Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 32:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯಾರ ದ್ರೋಹವು ಪರಿಹಾರವಾಗಿದೆಯೋ, ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯಾರ ಪಾಪ ಪರಿಹಾರವಾಗಿದೆಯೋ I ಯಾರ ದ್ರೋಹ ವಿಮೋಚನೆಯಾಗಿದೆಯೋ - ಅವರೇ ಧನ್ಯರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯಾವನ ದ್ರೋಹವು ಪರಿಹಾರವಾಗಿದೆಯೋ ಯಾವನ ಪಾಪವು ಕ್ಷವಿುಸಲ್ಪಟ್ಟಿದೆಯೋ ಅವನೇ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯಾವನ ಪಾಪಗಳು ಕ್ಷಮಿಸಲ್ಪಟ್ಟಿವೆಯೋ ಯಾವನ ದ್ರೋಹಗಳು ಅಳಿಸಲ್ಪಟ್ಟಿವೆಯೋ ಅವನೇ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯಾರ ಉಲ್ಲಂಘನೆಗಳು ಕ್ಷಮಿಸಲಾಗಿವೆಯೋ, ಯಾರ ಪಾಪಗಳು ಮುಚ್ಚಲಾಗಿವೆಯೋ ಅವರೇ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 32:1
27 ತಿಳಿವುಗಳ ಹೋಲಿಕೆ  

ನಿನ್ನ ದ್ರೋಹಗಳನ್ನು ಮೋಡದಂತೆ ನಿವಾರಿಸಿದ್ದೇನೆ. ನಿನ್ನ ಪಾಪಗಳನ್ನು ಮಂಜಿನಂತೆ ಕರಗಿಸಿದ್ದೇನೆ, ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.


ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ; ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದಿ. ಸೆಲಾ


ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.


“ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.


ಯಾರು ಅಹಂಕಾರಿಗಳ ಜೊತೆಯಲ್ಲಿಯೂ, ಸುಳ್ಳುದೇವರನ್ನು ಹಿಂಬಾಲಿಸುವವರಲ್ಲಿಯೂ ಸೇರದೆ, ಯೆಹೋವನನ್ನೇ ನಂಬುತ್ತಾನೋ, ಅವನೇ ಧನ್ಯನು.


ಯಾವಾಗಲೂ ನ್ಯಾಯವನ್ನು ಕಾಪಾಡುವವರೂ, ನೀತಿಯನ್ನು ಪಾಲಿಸುವವರೂ ಧನ್ಯರು.


ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.


ದುರ್ಮತಿಗಳು, “ದೇವರಿಲ್ಲ” ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟವರು; ಅಸಹ್ಯವಾದ ಅಕ್ರಮಗಳನ್ನು ನಡೆಸುತ್ತಾರೆ; ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.


ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ, ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ.


ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.


ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.


ಉತ್ಸಾಹಧ್ವನಿಯನ್ನು ತಿಳಿದಿರುವ ಜನರು ಧನ್ಯರು; ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ.


ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.


ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು? ದೇವರ ಕೃಪೆಯು ಯಾವಾಗಲೂ ಇರುವುದು.


ಒಂದು ದಿವ್ಯ ವಿಷಯವನ್ನು ಹೇಳುವುದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೆಯ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.


ದೇವರೇ, ನನ್ನ ಮೊರೆಯನ್ನು ಲಾಲಿಸು; ನನ್ನ ವಿಜ್ಞಾಪನೆಗೆ ಕಿವಿಮುಚ್ಚಿಕೊಳ್ಳಬೇಡ.


ಅವರ ಅಪರಾಧವನ್ನು ಕ್ಷಮಿಸಬೇಡ; ನಿನ್ನೆದುರಿಗಿರುವ ಅವರ ಅಪರಾಧವನ್ನು ಅಳಿಸಿಬಿಡಬೇಡ. ಕಟ್ಟುವವರ ಮುಂದೆಯೇ ಅವರು ನಿನ್ನನ್ನು ಕೆಣಕಿ ಕೋಪಗೊಳಿಸಿದ್ದಾರಲ್ಲಾ.


ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇನೆ” ಎಂದು ಹೇಳಿದನು. ನಾತಾನನು ಅವನಿಗೆ “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ, ನೀನು ಸಾಯುವುದಿಲ್ಲ.


ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ, ಸಮಸ್ತ ರೋಗಗಳನ್ನು ವಾಸಿಮಾಡುವವನೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು