Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯಾರು ನೀತಿವಂತರನ್ನು ತಾತ್ಸಾರಮಾಡಿ ಗರ್ವದಿಂದಲೂ, ಕೊಬ್ಬಿನಿಂದಲೂ ಅವರಿಗೆ ವಿರುದ್ಧವಾಗಿ ಸುಳ್ಳು ಹೇಳುತ್ತಾರೋ ಅವರ ತುಟಿಗಳು ಮುಚ್ಚಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸೇದಿಹೋಗಲಿ ಸಜ್ಜನರ ವಿರುದ್ಧ ಸುಳ್ಳಾಡುವ ನಾಲಿಗೆ I ಬಿದ್ದುಹೋಗಲಿ, ಸೊಕ್ಕಿನಿಂದವರನು ಧಿಕ್ಕರಿಸುವ ನಾಲಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯಾರು ನೀತಿವಂತರನ್ನು ತಾತ್ಸಾರಮಾಡಿ ಗರ್ವದಿಂದಲೂ ಕೊಬ್ಬಿನಿಂದಲೂ ಅವರಿಗೆ ವಿರೋಧವಾಗಿ ಸುಳ್ಳು ಹೇಳುತ್ತಾರೋ ಅವರ ತುಟಿಗಳು ಮುಚ್ಚಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಕೆಡುಕರು ಜಂಬಕೊಚ್ಚಿಕೊಳ್ಳುತ್ತಾ ಒಳ್ಳೆಯವರ ಬಗ್ಗೆ ಸುಳ್ಳು ಹೇಳುವರು. ಅವರು ದುರಹಂಕಾರಿಗಳಾಗಿದ್ದಾರೆ; ಅವರ ಸುಳ್ಳುತುಟಿಗಳು ಮೌನಗೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ, ಕಠಿಣವಾಗಿಯೂ ಮಾತನಾಡುವ ಸುಳ್ಳಿನ ತುಟಿಗಳು ಮೌನವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:18
22 ತಿಳಿವುಗಳ ಹೋಲಿಕೆ  

ಎಲ್ಲರಿಗೂ ನ್ಯಾಯತೀರಿಸುವುದಕ್ಕೂ, ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಹೇಳಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರನ್ನು ಖಂಡಿಸುವುದಕ್ಕೆ ಬಂದಿರುವನು” ಎಂಬುದಾಗಿ ಪ್ರವಾದಿಸಿದನು.


ಕೆಡುಕರೆಲ್ಲರು ಉಬ್ಬಿಕೊಂಡು, ಅಹಂಕಾರವನ್ನು ಕಕ್ಕುತ್ತಾರೆ.


“ಇನ್ನು ಮುಂದೆ ಗರ್ವದಿಂದ ಮಾತನಾಡಬೇಡಿರಿ; ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ. ದೇವರಾದ ಯೆಹೋವನು ಸರ್ವಜ್ಞನು; ಆತನು ಮನುಷ್ಯರ ಕ್ರಿಯೆಗಳನ್ನು ತೂಗಿನೋಡುವನು.


ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ ಹೊರಗಿರುವರು” ಎಂದು ಹೇಳಿದನು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.


ಅವನು ಬಂದ ಮೇಲೆ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು, ಅವನ ಸುತ್ತಲು ನಿಂತುಕೊಂಡು ತಾವು ಸಾಬೀತುಪಡಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು,


ಅದಕ್ಕೆ ಯೆಹೂದ್ಯರು, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೋ?” ಎಂದು ಕೇಳಿದರು.


ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.


ಆದರೆ ಫರಿಸಾಯರು ಅದನ್ನು ಕೇಳಿ, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಯೇ ಹೊರತು ಬೇರೆ ರೀತಿಯಿಂದ ಅಲ್ಲ” ಅಂದರು.


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.


ಸತ್ಯದ ತುಟಿ ಶಾಶ್ವತ, ಸುಳ್ಳಿನ ನಾಲಿಗೆ ಕ್ಷಣಿಕ.


ಯೆಹೋವನೇ, ಸುಳ್ಳು ಬಾಯಿಯೂ, ವಂಚಿಸುವ ನಾಲಿಗೆ ಉಳ್ಳವರಿಂದ ನನ್ನನ್ನು ಬಿಡಿಸು.


ಆದರೆ ಅರಸನೋ ದೇವರಲ್ಲಿ ಆನಂದಿಸುವನು, ದೇವರ ಮೇಲೆ ಆಣೆಯಿಡುವವರೆಲ್ಲರು ಸುಳ್ಳುಬಾಯಿ ಮುಚ್ಚಿಹೋಗುವುದನ್ನು ಕಂಡು ಹಿಗ್ಗುವರು.


ಅವರ ಬಾಯಿಂದ ಬರುವುದೆಲ್ಲಾ ಪಾಪದ ಮಾತೇ. ಅವರ ಅಹಂಕಾರದಿಂದಲೇ ಅವರು ಸಿಕ್ಕಿಬೀಳಲಿ.


ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ.


ಸನ್ಹೇರೀಬನು ದೇವರಾದ ಯೆಹೋವನಿಗೂ ಆತನ ಸೇವಕನಾದ ಹಿಜ್ಕೀಯನಿಗೂ ವಿರುದ್ಧವಾಗಿ ಆಡಿದ ಈ ಮಾತುಗಳನ್ನು ತನ್ನ ಸೇವಕರ ಮುಖಾಂತರ ಹೇಳಿ ಕಳುಹಿಸಿದನು.


ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?


ನಿಷ್ಕಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು, ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು