Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು; ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಶತ್ರುಗಳ ದೂಷಣೆಗೆ ಗುರಿಯಾದೆ, ನೆರೆಯವರಿಗೆ ನಿಂದಾಸ್ಪದನಾದೆ I ಮಿತ್ರರೂ ಬೆದರುವಂತಾದೆ; ದಾರಿಹೋಕರು ದೂರವಾಗುವಂತಾದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು; ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ವೈರಿಗಳು ನನ್ನನ್ನು ಕೀಳಾಗಿ ಕಾಣುತ್ತಿದ್ದಾರೆ; ನನ್ನ ನೆರೆಹೊರೆಯವರೂ ನನ್ನನ್ನು ನಿಂದಿಸುವರು; ನನ್ನ ಸಂಬಂಧಿಕರೂ ನನ್ನ ವಿಷಯದಲ್ಲಿ ಭಯಪಡುವರು; ನನ್ನನ್ನು ದಾರಿಯಲ್ಲಿ ಕಂಡರೂ ಕಾಣದಂತೆ ಹೊರಟುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನ್ನ ವೈರಿಗಳೆಲ್ಲರ ನಿಮಿತ್ತವಾಗಿ ನನ್ನ ನೆರೆಯವರಿಗೆ ನಾನು ನಿಂದೆಯೂ, ಮಿತ್ರರಿಗೆ ಹೆದರಿಕೆಯೂ ಆಗಿದ್ದೇನೆ; ದಾರಿಯಲ್ಲಿ ನನ್ನನ್ನು ಕಂಡವರು ನನ್ನನ್ನು ಬಿಟ್ಟು ಓಡಿಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:11
24 ತಿಳಿವುಗಳ ಹೋಲಿಕೆ  

ನನ್ನ ಆಪ್ತಸ್ನೇಹಿತರು ಮತ್ತು ಜೊತೆಗಾರರು, ನನ್ನ ರೋಗವನ್ನು ನೋಡಿ ಓರೆಯಾಗಿ ಹೋಗುತ್ತಾರೆ; ನನ್ನ ಬಂಧುಗಳು ದೂರ ನಿಲ್ಲುತ್ತಾರೆ.


ನನ್ನ ಆಪ್ತರು ನನ್ನನ್ನು ನೋಡಿ ಅಸಹ್ಯಪಟ್ಟರು, ನನ್ನನ್ನು ಅವರು ಹೇಸಿ ಬಿಟ್ಟುಹೋಗುವಂತೆ ಮಾಡಿದ್ದೀ; ಸಿಕ್ಕಿಬಿಟ್ಟಿದ್ದೇನೆ, ಬಿಡಿಸಿಕೊಳ್ಳಲಾರೆನು.


ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ನನ್ನ ಆಪ್ತಮಿತ್ರರನ್ನು ದೂರಮಾಡಿದಿ; ಅಂಧಕಾರವೇ ನನ್ನ ಒಡನಾಡಿ.


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ, ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ, “ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.”


ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಅವರು ಎಡವಿಬೀಳುವರು; ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು.


ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು. ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.


ಆದ್ದರಿಂದ ನಾವು ಆತನ ನಿಮಿತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ, ಪಾಳೆಯದ ಆಚೆ ಆತನ ಬಳಿಗೆ ಹೊರಟುಹೋಗೊಣ.


ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು, ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು.


ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.


ಯಾಕೆಂದರೆ ಕ್ರಿಸ್ತನು ಸಹ ತನ್ನ ಹಿತಕ್ಕಾಗಿ ಚಿಂತಿಸಲಿಲ್ಲ. “ದೇವರೇ ನಿನ್ನನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೂ ಬಂದವು” ಎಂದು ಬರೆದಿದೆಯಲ್ಲಾ.


ಆಗ ಆತನ ಸಂಗಡವಿದ್ದವರೆಲ್ಲರು ಆತನನ್ನು ಬಿಟ್ಟು ಓಡಿಹೋದರು.


ಅವನು, “ಶಾಪಹಾಕಿಕೊಳ್ಳುವುದಕ್ಕೆ ಪ್ರಾರಂಭಿಸಿ ಆಣೆಯಿಟ್ಟು, ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು. ಕೂಡಲೇ ಹುಂಜವೂ ಕೂಗಿತು.


ಮಗನು ತಂದೆಯನ್ನು ತುಚ್ಛೀಕರಿಸುತ್ತಾನೆ. ಮಗಳು ತಾಯಿಗೆ ಎದುರೇಳುತ್ತಾಳೆ. ಸೊಸೆಯು ಅತ್ತೆಯನ್ನು ವಿರೋಧಿಸುತ್ತಾಳೆ. ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.


ನಿನ್ನ ಸಹೋದರರೂ, ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹಮಾಡಿದ್ದಾರೆ. ಇವರೇ ನಿನ್ನ ಬೆನ್ನಟ್ಟುತ್ತಾ ಕೂಗುತ್ತಾರೆ; ಒಳ್ಳೆಯ ಮಾತನಾಡಿದರೂ ಇವರನ್ನು ನಂಬಬೇಡ” ಎಂದು ಹೇಳಿದ್ದಾನೆ.


ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು