಕಿಸಬೇಡ. ಅವರು ತಮ್ಮ ನೆರೆಯವರಿಗೆ “ಸಮಾಧಾನವಾಗಲಿ” ಎಂದು ಹರಸಿದರೂ ಅವರ ವಿರೋಧವಾಗಿ ಸಂಚುಗಳನ್ನು ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದುಷ್ಟರ ಸಂಗಡವೂ ಅಪರಾಧ ಮಾಡುವವರ ಸಂಗಡವೂ ನನ್ನನ್ನು ಎಳೆಯಬೇಡಿರಿ; ಅವರು ತಮ್ಮ ನೆರೆಯವರೊಂದಿಗೆ ಸಮಾಧಾನವಾಗಿ ಮಾತನಾಡುತ್ತಾರೆ; ಆದರೆ ಕೇಡು ಅವರ ಹೃದಯದಲ್ಲಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 28:3
17 ತಿಳಿವುಗಳ ಹೋಲಿಕೆ  

ಅವನ ಮಾತು ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚು ಕತ್ತಿಗಳೇ ಸರಿ.


ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.


ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ; ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ.


ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ, ತಿನ್ನುವುದಕ್ಕೆ ಕೊಡುವಂಥವರಿಗೆ, “ಸಮಾಧಾನವಿರುವುದು” ಎಂದು ಪ್ರಕಟಿಸುವರು ಮತ್ತು ತಮ್ಮ ಬಾಯಿಗೆ ರುಚಿಯಾದ ತಿಂಡಿಯನ್ನು ಕೊಡದವನ ಮೇಲೆ ಯುದ್ಧವನ್ನು ನಿರ್ಧರಿಸುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ,


ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ. ಸುಳ್ಳಾಡುವುದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. ಸೆಲಾ


ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ.


ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ; ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.


ನನ್ನ ಶತ್ರುವು ಬದಲಾಯಿಸಿಕೊಳ್ಳದೆ ಕೇಡನ್ನು ಹೆರಬೇಕೆಂದು ಪ್ರಸವವೇದನೆಯಲ್ಲಿದ್ದಾನೆ; ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ, ಶೂನ್ಯವನ್ನೇ ಹೆತ್ತನು ನೋಡಿರಿ.


ಮತ್ತು ಅನೀತಿವಂತರಾದ ಇವರು ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.


ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು? ದೇವರ ಕೃಪೆಯು ಯಾವಾಗಲೂ ಇರುವುದು.


ಅವನ ಬಾಯಿಯು ಶಾಪ, ಬಲಾತ್ಕಾರ ಮತ್ತು ವಂಚನೆಗಳಿಂದ ತುಂಬಿದೆ; ಅವನ ನಾಲಿಗೆಯ ಕೆಳಗೆ ಹಾನಿಯೂ, ನಾಶನವೂ ಇವೆ.


ಅವನು ಇಸ್ರಾಯೇಲರ ಸಮೂಹದವರಿಗೆ, “ನೀವು ಈ ದುಷ್ಟರ ಡೇರೆಗಳ ಬಳಿಯಲ್ಲಿ ಇರದೆ ದೂರ ಹೋಗಬೇಕು; ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬಾರದು; ಇವರ ದೋಷಗಳಿಗಾಗಿ ಉಂಟಾಗುವ ಶಿಕ್ಷೆ ನಿಮ್ಮನ್ನೂ ಕೊಚ್ಚಿಕೊಂಡು ಹೋದೀತು” ಎಂದು ಹೇಳಿದನು.


ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ, ನಾನು ದುಷ್ಟರೊಡನೆ ಸೇರಿ ಕೆಟ್ಟ ಕೆಲಸಗಳನ್ನು ನಡೆಸದಂತೆಯೂ ನನ್ನನ್ನು ಕಾಪಾಡು. ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು